Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾವಿನಕಟ್ಟೆ ಪ್ರೌಢಶಾಲೆಯಲ್ಲಿ ಶಿಕ್ಷಕರ...

ಮಾವಿನಕಟ್ಟೆ ಪ್ರೌಢಶಾಲೆಯಲ್ಲಿ ಶಿಕ್ಷಕರ ಸಾಮೂಹಿಕ ವರ್ಗಾವಣೆ: ವಿದ್ಯಾರ್ಥಿಗಳು, ಪೋಷಕರಿಂದ ಪ್ರತಿಭಟನೆ

ಶಿಕ್ಷಕರ ಮರುನೇಮಕಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 Jun 2025 8:07 PM IST
share
ಮಾವಿನಕಟ್ಟೆ ಪ್ರೌಢಶಾಲೆಯಲ್ಲಿ ಶಿಕ್ಷಕರ ಸಾಮೂಹಿಕ ವರ್ಗಾವಣೆ: ವಿದ್ಯಾರ್ಥಿಗಳು, ಪೋಷಕರಿಂದ ಪ್ರತಿಭಟನೆ

ಕುಂದಾಪುರ, ಜೂ.18: ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿರುವ ಕೊಲ್ಲೂರು ಶ್ರೀಮೂಕಾಂಬಿಕಾ ದೇವಳದ ಪ್ರೌಢಶಾಲೆಯಲ್ಲಿದ್ದ ಎಲ್ಲ ಶಿಕ್ಷಕರನ್ನು ಸಾಮೂಹಿಕ ವರ್ಗಾವಣೆಗೊಳಿಸಿ ಬೇರೆ ಶಿಕ್ಷಕರನ್ನು ನಿಯೋಜಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪೋಷಕರೊಂದಿಗೆ ಸೇರಿ ಶಾಲೆಯ ಎದುರು ಇಂದು ಪ್ರತಿಭಟನೆ ನಡೆಸಿದರು. ಮೊದಲಿದ್ದ ಶಿಕ್ಷಕರನ್ನು ಮರು ನಿಯೋಜಿಸು ವವರೆಗೆ ತರಗತಿಗೆ ತೆರಳುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು.

ಕೊಲ್ಲೂರು ದೇವಳದ ಆಡಳಿತಕ್ಕೊಳ ಪಡುವ ಮಾವಿನಕಟ್ಟೆಯ ಈ ಪ್ರೌಢ ಶಾಲೆಯಲ್ಲಿ ಗುಲ್ವಾಡಿ, ಮಾವಿನಕಟ್ಟೆ, ನೆಂಪು, ಕರ್ಕಿ, ತಲ್ಲೂರು, ಸೌಕೂರು, ಹಟ್ಟಿಯಂಗಡಿ, ನೇರಳಕಟ್ಟೆಯಿಂದ ಬರುವ 185 ವಿದ್ಯಾರ್ಥಿಗಳಿದ್ದಾರೆ. ಈ ಬಾರಿ 56 ವಿದ್ಯಾರ್ಥಿಗಳು ಹೊಸದಾಗಿ ದಾಖಲಾಗಿದ್ದು ಎಸೆಸೆಲ್ಸಿಯಲ್ಲಿ 50 ವಿದ್ಯಾರ್ಥಿಗಳಿದ್ದಾರೆ. ಆದರೆ ಈ ಶೈಕ್ಷಣಿಕ ವರ್ಷದಲ್ಲಿ ಶಾಲೆಯಲ್ಲಿ ಈ ಹಿಂದಿದ್ದ ಮುಖ್ಯೋಪಧ್ಯಾಯರ ಸಹಿತ ಒಂಬತ್ತು ಶಿಕ್ಷಕರನ್ನು ಬೇರೆ ಶಾಲೆಗಳಿಗೆ ವರ್ಗಾಯಿಸಿದ್ದು ಈ ಶಾಲೆಗೆ ಬೇರೆಬೇರೆ ಶಾಲೆಯ ಶಿಕ್ಷಕರನ್ನು ನಿಯೋಜಿಸಲಾಗಿದೆ.

ಹೊಸದಾಗಿ ಬಂದ ಶಿಕ್ಷಕರಿಂದ ಹತ್ತನೆ ತರಗತಿ ವಿದ್ಯಾರ್ಥಿಗಳ ಶಿಕ್ಷಣ ವ್ಯವಸ್ಥೆಯಲ್ಲಿ ಬಹಳಷ್ಟು ಸಮಸ್ಯೆ ಯಾಗಲಿದೆ ಎಂದು ಪೋಷಕರು ಆರೋಪಿಸಿ ದ್ದಾರೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಕೂಡ ತಮಗೆ ಹಿಂದಿದ್ದ ಒಂದಷ್ಟು ಶಿಕ್ಷಕರನ್ನು ನೇಮಿಸಿ ಎಂದು ಅವಲತ್ತುಕೊಂಡಿದ್ದಾರೆ. ಕೆಲ ಹೊತ್ತು ತರಗತಿಗಳಿಂದ ಹೊರಗು ಳಿದ ವಿದ್ಯಾರ್ಥಿಗಳು ತಮ್ಮ ಬೇಡಿಕೆ ಈಡೇರುವ ತನಕ ತರಗತಿ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು.

ಕೆಲವೇ ದಿವಸಗಳಲ್ಲಿ ಪರೀಕ್ಷೆ ಬರುತ್ತಿದ್ದು ಕೆಲವು ಪಾಠಗಳಿನ್ನು ಆರಂಭವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಹಿರಿಯರಾದ ಚೆರಿಯಬ್ಬ ಸಾಹೇಬ್ ಸ್ಥಳಕ್ಕೆ ಭೇಟಿ ನೀಡಿದ್ದು, ದೇವಸ್ಥಾನದ ಆಡಳಿತ ಮಂಡಳಿ ಜೊತೆಗೆ ಚರ್ಚಿಸಿರುವುದಾಗಿಯೂ, ಮೂರು ದಿನದೊಳಗೆ ಸಮಸ್ಯೆ ಬಗೆಹರಿಸುವ ಬಗ್ಗೆ ಆಡಳಿತ ಕಮಿಟಿ ತಿಳಿಸಿರುವುದಾಗಿ ಪೋಷಕರಿಗೆ ಮಾಹಿತಿ ನೀಡಿ ಮಕ್ಕಳನ್ನು ತರಗತಿಗೆ ತೆರಳುವಂತೆ ಮನವಿ ಮಾಡಿದರು. ಅದರಂತೆ ಮಕ್ಕಳು ತರಗತಿಗೆ ತೆರಳಿದರು.

ಬಳಿಕ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳು, ಪೋಷಕರ ಅಹವಾಲು ಆಲಿಸಿದರು. ಶಾಲೆಯ ಎಲ್ಲಾ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದರ ಬಗ್ಗೆ ಪೋಷ ಕರು ಅಸಮಾಧಾನ ಗೊಂಡಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿಯ ನಿರ್ಧಾರದಂತೆ ಈ ವರ್ಗಾವಣೆ ನಡೆದಿದೆ. ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿ, ದಾಖಲಾತಿ ಹಿತದೃಷ್ಟಿ ಯಿಂದ ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸಮಸ್ಯೆಯನ್ನು ಗಮನಕ್ಕೆ ತರಲಾಗುತ್ತದೆ ಎಂದು ಅವರು ತಿಳಿಸಿದರು.

ಸಮಸ್ಯೆ ಬಗೆಹರಿಸದಿದ್ದರೆ ಟಿಸಿ ಕೊಡಿ!

25 ವರ್ಷಗಳ ಇತಿಹಾಸವುಳ್ಳ ಶಾಲೆ ಇದಾಗಿದ್ದು, ಕಳೆದ ಹತ್ತು ವರ್ಷಗಳಿಂದ ಈ ಶಾಲೆಗೆ ಶೇ.100 ಫಲಿತಾಂಶ ಬರುತ್ತಿದೆ. ಆದರೆ ಪೋಷಕರಲ್ಲಿ, ವಿದ್ಯಾರ್ಥಿಗಳಿಗೆ ಯಾವುದೇ ಮಾಹಿತಿ ನೀಡದೆ ಏಕಾಏಕಿ ಯಾಗಿ ಶಾಲೆಯ ಎಲ್ಲಾ ಅಧ್ಯಾಪಕರನ್ನು ವರ್ಗಾವಣೆ ಮಾಡಲಾಗಿದೆ.

ಹೊಸದಾಗಿ ಬಂದ ಶಿಕ್ಷಕರ ಮೇಲೆ ಯಾವ ಭಿನ್ನಾಭಿಪ್ರಾಯವಿಲ್ಲ. ಆದರೆ ಮಕ್ಕಳ ಶೈಕ್ಷಣಿಕ ಹಿತದೃಷ್ಟಿ ಯಿಂದ ಮೊದಲಿದ್ದ ಶಿಕ್ಷಕರ ಪೈಕಿ ಕನಿಷ್ಟ 3-4 ಶಿಕ್ಷಕರನ್ನು ಮತ್ತೆ ಇಲ್ಲಿಗೆ ನಿಯೋಜಿಸಬೇಕು. ಮೂರು ದಿನದೊಳಗೆ ಬೇಡಿಕೆ ಈಡೇರಿಸದಿದ್ದರೆ ಟಿ.ಸಿ. ಪಡೆದು ಮಕ್ಕಳನ್ನು ಬೇರೆ ಶಾಲೆಗೆ ಕಳಿಸುತ್ತೇವೆ ಎಂದು ಪೋಷಕರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X