Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಗಾಳಿಗೆ ಕಾರ್ಕಳ, ಕುಂದಾಪುರದಲ್ಲಿ...

ಉಡುಪಿ: ಗಾಳಿಗೆ ಕಾರ್ಕಳ, ಕುಂದಾಪುರದಲ್ಲಿ ಅಡಿಕೆ ತೋಟಕ್ಕೆ ಹಾನಿ

ವಾರ್ತಾಭಾರತಿವಾರ್ತಾಭಾರತಿ7 July 2025 7:47 PM IST
share
ಉಡುಪಿ: ಗಾಳಿಗೆ ಕಾರ್ಕಳ, ಕುಂದಾಪುರದಲ್ಲಿ ಅಡಿಕೆ ತೋಟಕ್ಕೆ ಹಾನಿ

ಉಡುಪಿ, ಜು.7: ಕಳೆದ 24 ಗಂಟೆಗಳಲ್ಲಿ ಮಳೆಯ ಪ್ರಮಾಣದಲ್ಲಿ ಗಣನೀಯ ಇಳಿಮುಖ ಕಂಡು ಬಂದಿದ್ದರೂ, ಆಗಾಗ ಮಳೆಯೊಂದಿಗೆ ಬೀಸುವ ಗಾಳಿಗೆ ಜಿಲ್ಲೆಯಲ್ಲಿ ಮನೆಗಳಿಗೆ ಹಾಗೂ ಸೊತ್ತುಗಳಿಗೆ ಆಗುವ ಹಾನಿ ಹೆಚ್ಚುತ್ತಿದೆ.

ರವಿವಾರ ಬೀಸಿದ ಗಾಳಿಗೆ ಕಾರ್ಕಳ ಹಾಗೂ ಕುಂದಾಪುರ ತಾಲೂಕುಗಳಲ್ಲಿ ಅನೇಕ ತೋಟಗಾರಿಕಾ ಬೆಳೆಗಳಿಗೆ ಹಾನಿಯುಂಟಾಗಿದ್ದರೆ, ಉಳಿದಂತೆ ಕನಿಷ್ಠ ಆರು ಮನೆಗಳಿಗೆ ಹಾನಿಯುಂಟಾಗಿದ್ದು 3.5 ಲಕ್ಷ ರೂ.ಗಳಿಗೂ ಅಧಿಕ ನಷ್ಟದ ವರದಿಗಳು ಬಂದಿವೆ.

ಕಾರ್ಕಳ ತಾಲೂಕು ಈದು ಗ್ರಾಮದ ದಿನೇಶ್ ಹಾಗೂ ಕುಂದಾಪುರ ತಾಲೂಕು ಸೇನಾಪುರದ ಶ್ರೀಧರ ಶೆಟ್ಟಿ ಎಂಬವರ ತೋಟಗಳಿಗೆ ಗಾಳಿಯಿಂದ ಅಪಾರ ಹಾನಿಯಾಗಿದೆ. ತೋಟದ ಅಡಿಕೆ ಮರಗಳು ಧರಾಶಾಯಿಯಾಗಿದ್ದು 50ಸಾವಿರ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ.

ಕುಂದಾಪುರ ಕಸಬಾದ ಶ್ರೀಧರ್ ಶೇರಿಗಾರ್ ಎಂಬವರ ಮನೆಯ ಗೋಡೆ ಗಾಳಿ-ಮಳೆಗೆ ಕುಸಿದಿದ್ದು ಒಂದು ಲಕ್ಷ ರೂ.ಗಳಿಗೂ ಅಧಿಕ ಹಾನಿ ಸಂಭವಿಸಿದೆ. ಅದೇ ಗ್ರಾಮದ ಅಬ್ದುಲ್ ಖಾದರ್ ಎಂಬವರ ಮನೆಯ ಗೋಡೆ ಕುಸಿದು 50ಸಾವಿರ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ.

ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ವಿಲಿಯಂ ಡಿಸೋಜ ಅವರ ಮನೆಗೆ ಗಾಳಿ-ಮಳೆಯಿಂದ ಭಾಗಶ: ಹಾನಿಯಾಗಿದ್ದು 70,000ರೂ. ಹಾಗೂ ನಿಟ್ಟೆ ಗ್ರಾಮದ ಲಿಯೊ ಸಲ್ಡಾನ ಎಂಬವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದ್ದು 40,000ರೂ.ಗಳಿಗೂ ಅಧಿಕ ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ.

ಕಾಪು ತಾಲೂಕು ಪಡು ಗ್ರಾಮದ ಗುಲಾಬಿ ಬಂಗೇರ ಅವರ ವಾಸದ ಮನೆಯ ಗೋಡೆ ಭಾಗಶ: ಕುಸಿದಿದ್ದು 35,000ರೂ. ಹಾಗೂ ಶಿರ್ವ ಗ್ರಾಮದ ಸಂಪ ಪೂಜಾರ್ತಿ ಅವರ ಮನೆ ಮೇಲೆ ಮರ ಬಿದ್ದು 25,000ರೂ. ನಷ್ಟ ಉಂಟಾಗಿರುವುದು ವರದಿಯಾಗಿದೆ.

ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 32.6ಮಿ.ಮೀ. ಮಳೆಯಾಗಿದೆ. ಹೆಬ್ರಿಯಲ್ಲಿ ಅತ್ಯಧಿಕ 51.7ಮಿ.ಮೀ. ಮಳೆಯಾದರೆ, ಬೈಂದೂರಿನಲ್ಲಿ 37.1, ಕಾರ್ಕಳದಲ್ಲಿ 33.3, ಕಂದಾಪುರದಲ್ಲಿ 32.9, ಬ್ರಹ್ಮಾವರದಲ್ಲಿ 21.8, ಉಡುಪಿಯಲ್ಲಿ 20.7 ಹಾಗೂ ಕಾಪುವಿನಲ್ಲಿ 14.4ಮಿ.ಮೀ ಮಳೆಯಾಗಿದೆ.

ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಮುಂದುವರಿದಿದ್ದು, ಇನ್ನೂ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಗಂಟೆಗೆ 40ರಿಂದ 50ಕಿ.ಮೀ. ವೇಗದ ಗಾಳಿಯೊಂದಿಗೆ ಬಿರುಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಮ್ಮ ಮುನ್ಸೂಚನೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X