Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿಕ್ಷಣದೊಂದಿಗೆ ತುಳು ಸಂಸ್ಕೃತಿ,...

ಶಿಕ್ಷಣದೊಂದಿಗೆ ತುಳು ಸಂಸ್ಕೃತಿ, ಸಂಸ್ಕಾರ ಮೈಗೂಡಿಸಿಕೊಳ್ಳಿ: ತುಳು ಐಸಿರಿಯಲ್ಲಿ ಜಯಕರ ಶೆಟ್ಟಿ ಇಂದ್ರಾಳಿ

ವಾರ್ತಾಭಾರತಿವಾರ್ತಾಭಾರತಿ24 April 2025 9:50 PM IST
share
ಶಿಕ್ಷಣದೊಂದಿಗೆ ತುಳು ಸಂಸ್ಕೃತಿ, ಸಂಸ್ಕಾರ ಮೈಗೂಡಿಸಿಕೊಳ್ಳಿ: ತುಳು ಐಸಿರಿಯಲ್ಲಿ ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ, ಎ.24: ವಿದ್ಯಾರ್ಥಿಗಳು ಶಿಕ್ಷಣಕ್ಕೆ, ಜ್ಞಾನವರ್ಧನೆಗೆ ಒತ್ತು ನೀಡಬೇಕಾಗಿರುವುದು ಸಹಜ. ಇದರೊಂದಿಗೆ ತುಳು ಭಾಷೆ, ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ಮೈಗೂಡಿಸಿಕೊಳ್ಳಲು ಸಹ ಆದ್ಯತೆ ನೀಡುವಂತೆ ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಕರೆ ನೀಡಿದ್ದಾರೆ.

ಉಡುಪಿ ಎಂಜಿಎಂ ಕಾಲೇಜಿನ ವಾರ್ಷಿಕೋತ್ಸವ ಸಂದರ್ಭದಲ್ಲಿ ಆಯೋಜಿಸಲಾಗುವ ‘ತುಳು ಐಸಿರಿ-2025’ರಲ್ಲಿ ಮುಖ್ಯ ಅತಿಥಿಯಾಗಿ ಬಾಗವಹಿಸಿ ಅವರು ಮಾತನಾಡುತಿದ್ದರು.

ಯುವಜನತೆ ಹೆಚ್ಚೆಚ್ಚು ತುಳುವನ್ನು ಬಳಸುವ ಮೂಲಕ ‘ಪೊರ್ಲುದ’ ತುಳು ಭಾಷೆಯನ್ನು ಉಳಿಸಲು ಸಾಧ್ಯ. ಇಂದು ಒಂದನೇ ತರಗತಿಯಿಂದ ಪದವಿವರೆಗೆ ತುಳು ಭಾಷೆ ಕಲಿಯಲು ಸಹ ಅವಕಾಶವಿದೆ. ತುಳುವರು ಇದನ್ನು ಬಳಸಿಕೊಳ್ಳಬೇಕು ಎಂದರು.

ಜೀವನದಲ್ಲಿ ಶಿಕ್ಷಣದೊಂದಿಗೆ ಜ್ಞಾನವೂ ಮುಖ್ಯ. ಇವುಗಳೊಂದಿಗೆ ತುಳು ಸಂಸ್ಕೃತಿ, ಸಂಸ್ಕಾರವನ್ನು ಉಳಿಸಿ, ಬೆಳೆಸುವ ಜವಾಬ್ದಾರಿಯೂ ಇಂದಿನ ಯುವ ತಲೆಮಾರಿನ ಮೇಲಿದೆ. ಎಲ್ಲರೂ ಸೇರಿ ತುಳುವಿನ ಕಂಪನ್ನು ಜಗತ್ತಿನಾದ್ಯಂತ ಪಸರಿಸಬೇಕು ಎಂದು ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ಕಾಲೇಜಿನ ಮುದ್ದಣಮಂಟಪದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ತುಳು ಐಸಿರಿಯನ್ನು ಉದ್ಘಾಟಿಸಿದ ತುಳು ಚಲನಚಿತ್ರ ನಟ ಹಾಗೂ ತುಳು ರಂಗಭೂಮಿ ಕಲಾವಿದ ಪ್ರಸನ್ನ ಶೆಟ್ಟಿ ಬೈಲೂರು ತುಳುವನ್ನು ಜೀವನದ ಭಾಗವಾಗಿಸಿಕೊಳ್ಳುವಂತೆ ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು.

ತುಳುವಿಗೆ ಜಗತ್ತಿನಾದ್ಯಂತ ವಿಶೇಷ ಗೌರವವಿದೆ. ಹೀಗಾಗಿ ವಿದ್ಯೆಯೊಂದಿಗೆ ನೀವು ತುಳುವನ್ನು ಮರೆಯದೇ ಅದನ್ನು ನಿಮ್ಮ ಜೀವನದ ಒಂದು ಅವಿಭಾಜ್ಯ ಅಂಗವಾಗಿರುವಂತೆ ನೋಡಿಕೊಳ್ಳಬೇಕು. ಈ ಮೂಲಕ ತುಳುಭಾಷೆಯ ಬೆಳವಣಿಗೆಯಲ್ಲಿ ನಿಮ್ಮ ಪಾಲಿನ ಕೊಡುಗೆಯೂ ಇರುವಂತಾಗಬೇಕು ಎಂದರು.

ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಡಾ.ವಿಶ್ವನಾಥ ಪೈ ಎಂ., ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ ನಾಯ್ಕ್, ಎಂಜಿಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಾಲತಿ ದೇವಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ.ಅರುಣ್‌ಕುಮಾರ್ ಬಿ. ಸ್ವಾಗತಿಸಿದರೆ, ತುಳು ಸಂಘದ ಸಂಚಾಲಕ ಡಾ.ಪುತ್ತಿ ವಸಂತಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಾದ್ಯಾಪಕ ಸುಚರಿತ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X