Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತುಳು ಕಾಲಮಾನದ ‘ಕಾಲಕೋಂದೆ’ ಕ್ಯಾಲಂಡರ್...

ತುಳು ಕಾಲಮಾನದ ‘ಕಾಲಕೋಂದೆ’ ಕ್ಯಾಲಂಡರ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ15 April 2025 9:11 PM IST
share
ತುಳು ಕಾಲಮಾನದ ‘ಕಾಲಕೋಂದೆ’ ಕ್ಯಾಲಂಡರ್ ಬಿಡುಗಡೆ

ಉಡುಪಿ, ಎ.15: ಕರ್ನಾಟಕ ಕರಾವಳಿಯ ‘ತುಳುನಾಡು’ನಲ್ಲಿ ಎ.14ರ ಸೋಮವಾರದಂದು ಸೌರಮಾನ ಯುಗಾದಿಯೊಂದಿಗೆ ತುಳುವರ ಹೊಸ ವರ್ಷದ ಆಚರಣೆಯೂ ನಡೆಯಿತು. ಇದೇ ಸಂದರ್ಭದಲ್ಲಿ ಇಲ್ಲಿನ ಜೈ ತುಳುನಾಡು ಸಂಘಟನೆ ತುಳು ಕಾಲಮಾನದ ಪ್ರಕಾರ ತಯಾರಿಸಿರುವ ‘ಕಾಲಕೋಂದೆ’ ಕ್ಯಾಲಂಡರ್‌ನ್ನು ಬಿಡುಗಡೆಗೊಳಿಸಲಾಯಿತು.

ಉಡುಪಿಯ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ತುಳುನಾಡಿನ ಅಳುಪರ ವಂಶಸ್ಥರಾಗಿರುವ ಡಾ.ಆಕಾಶ್‌ರಾಜ್ ಜೈನ್ ಅವರು ‘ಕಾಲಕೋಂದೆ’ ಕ್ಯಾಲಂಡರ್‌ನ್ನು ಬಿಡುಗಡೆಗೊಳಿಸಿದರು.

ತುಳು ಕಾಲಮಾನದಂತೆ ಯುಗಾದಿಯೊಂದಿಗೆ ತುಳುವರ ಹೊಸ ವರ್ಷ (ಎಪ್ರಿಲ್ ಮಧ್ಯಭಾಗದಲ್ಲಿ) ಪ್ರಾರಂಭಗೊಳ್ಳುತ್ತದೆ. ಇದೇ ಮೊದಲ ಬಾರಿಗೆ ಜೈ ತುಳುನಾಡು ಸಂಘಟನೆ ಉಡುಪಿ ಘಟಕ ತುಳು ದಿನಾಂಕ ಹಾಗೂ ಮಾಸದೊಂದಿಗೆ ನಮೂದಿಸಿದ ಈ ಕ್ಯಾಲೆಂಡರ್‌ನ್ನು ತಯಾರಿಸಿದೆ. ಕ್ಯಾಲೆಂಡರ್‌ನಲ್ಲಿ ತುಳು ಭಾಷೆಯಲ್ಲಿ ದಿನಾಂಕ ಹಾಗೂ ಆಚರಣೆಗಳನ್ನು ನಮೂದಿಸಲಾಗಿದೆ.

ಇದರಂತೆ ಪ್ರತಿ ತಿಂಗಳ ಆರಂಭದ ದಿನವು ಸಂಕ್ರಾಂತಿಯ ಮರುದಿನವಾ ಗಿರುತ್ತದೆ. ಈ ಮೊದಲ ದಿನ ವನ್ನು ತುಳುವಿನಲ್ಲಿ ‘ಸಿಂಗೊಡೆ’ ಎಂದು ಕರೆಯುತ್ತಾರೆ. ಈ ಸೌರಮಾನ ಯುಗಾದಿಯಿಂದ ಮುಂದಿನ ಸೌರಮಾನ ಯುಗಾದಿಯವರೆಗೆ ತುಳುವರ ಒಂದು ವರ್ಷ ಪೂರ್ಣಗೊಳ್ಳುತ್ತದೆ. ತುಳುವರ 12 ತಿಂಗಳು ಗಳೆಂದರೆ ಪಗ್ಗು, ಬೇಸ, ಕಾರ್ತೆಲ್, ಆಟಿ, ಸೋನ, ನಿರ್ನಾಲ್(ಕನ್ಯಾ), ಬೊಂತೆಲ್, ಜಾರ್ದೆ, ಪೆರಾರ್ದೆ, ಪುಯಿಂತೆಲ್ (ಪೊನ್ನಿ), ಮಾಯಿ ಹಾಗೂ ಸುಗ್ಗಿ.

ಯುವ ಪೀಳಿಗೆಗೆ ಹಾಗೂ ತೌಳವ ಸಮಾಜಕ್ಕೆ ತಮ್ಮ ಸಂಸ್ಕಾರದ ಅರಿವು ಹಾಗೂ ತುಳು ತಿಂಗಳಿನ ಮೂಲಕ ತಮ್ಮ ಸಂಸ್ಕೃತಿಯ ಒಲವನ್ನು ಬೆಳೆಸುವ ಉದ್ದೇಶದೊಂದಿಗೆ ಕಾಲಕೋಂದೆ ಕ್ಯಾಲೆಂಡರ್‌ನ್ನು ಪ್ರಶಾಂತ್ ಕುಂಜೂರು ವಿನ್ಯಾಸಗೊಳಿಸಿದ್ದಾರೆ ಎಂದು ಜೈ ತುಳುನಾಡು ಉಡುಪಿ ಘಟಕದ ಅಧ್ಯಕ್ಷೆ ಸುಶೀಲಾ ಜಯಕರ್ ತಿಳಿಸಿದರು.

ಈ ವಿಶಿಷ್ಟ ಕ್ಯಾಲೆಂಡರ್‌ನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ.ಆಕಾಶ್ ರಾಜ್ ಜೈನ್, ತುಳುವಿಗೆ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ದೊರಕಲು ಜೈ ತುಳು ನಾಡು ಸಂಘಟನೆಯ ಈ ಪ್ರಯತ್ನ ವಿಶೇಷ ಒತ್ತು ನೀಡಲಿದೆ. ಮುಂದಿನ ದಿನಗಳಲ್ಲಿ ಸಂಘಟನೆ ತುಳು ಪಂಚಾಂಗ ರಚಿಸುವ ಪ್ರಯತ್ನಕ್ಕೂ ಮುಂದಾಗಲಿ ಎಂದು ಹಾರೈಸಿದರು.

ಪತ್ರಿಕಾಗೋಷ್ಠಿಯಲ್ಲಿ ಜೈ ತುಳುನಾಡು ಸಂಘಟನೆಯ ಸಂತೋಷ್ ಎನ್. ಎಸ್.ಕಟಪಾಡಿ, ಪ್ರಶಾಂತ್ ಕುಂಜೂರು, ಶರತ್‌ಕುಮಾರ್ ಕೊಡವೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X