Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಾಡ್ದನಗಳಲ್ಲಿ ಇತಿಹಾಸ ಹುಡುಕವ ಕಾರ್ಯ...

ಪಾಡ್ದನಗಳಲ್ಲಿ ಇತಿಹಾಸ ಹುಡುಕವ ಕಾರ್ಯ ಅಗತ್ಯ: ಡಾ.ಪುಂಡಿಕಾ

ಡಾ.ಮಾಲತಿ ಕೃಷ್ಣಮೂರ್ತಿಗೆ ಪೊಳಲಿ- ಎಸ್.ಆರ್.ಹೆಗ್ಡೆ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ12 July 2025 5:04 PM IST
share
ಪಾಡ್ದನಗಳಲ್ಲಿ ಇತಿಹಾಸ ಹುಡುಕವ ಕಾರ್ಯ ಅಗತ್ಯ: ಡಾ.ಪುಂಡಿಕಾ

ಉಡುಪಿ, ಜು.12: ತುಳುನಾಡಿನ ಪಾಡ್ದಾನಗಳು ಇತಿಹಾಸ ರಚನೆಯಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಭೂತರಾಧನೆಗೆ ಸಂಬಂಧಪಟ್ಟ ಪಾಡ್ದಾನಗಳು ಶ್ರೀಮಂತ ಮೌಖಿಕ ಪರಂಪರೆಯಾಗಿದೆ. ಪಾಡ್ದನಗಳಲ್ಲಿ ಇತಿಹಾಸಗಳಿವೆ. ಇತಿಹಾಸ ಪಠ್ಯಗಳಲ್ಲದ ಈ ಮೌಖಿಕ ಪರಂಪರೆಯಲ್ಲಿ ಇತಿಹಾಸ ಹುಡುಕುವ ಕೆಲಸವನ್ನು ಇತಿಹಾಸಕಾರ ಮಾಡಬೇಕಾಗುತ್ತದೆ. ಅದನ್ನು ಸಮರ್ಥವಾಗಿ ಮಾಡಿದಾಗ ಮಾತ್ರ ಇತಿಹಾಸ ರಚನೆ ಆಗಲು ಸಾಧ್ಯವಿದೆ ಎಂದು ಪುರಾತತ್ವ ತಜ್ಞ ಹಾಗೂ ಸಂಶೋಧಕ ಡಾ.ಪುಂಡಿಕಾ ಗಣಪತಿ ಭಟ್ ಹೇಳಿದ್ದಾರೆ.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ವತಿಯಿಂದ ಶನಿವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್.ಹೆಗ್ಡೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮೌಖಿಕ ಪರಂಪರೆ ಮತ್ತು ತುಳುವ ಇತಿಹಾಸ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಇತಿಹಾಸಕಾರರಲ್ಲಿ ಕಳೆದ ನಾಲ್ಕು ದಶಕಗಳಿಂದ ಇತಿಹಾಸವನ್ನು ನೋಡುವ ದೃಷ್ಠಿ ಬದಲಾಗುತ್ತಿದೆ. ಹೊಸ ದೃಷ್ಠಿ, ಆಕರ ಬಳಸಿಕೊಂಡು ಹೊಸ ವಿಧಾನಗಳ ಮೂಲಕ ಜನರಿಗೆ ಪ್ರಾದೇಶಿಕ ಇತಿಹಾಸ ಕಟ್ಟಿಕೊಡುವ ಹೊಸ ಪರಂಪರೆ ಆರಂಭವಾಗಿದೆ. ಮೊದಲು ಇತಿಹಾಸ ಎಂಬುದು ವ್ಯಕ್ತಿ ನಿಷ್ಠೆ, ರಾಜಕೀಯ ನಿಷ್ಠೆಯಾಗಿತ್ತು. ಅಲ್ಲಿ ಮಹಿಳೆಯರಿಗೆ ಅವಕಾಶವೇ ಇಲ್ಲ ಮತ್ತು ಮಹಿಳೆಯರ ಪಾತ್ರಗಳ ಪ್ರಾಸ್ತಪಗಳಿ ರಲಿಲ್ಲ. ಒಟ್ಟಾರೆ ರಾಜನಿಷ್ಠೆಯ ಇತಿಹಾಸ ಎಂಬಂತೆ ಇತ್ತು. ಆದರೆ ಇಂದು ಜನ ನಿಷ್ಠೆ ಹಾಗೂ ಸಮಾಜ ನಿಷ್ಠೆಯ ಇತಿಹಾಸ ರಚನೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಎಂದರು.

ಭೂತಾರಧನೆಗಳು ಕೇವಲ ಆರಾಧನೆ ಮಾತ್ರವಲ್ಲ. ಅದರ ಹಿನ್ನೆಲೆಯಲ್ಲಿ ಭೂತಕ್ಕೆ ಸಂಬಂಧಿಸಿ ಪಾಡ್ದಾನಗಳಿರುತ್ತವೆ. ಅದರಲ್ಲಿ ಭೂತದ ಹುಟ್ಟು, ಮಹಿಮೆ, ಪ್ರಸರಣಗಳ ಎಲ್ಲ ಮಾಹಿತಿ ಸಿಗುತ್ತದೆ. ಇತಿಹಾಸಕ್ಕೆ ಪೂರಕವಾದ ಮಾಹಿತಿಗಳು ಈ ಪಾಡ್ದಾನಗಳಲ್ಲಿ ದೊರೆಯುತ್ತವೆ. ಜನಜೀವನ ಅರ್ಥ ಮಾಡಲು ಪಾಡ್ದನಗಳಿಂದ ಸಾಧ್ಯ ಎಂದು ಅವರು ತಿಳಿಸಿದರು.

ಪಾಡ್ದನ ಹಾಗೂ ಪಾರಂಪರಿಕ ಆಕರಗಳನ್ನು ಪ್ರತ್ಯೇಕವಾಗಿ ವಿಂಗಡಸದೆ ವಿಮರ್ಶಿಸಿದಾಗ ಹೊಸಹೊಸ ಇತಿಹಾಸ ಮುಖಗಳು ಗಮನಕ್ಕೆ ಬರಲು ಸಾಧ್ಯ. ಇತಿಹಾಸ ಸಂಶೋಧನೆ ಮಾಡುವಾಗ ಪಾಡ್ದನಗಳನ್ನು ನಿರ್ಲಕ್ಷಿಸದೆ ಸಮರ್ಥ ವಾಗಿ ಬಳಸಿಕೊಳ್ಳುವ ಪರಂಪರೆಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ಇತಿಹಾಸ ತಜ್ಞೆ ಡಾ.ಮಾಲತಿ ಕೃಷ್ಣಮೂರ್ತಿ ಅವರಿಗೆ ಹಿರಿಯ ವಿದ್ವಾಂಸ ಡಾ.ಪಾದೇಕಲ್ಲು ವಿಷ್ಣುಭಟ್ ಪ್ರಶಸ್ತಿ ಪ್ರದಾನ ಮಾಡಿದರು. ಅಧ್ಯಕ್ಷತೆಯನ್ನು ಎಂಜಿಎಂ ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ ವಹಿಸಿದ್ದರು.

ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಸ್ವಾಗತಿಸಿದರು. ಚೇಳಾರುಗುತ್ತು ಎಸ್.ಆರ್.ಹೆಗ್ಡೆ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಡಾ.ಇಂದಿರಾ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೇಂದ್ರದ ಸಹ ಸಂಶೋಧಕ ಡಾ.ಅರುಣ್ ಕುಮಾರ್ ಎಸ್.ಆರ್. ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X