ಉಡುಪಿ: ನೂತನ ಲಸಿಕಾ ಉಗ್ರಾಣ ಕಟ್ಟಡಕ್ಕೆ ಶಿಲಾನ್ಯಾಸ

ಉಡುಪಿ, ಜೂ.20: ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ಅರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಅನುಮೋದನೆಗೊಂಡ ಹೊಸ ಲಸಿಕಾ ಉಗ್ರಾಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸವಿಮತಿಯ ಅಧ್ಯಕ್ಷ ಅಶೋಕ್ ಕೊಡವೂರು, ಉಡುಪಿ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ಡಿಹೆಚ್ಓ ಡಾ.ಬಸವರಾಜ್ ಹುಬ್ಬಳ್ಳಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Next Story







