Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಅಗ್ನಿಶಾಮಕ ಸೇವಾ ಸಪ್ತಾಹ,...

ಉಡುಪಿ: ಅಗ್ನಿಶಾಮಕ ಸೇವಾ ಸಪ್ತಾಹ, ಪ್ರಾತ್ಯಕ್ಷಿಕೆ

ವಾರ್ತಾಭಾರತಿವಾರ್ತಾಭಾರತಿ15 April 2025 9:15 PM IST
share
ಉಡುಪಿ: ಅಗ್ನಿಶಾಮಕ ಸೇವಾ ಸಪ್ತಾಹ, ಪ್ರಾತ್ಯಕ್ಷಿಕೆ

ಉಡುಪಿ: ಎ.14ರಿಂದ ಪ್ರಾರಂಭಗೊಂಡು ಎ.20ರವರೆಗೆ ನಡೆಯಲಿರುವ ಅಗ್ನಿ ಶಾಮಕ ಸೇವಾ ಸಪ್ತಾಹದ ಅಂಗವಾಗಿ ಉಡುಪಿಯ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಅಗ್ನಿ ಅಕಸ್ಮಿಕ, ಅದನ್ನು ತಡೆಗಟ್ಟುವ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆಯನ್ನು ಪತ್ರಕರ್ತರೆದುರು ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡಿದ ಪ್ರಭಾರ ಅಗ್ನಿಶಾಮಕ ಅಧಿಕಾರಿ ರವೀಂದ್ರ ಅವರು, ಬೇಸಿಗೆಯ ದಿನವಾಗಿರುವುದರಿಂದ ಜಿಲ್ಲೆಯಲ್ಲಿ ಇತ್ತೀಚೆಗೆ ಬೆಂಕಿ ಅಕಸ್ಮಿಕ, ದುರಂತದ ಘಟನೆಗಳು ಹೆಚ್ಚುತ್ತಿವೆ. ಈ ಬಗ್ಗೆ ಜಿಲ್ಲೆಯ ಎಲ್ಲರೂ ಜಾಗೃತೆ ವಹಿಸಬೇಕಿದೆ ಎಂದರು.

ಕಳೆದ ಜನವರಿ ಒಂದರಿಂದ ಎ.14ರವರೆಗೆ ಜಿಲ್ಲೆಯಲ್ಲಿ 120 ಅಗ್ನಿ ಅಕಸ್ಮಿಕ ಕರೆಗಳನ್ನು ಸ್ವೀಕರಿಸಲಾ ಗಿದೆ. ಅಲ್ಲದೇ 20 ರಕ್ಷಣಾ ಕರೆಯನ್ನೂ ಠಾಣೆಗಳು ಸ್ವೀಕರಿಸಿವೆ. ನಮ್ಮ ಸಿಬ್ಬಂದಿಗಳು ಸರದಿಯಂತೆ ದಿನದ 24 ಗಂಟೆಗಳ ಕಾಲವೂ ಕರ್ತವ್ಯದಲ್ಲಿ ನಿರತರಾಗಿರುತ್ತೇವೆ. ದಿನದ ಯಾವುದೇ ಹೊತ್ತಿನಲ್ಲಿ ಕರೆ ಬಂದರೂ ನಾವು ಎಲ್ಲಾ ಸಿದ್ಧತೆಗಳೊಂದಿಗೆ ತಕ್ಷಣವೇ ಸ್ಥಳಕ್ಕೆ ಧಾವಿಸುತ್ತೇವೆ ಎಂದರು.

ಅಗ್ನಿ ದುರಂತಗಳಂತೆ ನಾವು, ಭೂಕಂಪ, ಕಾಡ್ಗಿಚ್ಚುಗಳ ಬಗ್ಗೆಯೂ ಜಾಗೃತ ರಾಗಿರಬೇಕು. ಅಲ್ಲದೇ ಇತರನ್ನೂ ಜಾಗೃತಗೊಳಿಸಬೇಕು. ಯಾವುದೇ ವಸತಿ ಸಂಕೀರ್ಣದಲ್ಲಿ ಬೆಂಕಿ ಅಕಸ್ಮಿಕ ಸಂಭವಿಸಿದಾಗ, ಅದರಿಂದ ತಪ್ಪಿಸಿಕೊಳ್ಳಲು ಮೇಲಿನ ಮಹಡಿಗೆ, ಬಾಲ್ಕನಿಗಳಿಗೆ ಧಾವಿಸದೇ ಎಲ್ಲರೂ ನೆಲ ಮಹಡಿಗೆ ಬಂದು ಅಲ್ಲಿನ ತೆರೆದ ಪ್ರದೇಶದಲ್ಲಿರಲು ಮೊದಲ ಪ್ರಾಶಸ್ತ್ಯ ನೀಡಬೇಕು ಎಂದು ಕಿವಿಮಾತು ಹೇಳಿದರು.

ಬೆಂಕಿ ದೊಡ್ಡದಿರಲಿ, ಚಿಕ್ಕದಿರಲಿ ಮೊದಲು ಸಹಾಯಕ್ಕಾಗಿ ತಕ್ಷಣವೇ 101ಕ್ಕೆ ಕರೆ ಮಾಡಿ. ಅಥವಾ ನಿಮ್ಮ ಸಮೀಪದ ಅಗ್ನಿಶಾಮಕ ಠಾಣೆಗಳಿಗೆ ಕರೆ ಮಾಡಿ ತಿಳಿಸಿ. ಅಡುಗೆ ಅನಿಲ ಬಳಸುವ ವೇಳೆ, ಅನಿಲದ ಸೋರುವಿಕೆ ಕಂಡಬಂದಾಗ ವಿಶೇಷ ಜಾಗೃತೆ ವಹಿಸಬೇಕು ಎಂದು ರವೀಂದ್ರ ವಿವರಿಸಿದರು.

ಒಂದು ವಾರದ ಅಗ್ನಿಶಾಮಕ ಸೇವಾ ಸಪ್ತಾಹದ ಸಂದರ್ಭದಲ್ಲಿ ಶಾಲಾ-ಕಾಲೇಜುಗಳಿಗೆ, ವಿವಿಧ ಸಂಸ್ಥೆಗಳಿಗೆ, ವಸತಿ ಸಂಕೀರ್ಣಗಳಿಗೆ ತೆರಳಿ ಪ್ರಾತ್ಯಕ್ಷಿಕೆಯ ಮೂಲಕ ಅಗ್ನಿ ಅಕಸ್ಮಿಕದಿಂದ ರಕ್ಷಣೆ ಪಡೆಯುವ ಬಗ್ಗೆ ವಿವರಿಸಲಿದ್ದೇವೆ ಎಂದರು.

ಇದೇ ವೇಳೆ ಪ್ರೆಸ್ ಕ್ಲಬ್‌ನಲ್ಲೂ ಅಗ್ನಿ ಅಕಸ್ಮಿಕದ ಸಂದರ್ಭದಲ್ಲಿ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಾವ ರೀತಿ ಕಾರ್ಯಾಚರಿಸುತ್ತಾರೆ, ವಿವಿಧ ಬಗೆಯ ಬೆಂಕಿಯನ್ನು ಯಾವ ರೀತಿ ನಂದಿಸುತ್ತಾರೆ ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿದರು. ಈ ವೇಳೆ ಹೊಂದಿರಬೇಕಾದ ಎಚ್ಚರಿಕೆ, ಜಾಗೃತಿ ಕುರಿತು ಸಹ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಗ್ಮಿಶಾಮಕ ಅಧಿಕಾರಿ ವಿನಾಯಕ ಕಲ್ಗಟಕರ್, ಫೈಯರ್‌ಮನ್‌ಗಳಾದ ಕೇಶವ, ರಾಘವೇಂದ್ರ ಆಚಾರಿ, ಭರತ್ ಮುಂತಾದವರು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X