ಭಾರತೀಯ ಸೈನಿಕರಿಗಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ

ಉಡುಪಿ, ಮೇ 9: ಕಾಶ್ಮೀರದಲ್ಲಿನ ಘಟನೆಗೆ ಪ್ರತಿಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಭಾರತೀಯ ಸೈನಿಕರ ನೈತಿಕ ಸ್ಥೈರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವರ ಸೂಚನೆಯಂತೆ ಶುಕ್ರವಾರ ಉಡುಪಿ ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಜುಮ್ಮಾ ನಮಾಝಿನ ಬಳಿಕ ಉಡುಪಿ ಜಾಮೀಯ ಮಸೀದಿಯ ಇಮಾಮ್ ಮೌಲಾನ ಅಬ್ದುರ್ರಶೀದ್ ನದ್ವಿ, ಬ್ರಹ್ಮಗಿರಿ ನಾಯರ್ಕೆರೆ ಹಾಶ್ಮಿ ಮಸೀದಿಯ ಇಮಾಮ್ ಉಬೇದ್ರುಹಮಾನ್ ನದ್ವಿ ಸೇರಿದಂತೆ ವಿವಿಧ ಮಸೀದಿಗಳ ಖತೀಬ್, ಇಮಾಮ್ಗಳು, ದೇಶಕ್ಕಾಗಿ ಹೋರಾಟ ನಡೆಸುತ್ತಿರುವ ಭಾರತೀಯ ಸೇನೆಯ ಸೈನಿಕರಿಗೆ ದೇವರು ಇನ್ನಷ್ಟು ಬಲ ನೀಡಲಿ ಮತ್ತು ದೇಶದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲಿ ಎಂದು ಪ್ರಾರ್ಥಿಸಿದರು.
ಕಾಪು, ಪಡುಬಿದ್ರಿ, ಕಾರ್ಕಳ, ಕುಂದಾಪುರ, ಬ್ರಹ್ಮಾವರ, ಮಲ್ಪೆ ಸೇರಿದಂತೆ ಎಲ್ಲ ಮಸೀದಿಗಳಲ್ಲಿ ಜುಮಾ ನಮಾಝಿನ ಬಳಿಕ ಭಾರತೀಯ ಸೈನಿಕರಿಗಾಗಿ ವಿಶೇಷ ದುವಾ ನೆರವೇರಿಸಲಾಯಿತು.
Next Story