Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಮುದಾಯ, ಉಪಜಾತಿಗಳನ್ನು ಒಬಿಸಿಗೆ...

ಸಮುದಾಯ, ಉಪಜಾತಿಗಳನ್ನು ಒಬಿಸಿಗೆ ಸೇರ್ಪಡೆಗೊಳಿಸಲು ಆಗ್ರಹ: ವೈಶ್ಯವಾಣಿ ಸಮುದಾಯದಿಂದ ಧರಣಿ

ಮುಖ್ಯಮಂತ್ರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ29 April 2025 7:45 PM IST
share
ಸಮುದಾಯ, ಉಪಜಾತಿಗಳನ್ನು ಒಬಿಸಿಗೆ ಸೇರ್ಪಡೆಗೊಳಿಸಲು ಆಗ್ರಹ: ವೈಶ್ಯವಾಣಿ ಸಮುದಾಯದಿಂದ ಧರಣಿ

ಉಡುಪಿ, ಎ.29: ವೈಶ್ಯವಾಣಿ ಸಮುದಾಯ ಹಾಗೂ ಅದರ ಉಪಜಾತಿ ಗಳನ್ನು ಒಬಿಸಿಗೆ ಸೇರ್ಪಡೆ ಗೊಳಿಸಿ ಹೊರಡಿಸಿರುವ ಸರಕಾರಿ ಆದೇಶವನ್ನು ಗಝೆಟ್ ನೋಟಿಫಿಕೇಷನ್ ಹೊರಡಿಸಿ ಜಾತಿ ಪ್ರಮಾಣ ಪತ್ರ ನೀಡುವಂತೆ ವೈಶ್ಯವಾಣಿ ಸಮುದಾಯ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ತಲ್ಲದೇ, ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿತು.

ಉಡುಪಿ ಜಿಲ್ಲಾ ವೈಶ್ಯವಾಣಿ ಸಮಾಜ ಸಮುದಾಯದ ನೇತೃತ್ವದಲ್ಲಿ ಇಂದು ಮಣಿಪಾಲದ ರಜತಾದ್ರಿ ಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಪ್ರತಿಭಟನೆ ನಡೆಸಲಾಯಿತು. 2023ರ ಮಾರ್ಚ್ 27ರಂದು ತಮ್ಮ ಸಮುದಾಯವನ್ನು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರ್ಪಡೆ ಮಾಡಿ ಹೊರಡಿ ಸಿದ ಸರಕಾರಿ ಆದೇಶದ ಗಝೆಟ್ ನೋಟಿಫಿಕೇಷನ್ ಹೊರಡಿಸುವಂತೆ ಪ್ರತಿಭಟನಕಾರರು ಒಕ್ಕೊರಲಿ ನಿಂದ ಆಗ್ರಹಿಸಿದರು.

ವೈಶ್ಯವಾಣಿ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗ ರಾಜಕೀಯವಾಗಿ ಹಿಂದುಳಿದ ಸಮುದಾಯವಾಗಿದ್ದು, ಕರ್ನಾಟಕದಲ್ಲಿ ಸಮುದಾಯದ ಜನಸಂಖ್ಯೆ ಸುಮಾರು 5ಲಕ್ಷದಷ್ಟಿದೆ. ಜಿಲ್ಲೆಯಲ್ಲಿ ಎಲ್ಲಾ ಉಪಸಮುದಾಯಗಳು ಸೇರಿದರೆ ಜನಸಂಖ್ಯೆ 10ರಿಂದ 15 ಸಾವಿರದಷ್ಟಿದೆ ಎಂದು ಉಡುಪಿ ಜಿಲ್ಲಾ ವೈಶ್ಯವಾಣಿ ಸಮಾಜ ಸಮುದಾಯದ ಅಧ್ಯಕ ವಸಂತ ಕೆ.ನಾಯಕ್ ತಿಳಿಸಿದರು.

ನಮ್ಮದು ಹಿಂದುಳಿದ ಸಮುದಾಯವಾದರೂ, ಸಾಮಾನ್ಯ ವರ್ಗದಲ್ಲೇ ಪರಿಗಣಿಸಲ್ಪಡುತಿದ್ದೇವೆ. ಇದರಿಂದ ನಮ್ಮ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗದ ವೇಳೆ ಜಾತಿ ಸರ್ಟಿಫಿಕೇಟ್ ದೊರೆಯಲು ಸಮಸ್ಯೆಗಳಾಗುತ್ತಿವೆ. ಹೀಗಾಗಿ ಕಳೆದ ಮೂರು ದಶಕಗಳಿಂದ ನಮ್ಮ ಸಮುದಾಯವನ್ನು ಹಿಂದುಳಿದ ವರ್ಗಗಳಿಗೆ ಸೇರ್ಪಡೆಗೊಳಿಸುವಂತೆ ಸರಕಾರವನ್ನು ಆಗ್ರಹಿಸುತ್ತಾ ಬಂದಿದ್ದೇವೆ ಎಂದರು.

ವೈಶ್ಯವಾಣಿ ಸಮುದಾಯದಲ್ಲಿ ಹಿಂದೂ ವೈಶ್ಯ, ಕೊಂಕಣಿ ವಾಣಿ, ಕೊಂಕಣಿ ವೈಶ್ಯ, ಕನ್ನಡ ವೈಶ್ಯ ಇತ್ಯಾದಿಯಾಗಿ 15 ಉಪಜಾತಿಗಳಿವೆ ಎಂದು ಹೇಳಿದ ವಸಂತ ನಾಯಕ್, ನಮ್ಮ ಮನವಿಯನ್ನು ಪರಿಗಣಿಸಿ 2010ರಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಡಾ.ಸಿ.ಎಸ್. ದ್ವ್ವಾರಕನಾಥ ಅವರು ವೈಶ್ಯವಾಣಿ ಸಮುದಾಯ ಹಾಗೂ ಉಪಜಾತಿಗಳನ್ನು ಒಬಿಸಿ 3ಬಿಗೆ ಸೇರ್ಪಡೆಗೊಳಿಸುವಂತೆ ಸರಕಾರಕ್ಕೆ ಶಿಫಾರಸ್ಸು ಮಾಡಿ ವರದಿ ಸಲ್ಲಿಸಿದ್ದರು ಎಂದರು.

ಬಳಿಕ 2013ರಲ್ಲಿ ಎಂ.ಶಂಕರಪ್ಪ ಆಯೋಗ ಕೂಡಾ ನಮ್ಮ ಸುದಾಯದ ಸಮೀಕ್ಷೆ ನಡೆಸಿ ವೈಶ್ಯವಾಣಿ ಸಮುದಾಯವನ್ನು ಒಬಿಸಿಯ 2ಡಿಗೆ ಸೇರ್ಪಡೆ ಗೊಳಿಸಲು ಶಿಫಾರಸ್ಸು ಮಾಡಿ ವರದಿ ಸಲ್ಲಿಸಿದ್ದರು. ಬಳಿಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ ಅವರು ಸಹ ಇದೇ ರೀತಿಯ ಶಿಫಾರಸ್ಸು ಮಾಡಿದ್ದು, ಕೊನೆಗೂ ಸರಕಾರ 2023ರ ಮಾ.27ರಂದು ಒಬಿಸಿಗೆ ಸೇರ್ಪಡೆಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಇನ್ನೂ ಗಝೆಟ್ ನೋಟಿಫಿಕೇಷನ್ ಆಗದೇ ಇನ್ನೂ ಜಾರಿಗೆ ಬಂದಿಲ್ಲ. ಇದರಿಂದ ನಮ್ಮ ಸಮುದಾಯದ ವಿದ್ಯಾರ್ಥಿಗಳು ಸೂಕ್ತ ಜಾತಿ ಸರ್ಟಿಫಿಕೇಟ್ ಸಿಗದೇ ಮೀಸಲಾತಿ ಸೌಲಭ್ಯದಿಂದ ವಂಚಿತರಾಗುತಿದ್ದಾರೆ ಎಂದರು.

ಹೀಗಾಗಿ ಸರಕಾರ ತಕ್ಷಣವೇ ಸರಕಾರಿ ಆದೇಶದ ಗಝೆಟ್ ನೋಟಿಫಿಕೇಷನ್ ಹೊರಡಿಸಿ ನಮಗೂ ಜಾತಿ ಸರ್ಟಿಫಿಕೇಟ್ ದೊರಕುವಂತೆ ಮಾಡುವಂತೆ ಅವಕಾಶ ನೀಡಬೇಕು ಎಂದು ನಾವು ಒತ್ತಾಯಿಸುತಿದ್ದೇವೆ ಎಂದು ವಸಂತ ನಾಯಕ್ ತಿಳಿಸಿದರು.

ಪ್ರತಿಭಟನೆಯಲ್ಲಿ ಸಮಾಜದ ಮುಖಂಡರಾದ ಸುಭಾಷ್‌ಚಂದ್ರ ಸೇಟ್ ಕುಂದಾಪುರ, ಮಹೇಶ್ ಸೇಟ್ ಕೋಟೇಶ್ವರ, ರಾಜೇಶ್ ಜಿ.ಸೇಟ್ ಉಡುಪಿ, ಭಾಗ್ಯಲಕ್ಷ್ಮೀ ನಾಯಕ್ ಬೈಂದೂರು, ಪೂರ್ಣೇಶ್ ಪ್ರಭು ಹುಣ್ಸೆಮಕ್ಕಿ, ವೆಂಕಟೇಶ್ ನಾಯಕ್, ಮಂಜುನಾಥ್ ಸೇಟ್ ಕುಂದಾಪುರ, ಮಂಜುಳಾ ವಿ.ನಾಯಕ್, ಅರುಣ್ ಸೇಟ್ ಹೆಬ್ರಿ, ಹರೀಶ್ ಗಾಂವ್ಸ್ ಪೆರ್ಡೂರು ಮುಂತಾದವರು ಭಾಗವಹಿಸಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X