ಮಲ್ಪೆ- ಕೊಳ ರಸ್ತೆ ಕಾಮಗಾರಿಗೆ ಚಾಲನೆ

ಉಡುಪಿ, ಜು.12: ಉಡುಪಿ ನಗರಸಭೆಯ ಕೊಳ ವಾರ್ಡಿನಲ್ಲಿ ನಗರಸಭೆಯ ಅನುದಾನದಿಂದ 25ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿ ರುವ ಶ್ರೀರಾಮ ಒಂದನೇ ಅಡ್ಡ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಕಲ್ಮಾಡಿ, ನಗರಸಭಾ ಸದಸ್ಯ ಎಡ್ಲಿನ್ ಕರ್ಕಡ, ಬಾಲಕರ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಸತೀಶ್, ಸ್ಥಳೀಯ ಮುಖಂಡರಾದ ಪಾಂಡುರಂಗ ಮಲ್ಪೆ, ಮಂಜು ಕೊಳ, ರವಿ ಸಾಲ್ಯಾನ್, ಯಶವಂತ, ಶರತ್, ಶಂಕರ ಸುವರ್ಣ, ದಿನೇಶ್ ಕೊಳ, ದೇವದಾಸ್ ಸುವರ್ಣ, ಸುಮಂತ ಕೊಳ ಮೊದಲಾದವರು ಉಪಸ್ಥಿತರಿದ್ದರು.
Next Story





