ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಕೊಲ್ಲೂರು: ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೃಷಿ ಕೂಲಿ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಚಿತ್ತೂರು ಗ್ರಾಮದ ಮಾರಣಕಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ರಾಜೇಶ (47) ಎಂದು ಗುರುತಿಸಲಾಗಿದೆ. ಇವರು ಮೇ 13ರಂದು ಮಾರಣಕಟ್ಟೆಯ ಮಹಾಬಲೇಶ್ವರ ಎಂಬವರ ಮನೆಯ ತೆಂಗಿನ ಮರದಿಂದ ತೆಂಗಿನ ಕಾಯಿ ಕೊಯ್ಯುತ್ತಿದ್ದಾಗ ಆಯ ತಪ್ಪಿಕೆಳಗೆ ಬಿದ್ದು ಗಾಯ ಗೊಂಡಿದ್ದರು. ಗಂಭೀರ ಸ್ಥಿತಿಯಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಜು.6ರಂದು ಬೆಳಗಿನ ಜಾವ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story