Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದಲಿತರಿಗೆ ಭೂಮಿ ವಿಚಾರದಲ್ಲಿ ಶೋಷಣೆ:...

ದಲಿತರಿಗೆ ಭೂಮಿ ವಿಚಾರದಲ್ಲಿ ಶೋಷಣೆ: ಸುಂದರ್ ಮಾಸ್ತರ್

ಶೋಷಿತರ ಭೂಮಿ ಹಕ್ಕಿಗಾಗಿ ‘ದಲಿತ ಕಂದಾಯ ಅದಾಲತ್’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ13 July 2025 6:13 PM IST
share
ದಲಿತರಿಗೆ ಭೂಮಿ ವಿಚಾರದಲ್ಲಿ ಶೋಷಣೆ: ಸುಂದರ್ ಮಾಸ್ತರ್

ಕುಂದಾಪುರ: ಕಂದಾಯ ಅದಾಲತ್ ದಲಿತರ ಬದುಕಿನ ಹಕ್ಕು. ತುಂಡುಭೂಮಿ ಇದ್ದವರು ಮುಂದೆ ಬದುಕು ಕಟ್ಟಿಕೊಳ್ಳಬಹುದು. ಹೀಗಾಗಿ ಭೂಮಿ ಅನಿವಾರ್ಯ. ಭೂಮಿಯಿಲ್ಲದವರ ಬದುಕು ಅತಂತ್ರ ವಾಗಲಿದೆ. ದಲಿತರಿಗೆ ಭೂಮಿ ವಿಚಾರದಲ್ಲಿ ಶೋಷಣೆಯಾಗುತ್ತಿದೆ. ಶೋಷಿತ ಜನರ ಭೂಮಿ ಹಕ್ಕಿಗಾಗಿ ಮುಂದೆಯೂ ಹೋರಾಟಗಳು ನಿಶ್ಚಿತ. ಸಂಘಟಿತರಾದಾಗ ಮಾತ್ರ ಹಕ್ಕುಗಳು ಸಿಗುತ್ತದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ಟರ್ ಹೇಳಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಕುಂದಾಪುರ ತಾಲೂಕು ಸಮಿತಿ ವತಿಯಿಂದ ರವಿವಾರ ಕುಂದಾಪುರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾದ ಶೋಷಿತ ಸಮುದಾಯಗಳ ಭೂಮಿ ಹಕ್ಕಿಗಾಗಿ ’ಕುಂದಾಪುರ ತಾಲೂಕು ದಲಿತ ಕಂದಾಯ ಅದಾಲತ್’ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ದಲಿತ ಸಮುದಾಯಕ್ಕೆ ಭೂಮಿ ಸಿಕ್ಕಿದಲ್ಲಿ ಭವಿಷ್ಯದ ಮಂದಿ ಜೀವನ ನಡೆಸಲು ಸಾಧ್ಯ. ಈ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ರಾಜ್ಯದಲ್ಲಿಯೂ ಭೂಮಿ, ವಸತಿಗಾಗಿ ಹೋರಾಟ ನಡೆಯುತ್ತಿದೆ. ಜು.18ರಂದು ರಾಜ್ಯದ ಎಲ್ಲಾ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ, ಮನವಿ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಭೂಮಿಗಾಗಿ 5 ನಮೂನೆ ಅರ್ಜಿ ಹಾಕಿದ್ದರೂ ವಿಲೇವಾರಿಯಾಗದೇ ನ್ಯಾಯ ಸಿಗದಿದ್ದು ಇದಕ್ಕೆ ಒಗ್ಗಟ್ಟಿನ ಕೊರತೆ, ಅಕ್ರಮ ಸಕ್ರಮ ಕಮಿಟಿಯಲ್ಲಿರುವ ವ್ಯಕ್ತಿಗಳು, ತಿಳುವಳಿಕೆಯಿಲ್ಲದ ಪ್ರತಿನಿಧಿಗಳಿಂದ ದಲಿತರ ಅರ್ಜಿ ಬಾಕಿ ಯಾಗುತ್ತಿದೆ. ಆದರೆ ಇತರರಿಗೆ ರಾಜಕೀಯ ಪ್ರಭಾವದಿಂದ ಜಾಗ ಮಂಜೂರಾಗುತ್ತಿರುವುದು ದುರಂತ. ರಾಜಕೀಯದವರು, ಪಕ್ಷದವರು ಜಾಗ ಮಾಡಿಸಿಕೊಡುತ್ತಾರೆಂಬುದು ಕನಸಿನ ಮಾತು. ಹಲವಾರು ವರ್ಷಗಳಿಂದ ಅರ್ಜಿಗಳು ಬಾಕಿಯಿದೆ. ಸರಕಾರ, ಅಧಿಕಾರಿಗಳ ವಿರುದ್ಧ ದಲಿತರು ಧ್ವನಿಯೆ ತ್ತಬೇಕು, ಅಗತ್ಯವಿದ್ದಲ್ಲಿ ಬೀದಿಗಿಳಿದು ಹೋರಾಟ ಮಾಡಬೇಕು ಎಂದರು.

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಶಿಕ್ಷಣ, ಸಂಘಟನೆ, ಹೋರಾಟ ಎಂದಿದ್ದಾರೆ. ಶಿಕ್ಷಣ ಜ್ಞಾನ ನೀಡಿದರೆ ಭೂಮಿಯು ಒಂದು ನಿಶ್ಚಿತ ಬದುಕು ಕಟ್ಟಿಕೊಡುತ್ತದೆ. ಜಿಲ್ಲೆಯಲ್ಲಿ ಡಿಸಿ ಮನ್ನಾಭೂಮಿ ಮೇಲ್ವರ್ಗದವರಿಂದ ಕಬಳಿಕೆಯಾಗಿದ್ದು ಇದಕ್ಕೆ ರಾಜಕೀಯ ಪ್ರತಿನಿಧಿಗಳು ನೇರ ಕಾರಣ. ಇದಕ್ಕಾಗಿ ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಸಂಘಟಿತ ಹೋರಾಟ ನಡೆಸಲಾಗು ವುದು ಎಂದು ತಿಳಿಸಿದರು.

ಜಿಲ್ಲಾ ಸಂಘಟನಾ ಸಂಚಾಲಕರಾದ ಸುರೇಶ್ ಹಕ್ಲಾಡಿ, ಶ್ಯಾಮಸುಂದರ್ ತೆಕ್ಕಟ್ಟೆ, ಮಂಜುನಾಥ ನಾಗೂರು, ಜಿಲ್ಲಾಸಮಿತಿ ಸದಸ್ಯರಾದ ಗೋಪಾಲಕೃಷ್ಣ ನಾಡ, ಕುಮಾರ್ ಕೋಟ, ಮಹಿಳಾ ಒಕ್ಕೂಟದ ಸಂಘಟನಾ ಸಂಚಾಲಕಿ ಗೀತಾ ಸುರೇಶ್, ತಾಲೂಕು ಸಂಘಟನಾ ಸಂಚಾಲಕಿ ಭವಾನಿ ನಾಯ್ಕ್, ಜ್ಯೋತಿ ರಟ್ಟಾಡಿ, ದಸಂಸ ಬೈಂದೂರು ತಾಲೂಕು ಸಂಚಾಲಕ ಶಿವರಾಜ್, ಬ್ರಹ್ಮಾವರ ತಾಲೂಕು ಸಂಚಾಲಕ ಹರಿಶ್ಚಂದ್ರ, ತಾಲೂಕು ಕೋಶಾಧಿಕಾರಿ ಚಂದ್ರ ಕೊರ್ಗಿ, ಮಹಿಳಾ ಸಂಚಾಲಕಿ ಕುಸುಮಾ ಕುಂದಾಪುರ, ತಾಲೂಕು ಸಂಘಟನಾ ಸಂಚಾಲಕರಾದ ಸತೀಶ್ ರಾಮನಗರ, ಶ್ರೀಕಾಂತ ಹಿಜಾಣ, ಉದಯ ಕೋಳೂರು, ಅಶೋಕ್ ಮೊಳಹಳ್ಳಿ, ಭಾಸ್ಕರ್ ಕುಂಟೋಳಿ, ಚಂದ್ರ ಉಳ್ಳೂರು, ಪ್ರಶಾಂತ ಹೈಕಾಡಿ, ನಿವೃತ್ತ ಎಲ್‌ಐಸಿ ನೌಕರ ಗೋಪಾಲ್ ಮೊದಲಾದವರಿದ್ದರು.

ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ್ ಗಿಳಿಯಾರು ಪ್ರಸ್ತಾವಿಸಿಕವಾಗಿ ಮಾತನಾಡಿ ದರು. ತಾಲೂಕು ಪ್ರಧಾನ ಸಂಚಾಲಕ ರಾಜು ಕೆ.ಸಿ. ಬೆಟ್ಟಿನಮನೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ

ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಡಳಿತ, ಅಧಿಕಾರಿಗಳು, ಜನಪ್ರತಿನಿಧಿಗಳು ದಲಿತ ಸಮುದಾಯದವರನ್ನು ಭೂಮಿಹಕ್ಕಿನಿಂದ ದೂರವಿಟ್ಟಿದ್ದಾರೆ. ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡಕ್ಕೆ ಮೊದಲು ಭೂಮಿ ಹಂಚಿಕೆ ಮಾಡಬೇಕೆಂಬ ಸರಕಾರದ ಸುತ್ತೋಲೆಯನ್ನು ಮೀರಿ ರಾಜಕೀಯ, ಜಾತಿ ಪ್ರಭಾವ, ಹಣವಂತರಿಗೆ ಎಕರೆ ಗಟ್ಟಲೆ ನೀಡಲಾಗಿದೆ. ಇದರಿಂದ ದಲಿತರು, ಶೋಷಿತರಿಗೆ ಜಾಗ ಸಿಗದಾಗಿದೆ. ಹೀಗಾಗಿ ಕರ್ನಾಟಕ ದಸಂಸ ವತಿಯಿಂದ ಕಂದಾಯ ಅದಾಲತ್ ಎನ್ನುವ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಜಿಲ್ಲಾ ಪ್ರಧಾನ ಸಂಚಾಲಕ ಟಿ.ಮಂಜುನಾಥ್ ಗಿಳಿಯಾರು ತಿಳಿಸಿದರು.

ಭೂಮಿ ಹಕ್ಕಿಗಾಗಿ ನಮೂನೆ 50, 53, 57, 94ಸಿ, 94ಸಿಸಿ ಅರ್ಜಿಕೊಟ್ಟವರ ಅರ್ಜಿ ವಜಾ ಮಾಡಿರು ವುದು, ಬಾಕಿಯಿಟ್ಟಿರುವ ಮಾಹಿತಿ ಪಡೆದು ಎಲ್ಲಾ ಅರ್ಜಿಗಳನ್ನು ಕ್ರೋಡೀಕರಿಸಿ ತಹಶಿಲ್ದಾರ್‌ಗೆ ಮನವಿ ನೀಡಿ ದಲಿತರ ಸಮಸ್ಯೆ ಶೀಘ್ರ ಪರಿಹಾರಕ್ಕೆ ಆಗ್ರಹಿಸಲಾಗುತ್ತದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುತ್ತದೆ. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುತ್ತದೆ. ದಲಿತರ ಭೂಮಿ ಹಕ್ಕನ್ನು ಪ್ರಥಮ ಆದ್ಯತೆಯಡಿ ಶೀಘ್ರ ನೀಡಲು ಕ್ರಮವಹಿಸಬೇಕು ಎಂದು ಅವರು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X