ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಎ.25: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿ ಯಿಂದ ಪ್ರಸಕ್ತ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ / ನೀಟ್ನಲ್ಲಿ ಎಂಬಿಬಿಎಸ್, ಬಿಡಿಎಸ್, ಬಿಇ/ ಬಿಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸುಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿ ಗಳಿಂದ ಅರಿವು ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ನಿಗಮದ ವೆಬ್ಸೈಟ್ - & kmdconline.karnataka.gov.in-ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ಅಗತ್ಯ ದಾಖಲಾ ತಿಗಳನ್ನು ಮೇ 23ರ ಒಳಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ಉಡುಪಿ ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂಖ್ಯೆ: 0820-2574990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.







