"ಡಿಸೆಂಬರ್ ಒಳಗೆ ವಾರಾಹಿ ಕುಡಿಯುವ ನೀರು ಯೋಜನೆ ಪೂರ್ಣಗೊಳಿಸಿ"
ಕೇಂದ್ರ ಜಲ್ ಜೀವನ್ ಮಿಷನ್ ನೋಡೆಲ್ ಅಧಿಕಾರಿ ಅಶೀಶ್ ಕುಂದಾಲ್

ಉಡುಪಿ: ವಾರಾಹಿ ನದಿ ನೀರಿನ ಮೂಲದಿಂದ ಜಿಲ್ಲೆಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆಯ ಕಾಮಗಾರಿಗಳನ್ನು ಮುಂದಿನ ಡಿಸೆಂಬರ್ ತಿಂಗಳ ಒಳಗೆ ಪೂರ್ಣಗೊಳಿಸಿ ಜನತೆಗೆ ಶುದ್ಧ ಕುಡಿಯುವ ನೀರಿನ್ನು ಒದಗಿಸಬೇಕು ಎಂದು ಕೇಂದ್ರ ಜನಜೀವನ್ ಮಿಷನ್ ಯೋಜನೆಯ ನೋಡೆಲ್ ಅಧಿಕಾರಿ ಅಶೀಶ್ ಕುಂದಾಲ್ ಹೇಳಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ನೀರು ಸರಬ ರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯ ಕಾರ್ಕಳ, ಹೆಬ್ರಿ ಹಾಗೂ ಕಾಪು ತಾಲೂಕಿನ 69 ಗ್ರಾಮಗಳ 1904 ವಾಸಸ್ಥಾನಗಳಿಗೆ ಕುಡಿ ಯುವ ನೀರನ್ನು ಒದಗಿಸುವ ಯೋಜನೆಯ ಕಾಮಗಾರಿಗಳನ್ನು ಮುಂಬರುವ ಡಿಸೆಂಬರ್ ಒಳಗೆ ಪೂರ್ಣ ಗೊಳಿಸಿ ಜನರಿಗೆ ವಾರಾಹಿಯ ನೀರನ್ನು ಒದಗಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ರಲ್ಲದೇ, ಈ ಯೋಜನೆಗೆ ಅಗತ್ಯವಿರುವ ವಿದ್ಯುತ್ಚ್ಛಕ್ತಿ ಸಬ್ಸ್ಟೇಷನ್, ಪಂಪ್ಹೌಸ್, ಟ್ಯಾಂಕುಗಳ ನಿರ್ಮಾಣ ಕಾಮಗಾರಿಗಳನ್ನು ಸಹ ಶೀಘ್ರದಲ್ಲೇ ಪೂರ್ಣಗೊಳಿಸಬೇಕು ಎಂದರು.
ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ನಿರಂತರ ಶುದ್ಧ ಕುಡಿಯುವ ನೀರನ್ನು ಒದಗಿಸುವ ಈ ಕಾಮಗಾರಿ ಗಳನ್ನು ಉತ್ತಮ ಗುಣಮಟ್ಟದೊಂದಿಗೆ ನಿಗದಿತ ಕಾಲಾವಧಿಯೊಳಗೆ ಅದ್ಯತೆಯ ಮೇಲೆ ಕೈಗೊಳ್ಳುವಂತೆ ಸೂಚಿಸಿದ ಅವರು ಜನರಿಗೆ ಶುದ್ಧ ನೀರನ್ನು ಒದಗಿಸುವುದು ನಿಮ್ಮ ಆದ್ಯತೆಯಾಗಬೇಕು ಎಂದರು.
ಬಹು ಗ್ರಾಮ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿ, ನೀರು ಶುದ್ಧೀಕರಣ ಘಟಕ ಸೇರಿದಂತೆ ಯೋಜನೆಯ ವಿವಿಧ ಕಾಮಗಾರಿಗಳ ಪ್ರಗತಿಯ ಮಾಹಿತಿಗಳನ್ನು ಸಂಬಂಧಿತ ಅಧಿಕಾರಿಗಳಿಂದ ಪಡೆದು ಮಾತನಾಡಿದ ಅವರು, ಪೈಪ್ಲೈನ್ ಕಾಮಗಾರಿ ಮೀಸಲು ಅರಣ್ಯ ಪ್ರದೇಶ ಹಾಗೂ ವನ್ಯಜೀವಿ ಅರಣ್ಯ ಪ್ರದೇಶಗಳಲ್ಲಿ ಹಾದುಹೋಗುತ್ತಿರುವುದರಿಂದ ಅರಣ್ಯ ಇಲಾಖೆಯಿಂದ ಈಗಾಗಲೇ ಒಪ್ಪಿಗೆಯನ್ನು ಪಡೆಯ ಲಾಗಿದೆ. ಹೀಗಾಗಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಇದರೊಂದಿಗೆ ಗ್ರಾಮೀಣ ಭಾಗದ ಜನರಿಗೆ ನಿರಂತರ ನೀರು ಒದಗಿಸುವ ಜಲ್ಜೀವನ್ ನಳ್ಳಿ ನೀರನ್ನು ಒದಗಿಸುವ ಕಾಮಗಾರಿಗಳನ್ನು ಸಹ ಆದ್ಯತೆ ಮೇಲೆ ಕೈಗೊಳ್ಳುವಂತೆ ತಿಳಿಸಿದ ಆಶೀಶ್ ಕುಂದಾಲ್, ಗ್ರಾಮೀಣ ಭಾಗದಲ್ಲಿ ಅಂತರ್ಜಲ ಹೆಚ್ಚಿಸಲು ಅಗತ್ಯವಿರುವ ಕಾಮಗಾರಿಗಳನ್ನು ಸಹ ಇದರೊಂದಿಗೆ ಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಕೇಂದ್ರ ಜಲ ಜೀವನ್ ಮಿಷನ್ ಯೋಜನೆಯ ತಾಂತ್ರಿಕ ಸಹಾಯಕ ನಾರಾಯಣ ದಾಸ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರ ಉದಯ್ ಕುಮಾರ್, ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.







