ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಜೂ.9: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು, ರಾಜ್ಯ ಹಾಗೂ ಕೇಂದ್ರ ಸರಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ಕ್ರಾಫ್ಟ್ ಇನ್ಸ್ಟಿಟ್ಯೂಟ್ (ಎಫ್ಸಿಐ) ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (ಐಎಚ್ಎಂ) ಬೆಂಗಳೂರು ಇವರ ಮೂಲಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿ ಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ವಸತಿ ಸಹಿತ ತರಬೇತಿ ಕಾರ್ಯ ಕ್ರಮವನ್ನು ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ.
ಅದರಂತೆ ತರಬೇತಿವಾರು ಉಳಿದಿರುವ ಗುರಿಯನ್ನು ಜಿಲ್ಲಾವಾರು ಹಂಚಿಕೆ ಮಾಡಲಾಗಿದ್ದು, ಈ ತರಬೇತಿ ಜೂನ್ 30ರಿಂದ ಪ್ರಾರಂಭವಾಗಲಿದೆ. ತರಬೇತಿಗೆ ಸಂಬಂಧಿಸಿದಂತೆ ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ಗಳಲ್ಲಿ ಕೆಲಸ ಖಾತರಿಯಾಗಿರುವುದು. ತರಬೇತಿ ಪಡೆಯುವ ವೇಳೆ ಮಾಸಿಕ 2,000 ರೂ. ಗಳ ಸ್ಟೈಫಂಡ್ ನೀಡಲಾ ಗುವುದು. ತರಬೇತಿಗೆ ಹಾಜರಾಗುವವರಿಗೆ ವಸತಿ, ಊಟೋಪಚಾರ ಹಾಗೂ ಯೂನಿಫಾರ್ಮ್ ನೀಡಲಾಗುವುದು. ತರಗತಿಯ ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ಗಳಲ್ಲಿ ಆನ್ ಜಾಬ್ ಟ್ರೈನಿಂಗ್ ಸಹ ನೀಡಲಾಗುವುದು.
ಐ.ಹೆಚ್.ಎಂ ಬೆಂಗಳೂರು ಹಾಗೂ ಎಫ್.ಸಿ.ಐ ಮೈಸೂರು ಸಂಸ್ಥೆಗಳು ಪ್ರತಿಷ್ಠಿತ ಆತಿಥ್ಯ ಕ್ಷೇತ್ರದಲ್ಲಿ ತರಬೇತಿ ನೀಡುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾಗಿದ್ದು, ಈ ಸಂಸ್ಥೆಗಳಿಂದ ತರಬೇತಿ ನೀಡಿ ಸರ್ಟಿಫಿಕೇಟ್ ನೀಡುವುದರಿಂದ ರಾಜ್ಯದೊಳಗೆ ಅಲ್ಲದೇ ದೇಶದ ಯಾವುದೇ ಭಾಗದ ಹೋಟೆಲ್ ಉದ್ಯಮದಲ್ಲಿ ಕೆಲಸ ಖಾತರಿಯಾಗುವುದು.
ಆದ್ದರಿಂದ ಮಲ್ಟಿ ಕ್ಯೂಸೈನ್ ಕುಕ್ ಹಾಗೂ ಫುಡ್ ಬೆವರೇಜ್ ಸರ್ವಿಸ್ ಸ್ಟೆವಾರ್ಡ್ ತರಬೇತಿ ಪಡೆಯಲು ಆಸಕ್ತಿ ಇರುವ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗು ಪರಿಶಿಷ್ಟ ಪಂಗಡಕ್ಕೆ ಸೇರಿದ 20ರಿಂದ 45 ವರ್ಷ ದೊಳಗಿನ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಜೂನ್ 12 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.