ಅನ್ನಭಾಗ್ಯದ ಅಕ್ಕಿ ಅಕ್ರಮ ದಾಸ್ತಾನು: ಆರೋಪಿ ಸೆರೆ

ಸಾಂದರ್ಭಿಕ ಚಿತ್ರ
ಬೈಂದೂರು: ಬಿಜೂರು ಗ್ರಾಮದ ಹರಕೇರಿ ಎಂಬಲ್ಲಿ ಅನ್ನಭಾಗ್ಯ ಯೋಜನಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಜು.2ರಂದು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ಮಜೀದ್ ಬಂಧಿತ ಆರೋಪಿ. ಈತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಕಾನೂನು ಬಾಹಿರವಾಗಿ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದನು. ಈ ಕುರಿತ ಖಚಿತ ಮಾಹಿತಿಯಂತೆ ಬೈಂದೂರು ಆಹಾರ ನಿರೀಕ್ಷಕ ವಿನಯ್ ಕುಮಾರ ದಾಳಿ ನಡೆಸಿ ಒಟ್ಟು 21.10 ಕ್ವಿಂಟಾಲ್ ತೂಕದ 71,740ರೂ. ಮೌಲ್ಯದ ಅಕ್ಕಿಯನ್ನು ವಶಪಡಿ ಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





