Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಮಾಜದ ಪ್ರೋತ್ಸಾಹ ಇದ್ದರೆ ಸಾಧನೆ ಮಾಡಲು...

ಸಮಾಜದ ಪ್ರೋತ್ಸಾಹ ಇದ್ದರೆ ಸಾಧನೆ ಮಾಡಲು ಸಾಧ್ಯ: ವೀರಪ್ಪ ಮೊಯ್ಲಿ

ವಾರ್ತಾಭಾರತಿವಾರ್ತಾಭಾರತಿ6 April 2025 6:02 PM IST
share
ಸಮಾಜದ ಪ್ರೋತ್ಸಾಹ ಇದ್ದರೆ ಸಾಧನೆ ಮಾಡಲು ಸಾಧ್ಯ: ವೀರಪ್ಪ ಮೊಯ್ಲಿ

ಉಡುಪಿ, ಎ.6: ಒಬ್ಬರ ಯಶಸ್ಸಿನ ಹಿಂದೆ ಸಮಾಜದ ಬೆಂಬಲ ಅತೀ ಅಗತ್ಯವಾಗಿದೆ. ಯಶಸ್ಸಿಗೆ ಸಮಾಜದವರ, ಹೊರಗಿನವರ ಸಹಕಾರ ಪ್ರೋತ್ಸಾಹ ಇದ್ದರೆ ಸಾಧನೆ ಮಾಡಲು ಸಾಧ್ಯ. ನಮ್ಮ ಸಮಾಜದಲ್ಲಿನ ಸರಸ್ವತಿಯನ್ನು ಉಳಿಸಬೇಕಾದದು ನಮ್ಮ ಮುಂದಿನ ಜನಾಂಗದ ಕಾರ್ಯವಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಡಾ.ವೀರಪ್ಪಮೊಯಿಲಿ ಹೇಳಿದ್ದಾರೆ.

ದೇವಾಡಿಗ ಸಂಘ ಮುಂಬಯಿಯು ಶತಮಾನೋತ್ಸವ ಅಂಗವಾಗಿ ್ಠನವಿ ಮುಂಬಯಿಯ ನೆರುಲ್‌ನ ದೇವಾಡಿಗ ಭವನದಲ್ಲಿ ಹಮ್ಮಿಕೊಳ್ಳಲಾದ ಸಮಾಜದ ಸಾಧಕರಿಗೆ ಹಾಗೂ ಗಣ್ಯರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪರಂಪರೆಗೆ ಇತಿಹಾಸವಿದೆ. ಯಾವುದೇ ಕಾರ್ಯಕ್ರಮಕ್ಕೆ ಮಂಗಳ ವಾದ್ಯ ನಡೆಯಬೇಕಿದ್ದರೆ ಅದು ದೇವಾಡಿಗ ಸಮಾಜ ದವರಿಂದ ಮಾತ್ರವಾಗಿದೆ. ಸ್ವಾತಂತ್ರ ಪೂರ್ವದ ಕಾಲದಲ್ಲಿ ನಮ್ಮ ಹಿರಿಯರು ಬಹಳ ಕಷ್ಟದ ದಿನಗಳಲ್ಲಿ ಸಮಾಜಕ್ಕೆ ಶಕ್ತಿ ತುಂಬ ಉದ್ದೇಶದಿಂದ ಸಂಘ ಸ್ಥಾಪಿಸಿದರು. ಇನ್ನಷ್ಟು ಬಲಿಷ್ಠಗೊಳಿಸುವ ಕಾರ್ಯಕ್ಕೆ ಯುವ ಸಮುದಾಯ ಮುಂದೆ ಬರಬೇಕು ಎಂದರು.

ಶತಮಾನೋತ್ಸವ ಆಚರಣೆ ಸಮಿತಿಯ ಕಾರ್ಯಾಧ್ಯಕ್ಷ, ವಿಶ್ವ ದೇವಾಡಿಗ ಸಂಘದ ಅಧ್ಯಕ್ಷ ಧರ್ಮಪಾಲ್ ಯು.ದೇವಾಡಿಗ ಮಾತನಾಡಿ, 1925ರಲ್ಲಿ ಮುಂಬೈಗೆ ಆಗಮಿಸಿದ ನಮ್ಮ ಹಿರಿಯರು ದೇವಾಡಿಗ ಸಮಾಜವನ್ನು ಸ್ಥಾಪಿಸುವ ಕನಸ್ಸನ್ನು ನನಸಾಗಿಸಿದ್ದು, ಆಗಿನ ನಮ್ಮ ಹಿರಿಯರು ಬಹಳ ಕಷ್ಟಪಟ್ಟು ಇಲ್ಲಿ ದುಡಿದಿದ್ದಾರೆ. ನಮ್ಮ ಊರಿನಿಂದ ಬರುವ ನಮ್ಮ ಸಮಾಜ ಬಾಂಧವರಿಗೆ ಇರಲು, ಕೂಡ ಒಂದು ಸ್ಥಳ ಬೇಕು ಎಂಬ ಉದ್ದೇಶದಿಂದ ಕೂಡಾ ದೇವಾಡಿಗ ಸುಧಾರಕ ಸಂಘವನ್ನು ಅಂದು ಸ್ಥಾಪಿಸಿದರು. ಬ್ರಿಟಿಷರ ಕಾಲದಲ್ಲಿ ನಮ್ಮ ಸಮಾಜದ ಹಿರಿಯರು ಈ ಸಂಘಟನೆ ಸ್ಥಾಪಿಸಿದ್ದು ನಿಜಕ್ಕೂ ಅಭಿನಂದನಾರ್ಹ ಎಂದರು.

ಕರ್ನಾಟಕ ರಾಜ್ಯ ದೇವಾಡಿಗ ಸಂಘ ಮಂಗಳೂರು ಅಧ್ಯಕ್ಷ ಅಶೋಕ್ ಮೊಯ್ಲಿ, ದೇವಾಡಿಗ ಸಂಘ ಬೆಂಗಳೂರು ಅಧ್ಯಕ್ಷ ರಮೇಶ್ ಎನ್.ದೇವಾಡಿಗ, ಉಡುಪಿ ದೇವಾಡಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಗಣೇಶ್ ದೇವಾಡಿಗ ಅಂಬಲಪಾಡಿ, ದುಬೈ ಅಕ್ಮೆ ಬಿಲ್ಡಿಂಗ್ ಮೆಟೀರಿಯಲ್ ಟ್ರೇಡಿಂಗ್ ಸಿಎಂಡಿ ಹರೀಶ್ ಶೇರಿಗಾರ್, ದುಬೈ ದೇವಾಡಿಗ ಸಂಘದ ಅಧ್ಯಕ್ಷ ದಿನೇಶ್ ಕುಮಾರ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ವಿಶ್ವಾಸ್ ಎಂ.ಅತ್ತಾವರ್, ದುಬೈ ಈದ್ ಅಲ್ ಬಸ್ತಿ ಮುಕ್ತ ಎಲ್‌ಎಲ್ಸಿಯ ನಾರಾಯಣ್ ದೇವಾಡಿಗ, ಭಾಸ್ಕರ್ ಶೇರಿಗಾರ್ ಯುಎಸ್‌ಎ, ದುಬೈ ಉದ್ಯಮಿ ದಿನೇಶ್ ಸಿ ದೇವಾಡಿಗ, ಬಾರಕೂರು ಶ್ರೀಏಕನಾಥೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಅಣ್ಣಯ್ಯ ಬಿ.ಶೇರಿಗಾರ್, ಹರೀಶ್‌ಚಂದ್ರ ದೇವಾಡಿಗ ದುಬೈ, ಉದ್ಯಮಿಗಳಾದ ನಾಗರಾಜ್ ಜಿ.ದೇವಾಡಿಗ, ನರೇಶ್ ಮೊಯ್ಲಿ, ಮಹಾಬಲ ದೇವಾಡಿಗ, ಮಂಗಳೂರಿನ ಎಸ್‌ಡಿಎಂ ಬಿಸಿನೆಸ್ ಮ್ಯಾನೇಜ್ಮೆಂಟ್ ಕಾಲೇಜ್ ಮಾಜಿ ನಿರ್ದೇಶಕ ಡಾ.ದೇವರಾಜ್ ಕಂಕನಾಡಿ, ಬೆಂಗಳೂರಿನ ಎಚ್.ಎಸ್. ದೇವಾಡಿಗ, ಹರ್ಷ ಮೊಯ್ಲಿ, ಪ್ರಮೀಳಾ ಪ್ರವೀಣ್ ದೇವಾಡಿಗ, ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಮಾಜದ ಗಣ್ಯರನ್ನು ಹಾಗೂ ಸಂಘದಲ್ಲಿ ಸೇವೆ ಸಲ್ಲಿಸಿದ ಹಿರಿಯರನ್ನು ಗೌರವಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಮಾಜ ಬಾಂಧವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶತಮಾನೋತ್ಸವ ಆಚರಣೆಯ ಸಮಿತಿಯ ಮುಖ್ಯ ಸಂಯೋಜಕ ಹಿರಿಯಡ್ಕ ಮೋಹನ್‌ದಾಸ್ ಶುಭ ಹಾರೈಸಿದರು.

ದೇವಾಡಿಗ ಸಂಘ ಮುಂಬೈ ಅಧ್ಯಕ್ಷ ಪ್ರವೀಣ್ ದೇವಾಡಿಗ ಸ್ವಾಗತಿಸಿದರು. ಅಶ್ವಿನಿ ದೇವಾಡಿಗ ಹಾಗೂ ಸೋನಾಲಿ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ವಿಶ್ವನಾಥ್ ದೇವಾಡಿಗ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X