Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಪು ಯೋಜನಾ ಪ್ರಾಧಿಕಾರದಲ್ಲಿ ದಲ್ಲಾಳಿಗಳ...

ಕಾಪು ಯೋಜನಾ ಪ್ರಾಧಿಕಾರದಲ್ಲಿ ದಲ್ಲಾಳಿಗಳ ಹಾವಳಿ: ಕ್ರಮಕ್ಕೆ ಒತ್ತಾಯಿಸಿ ಡಿಸಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ20 May 2025 5:49 PM IST
share
ಕಾಪು ಯೋಜನಾ ಪ್ರಾಧಿಕಾರದಲ್ಲಿ ದಲ್ಲಾಳಿಗಳ ಹಾವಳಿ: ಕ್ರಮಕ್ಕೆ ಒತ್ತಾಯಿಸಿ ಡಿಸಿಗೆ ಮನವಿ

ಕಾಪು, ಮೇ 20: ಕಾಪು ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದಲ್ಲಿ ಜನಸಾಮಾನ್ಯರಿಗೆ ತ್ವರಿತವಾದ ಸೇವೆ ಸಿಗುವಂತಾಗಲು ಹಲವು ಬದಲಾವಣೆಗಳನ್ನು ಕಡ್ಡಾಯ ಮಾಡಿ ಜಾರಿಗೊಳಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘ ಸೋಮವಾರ ಕಾಪು ತಹಶೀಲ್ದಾರ್ ಮೂಲಕ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಕಾಪು ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದಲ್ಲಿ ಜನಸಾಮಾನ್ಯರ ಅರ್ಜಿ ವಿಲೇವಾರಿಗೆ ಸರಿಯಾದ ವ್ಯವಸ್ಥೆಯೇ ಇಲ್ಲ. ಇಲ್ಲಿ ಪ್ರತಿದಿನ ನೂಕು ನುಗ್ಗಲು ಇದೆ. ಒಮ್ಮೆಗೆ 5-10 ಅರ್ಜಿಗಳನ್ನು ತರುವ ದಲ್ಲಾಳಿಗಳ ಹಾವಳಿಯಿಂದ ಸಮಸ್ಯೆ ಆಗುತ್ತಿದೆ. ನೇರವಾಗಿ ಅರ್ಜಿ ಸಲ್ಲಿಸಲು ಹೋದವರನ್ನು ಕೇಳುವವರೇ ಇಲ್ಲ. ಬೆಳಗ್ಗಿನಿಂದ ಸಂಜೆಯವರೆಗೆ ಕಾಯುವ ಪರಿಸ್ಥಿತಿ ಎದುರಾಗಿದೆ. 10-12 ಬಾರಿ ಕಚೇರಿಗೆ ಬಂದರೂ ಯೋಜನಾ ಪ್ರಾಧಿಕಾರದ ಅಧಿಕಾರಿಯ ಭೇಟಿ ಸಾಧ್ಯವಾಗುತ್ತಿಲ್ಲ ಎಂದು ಸಂಘ ಮನವಿಯಲ್ಲಿ ಆರೋಪಿಸಿದೆ.

ಪ್ರಮುಖ ಬೇಡಿಕೆಗಳು: ಪ್ರಾಧಿಕಾರದ ಕಚೇರಿಗೆ ನೇರವಾಗಿ ಬರುವ ಅರ್ಜಿದಾರರೊಂದಿಗೆ ವಿನಯ ಮತ್ತು ಸೌಜನ್ಯದಿಂದ ವರ್ತಿಸುವಂತೆ ಪ್ರಾಧಿಕಾರದ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ನಿರ್ದೇಶ ನೀಡಬೇಕು. ಅರ್ಜಿಯ ಸ್ವೀಕಾರ ಮತುತಿ ಸ್ಥಿತಿಗತಿಯ ಬಗ್ಗೆ ರಿಜಿಸ್ಟರ್ ನಿರ್ವಹಣೆ ಮಾಡಬೇಕು. ಅರ್ಜಿಯ ಜೊತೆ ಯಾವುದೆಲ್ಲ ದಾಖಲೆಗಳ ಅಗತ್ಯವಿರುವುದೆಂದು ಪರಿಶೀಲಿಸಿ, ಅರ್ಜಿದಾರರಿಗೆ ಆಗಲೇ ತಿಳಿಸಬೇಕು.

ಕ್ರಮವತ್ತಾಗಿ ಕಚೇರಿಯನ್ನು ಸಂಪರ್ಕಿಸುವ ದಿನ ಮತ್ತು ಸಮಯವನ್ನು ದೂರವಾಣಿ ಮೂಲಕ ಅರ್ಜಿದಾ ರರಿಗೆ ನೀಡುವ ವ್ಯವಸ್ಥೆಯಾಗಬೇಕು ಮತ್ತು ಅಂದೇ ಅರ್ಜಿಯ ವಿಲೇವಾರಿಯಾಗಬೇಕು. ಅರ್ಜಿ ಸಲ್ಲಿಸಿದ ರೀತಿಯಲ್ಲಿ ಕಡ್ಡಾಯವಾಗಿ ಅನುಮೋದನೆ ನೀಡಬೇಕು. ದಲ್ಲಾಳಿಗಳಿಗೆ ಪ್ರಾಧಿಕಾರದಲ್ಲಿ ಅವಕಾಶ ನೀಡಕೂಡದು.

ಒಮ್ಮೆಗೆ ಒಬ್ಬರಿಂದ ಒಂದು ಅರ್ಜಿ ಮಾತ್ರ ಸ್ವೀಕಾರ ಮಾಡಬೇಕು. ಅವ್ಯವಸ್ಥೆಯಿಂದಾಗಿ ಉಂಟಾಗು ತ್ತಿರುವ ನೂಕುನುಗ್ಗಲನ್ನು ನಿಯಂತ್ರಿಸಬೇಕು. ಪ್ರಾಧಿಕಾರದ ಪ್ರಸ್ತುತ ಕಾರ್ಯವೈಖರಿಯಿಂದಾಗಿ ನಮ್ಮ ಸಂಘಟನೆಯ ಸದಸ್ಯರು ಈಗಾಗಲೇ ತೀವ್ರ ಅಸಮಾಧಾನ ಹೊಂದಿದ್ದಾರೆ ಮತ್ತು ಪ್ರತಿಟನೆ ನಡೆಸುವ ಸ್ಥಿತಿಯಲ್ಲಿದ್ದಾರೆ. ಆದ್ದರಿಂದ ಇದೆಲ್ಲಾ ಪ್ರಕ್ರಿಯೆಗಳನ್ನು ವ್ಯವಸ್ಥಿತವಾಗಿ ಮಾಡಿ ಪ್ರಾಧಿಕಾರವು ಸಾರ್ವಜನಿ ಕರಿಗೆ ಅನುಕೂಲವಾಗಿ ತ್ವರಿತ ಕೆಲಸ ಮಾಡಲು ತಾವು ಕ್ರಮ ಕೈಗೊಳ್ಳಬೇಕು ಎಂದು ಸಂಘ ಮನವಿಯಲ್ಲಿ ತಿಳಿಸಿದೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಉಪಾಧ್ಯಕ್ಷ ಶ್ರೀನಿವಾಸ ಬಲ್ಲಾಳ್ ಮಲ್ಲಂಪಳ್ಳಿ, ದಿನೇಶ್ ಶೆಟ್ಟಿ ಹೆರ್ಗ ರವೀಂದ್ರ ಗುಜ್ಜರಬೆಟ್ಟು, ಪಾಂಡುರಂಗ ನಾಯಕ್ ಹಿರಿಯಡ್ಕ ಮೊದಲಾದ ವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X