Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೀತಾನದಿ ಬೆಳಾರ್ ಪ್ರದೇಶದಲ್ಲಿ ಆನೆ...

ಸೀತಾನದಿ ಬೆಳಾರ್ ಪ್ರದೇಶದಲ್ಲಿ ಆನೆ ಓಡಾಟ: ಸ್ಥಳೀಯರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ10 Jun 2025 9:18 PM IST
share
ಸೀತಾನದಿ ಬೆಳಾರ್ ಪ್ರದೇಶದಲ್ಲಿ ಆನೆ ಓಡಾಟ: ಸ್ಥಳೀಯರಲ್ಲಿ ಆತಂಕ

ಹೆಬ್ರಿ: ನಾಡ್ಪಾಲು ಗ್ರಾಮದ ಸೋಮೇಶ್ವರ ಅಭಯಾರಣ್ಯದ ಸೀತಾನದಿ ಬೆಳಾರ್ ಪರಿಸರದಲ್ಲಿ ಮತ್ತೆ ಆನೆ ಓಡಾಟ ಕಂಡುಬಂದಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ವ್ಯಕ್ತವಾಗಿದೆ.

ಸೀತಾನದಿಯಿಂದ ನೆಲ್ಲಿಕಟ್ಟೆ ಹೋಗುವ ರಸ್ತೆಯ ಬೆಳಾರ್ ಪರಿಸರದಲ್ಲಿ ರಸ್ತೆಯಲ್ಲಿ ಹಾದು ಹೋದ ಆನೆ ಪಕ್ಕದಲ್ಲಿರುವ ರಫೀಕ್ ಎಂಬವರ ಮನೆಯ ಗೇಟ್‌ನ್ನು ಮುರಿದು ಒಳಗೆ ನುಗ್ಗಿದೆ ಎನ್ನಲಾಗಿದೆ. ಅಲ್ಲೇ ಸಮೀಪದ ಗಿಡಮರ ಗಳಿಗೂ ಹಾನಿ ಮಾಡಿದೆ. ಅಲ್ಲಿಂದ ಮುಂದೆ ಸೋಮೇಶ್ವರ ಅಭಯಾರಣ್ಯದ ಒಳಗೆ ಹೋಗಿದೆ ಎಂದು ತಿಳಿದುಬಂದಿದೆ.

ರವಿವಾರ ರಾತ್ರಿ ಕಬ್ಬಿನಾಲೆ ಪರಿಸರದಲ್ಲಿಯೂ ಆನೆ ಕಾಣಿಸಿಕೊಂಡಿದ್ದು ಆ ಭಾಗದ ಜನ ಭೀತಿಗೆ ಒಳಗಾಗಿದ್ದಾರೆ. ಅಲ್ಲಿಂದ ಸೀತಾನದಿ ನಡ್ಪಾಲು ಪರಿಸರಕ್ಕೆ ಹೋಗಿರುವ ಆನೆ ಶಿರ್ಲಾಲ್‌ನಲ್ಲಿಯೂ ಕಾಣಸಿಕ್ಕಿದೆ. ನೆಲ್ಲಿಕಟ್ಟೆ ಗ್ರಾಮದ ದೇವಸ್ಥಾನಬೆಟ್ಟು ಶೇಡಿಕಂತ್ ಪರಿಸರದಲ್ಲಿ ಹಾಗೂ ಬಡ ತಿಂಗಳೆ ಪರಿಸರದಲ್ಲಿ ಆನೆ ಸಂಚಾರ ಮಾಡಿ ಹಲವಾರು ಗಿಡಮರಗಳನ್ನು ಹಾನಿ ಮಾಡಿದೆ ಎಂದು ತಿಳಿದುಬಂದಿದೆ.

ಆನೆ ಸಂಚಾರದ ಪ್ರದೇಶಗಳಿಗೆ ಜೂ.9ರಂದು ಹೆಬ್ರಿ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿ ಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಎಲ್ಲೂ ಆನೆ ಕಾಣಿಸಿಕೊಂಡಿಲ್ಲ. ಅದೇ ರೀತಿ ಅಧಿಕಾರಿಗಳು ಸುತ್ತಮುತ್ತಲ ಮನೆಗಳಿಗೆ ಭೇಟಿ ನೀಡಿ ರಾತ್ರಿ ಹೊತ್ತು ಒಬ್ಬರೇ ನಡೆದುಕೊಂಡು ಹೋಗದಂತೆ ಎಚ್ಚರಿಕೆ ನೀಡಿದ್ದಾರೆ.

ಅರಣ್ಯ ಪರಿಸರದಲ್ಲಿ ಆನೆ ಓಡಾಡುತ್ತಿದೆ. ಹಗಲು ಹೊತ್ತು ಆನೆಯ ಸಂಚರಿಸುವುದಿಲ್ಲ ಆದರೆ ರಾತ್ರಿ ಹೊತ್ತು ಸಂಚರಿಸುವುದರಿಂದ ಯಾರು ಕೂಡ ನಡೆದುಕೊಂಡು ಅಥವಾ ದ್ವಿಚಕ್ರ ವಾಹನಗಳಲ್ಲಿ ತಿರು ಗಾಡಬೇಡಿ. ಈ ಬಗ್ಗೆ ನಮ್ಮ ಇಲಾಖೆ ಆನೆಯ ಚಲನವಲನನ್ನು ಗಮನಿಸುತ್ತಿದೆ. ಸಮಸ್ಯೆ ಉಲ್ಬಣ ಗೊಂಡಲ್ಲಿ ಕ್ರಮ ಕೈಗೊಳ್ಳುವುದಾಗಿ ಸೋಮೇಶ್ವರ ವನ್ಯಜೀವಿ ವಲಯ ಅರಣ್ಯ ಅಧಿಕಾರಿ ಚಿದಾನಂದಪ್ಪಜಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X