Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂವಿಧಾನ ವಿರೋಧಿ ಸಂಘಟನೆಗಳನ್ನು...

ಸಂವಿಧಾನ ವಿರೋಧಿ ಸಂಘಟನೆಗಳನ್ನು ದಿಕ್ಕರಿಸಿ: ಕಲ್ಕುಳಿ ವಿಠಲ್ ಹೆಗ್ಡೆ

ಉಡುಪಿ ನಗರದಲ್ಲಿ ಸರ್ವಧರ್ಮೀಯರಿಂದ ’ಸೌಹಾರ್ದ ಸಂಚಾರ’

ವಾರ್ತಾಭಾರತಿವಾರ್ತಾಭಾರತಿ14 July 2025 10:19 PM IST
share
ಸಂವಿಧಾನ ವಿರೋಧಿ ಸಂಘಟನೆಗಳನ್ನು ದಿಕ್ಕರಿಸಿ: ಕಲ್ಕುಳಿ ವಿಠಲ್ ಹೆಗ್ಡೆ

ಉಡುಪಿ, ಜು.14: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ಹೃದಯ ಹೃದಯಗಳನ್ನು ಬೆಸೆ ಯೋಣ ಎಂಬ ಧೈಯವಾಕ್ಯದೊಂದಿಗೆ ಹಮ್ಮಿಕೊಳ್ಳಲಾದ ’ಸೌಹಾರ್ದ ಸಂಚಾರ’ವನ್ನು ಸೋಮವಾರ ಉಡುಪಿ ನಗರದಲ್ಲಿ ಹಮ್ಮಿಕೊಳ್ಳಲಾಯಿತು.

ಉಡುಪಿ ಜಾಮೀಯ ಮಸೀದಿಯಿಂದ ಆರಂಭಗೊಂಡ ಸೌಹಾರ್ದ ಸಂಚಾರವು ನಗರದ ಪ್ರಮುಖ ರಸ್ತೆಯಲ್ಲಿ ಸಾಗಿ ಉಡುಪಿ ಶೋಕಾ ಮಾತಾ ಇಗರ್ಜಿಯಲ್ಲಿ ಸಮಾಪ್ತಿಗೊಂಡಿತು.

ಬಳಿಕ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಹೋರಾಟಗಾರ ಕಲ್ಕುಳಿ ವಿಠಲ್ ಹೆಗ್ಡೆ, ನಮ್ಮ ಎಲ್ಲರ ಸಮಸ್ಯೆಗಳನ್ನು ನಮ್ಮ ಸಂವಿಧಾನವು ಸಾಮರಸ್ಯ, ಸಮಾನತೆ ಹಾಗೂ ಜಾತ್ಯತೀತವಾಗಿ ಬಗೆಹರಿಸಿ ಕೊಡುತ್ತದೆ. ಆ ಸಂವಿಧಾನದ ಆತ್ಮವಾಗಿರುವ ಸಮಾನತೆ ಹಾಗೂ ಜಾತ್ಯತೀತೆಯನ್ನು ಪ್ರಶ್ನೆ ಮಾಡು ವವರು ಇಂದು ಅಧಿಕಾರದಲ್ಲಿ ಇದ್ದಾರೆ. ಇದರಿಂದ ನಮ್ಮ ಸಂವಿಧಾನವೇ ಇಂದು ಬಿಕ್ಕಟ್ಟಿನಲ್ಲಿದೆ. ಆದುದರಿಂದ ಈ ದೇಶದ ಪ್ರಜ್ಞಾವಂತ ಎಲ್ಲ ನಾಗರಿಕರು ಎಚ್ಚೆತ್ತು ಕೊಳ್ಳಬೇಕು ಎಂದು ಹೇಳಿದರು.

ನಮ್ಮ ಧರ್ಮ, ನಂಬಿಕೆಗಳು ಖಾಸಗಿಯೇ ಹೊರತು ಸಾರ್ವಜನಿಕ ಅಲ್ಲ. ಅದನ್ನು ಒಬ್ಬರ ಮೇಲೆ ಎತ್ತಿ ಕಟ್ಟಿ ಅಮಾಯಕರ ಕೊಲೆ ಮಾಡುವ ಕೃತ್ಯಗಳು ಈ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಈ ನಾಡಿನ ಸಾವಿರಾರು ವರ್ಷಗಳಿಂದ ಎಲ್ಲ ಜಾತಿ ಧರ್ಮದವರು ಸೌಹಾದರ್ತೆಯಿಂದ ಬಾಳಿ ಬದುಕುತ್ತಿದ್ದರು. ಆದರೆ ಇತ್ತೀಚಿನ ವರ್ಷಗಳಿಂದ ಕೆಲವು ವ್ಯಕ್ತಿಗಳ ಪ್ರಚೋದನೆಗೆ ನಮ್ಮ ಜನರು ಬಲಿಯಾಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ಇಂದು ಜೈಲುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದುಳಿದ ಹಾಗೂ ಕೆಲ ಜಾತಿಯ ಯುವಕರೇ ಇದ್ದಾರೆ. ದುಡಿದು ತಿನ್ನಬೇಕಾದ ಹಾಗೂ ತಂದೆತಾಯಿಗೆ ಆಸರೆಯಾಗಬೇಕಾದ ಮಕ್ಕಳು ಜೈಲಿನಲ್ಲಿ ಕೊಳೆಯುತ್ತಿರುವುದು ದುರಂತ. ಆ ದುಷ್ಟ ಶಕ್ತಿಯನ್ನು ನಾವೆಲ್ಲ ಸೇರಿ ಸೋಲಿಸಬೇಕು. ಸಮಾನತೆ, ಸಂವಿಧಾನ, ಜಾತ್ಯತೀತತೆ ವಿರುದ್ಧ ಇರುವ ಸಂಘಟನೆಗಳನ್ನು ನಾವೆಲ್ಲ ಒಗ್ಗಟ್ಟು ಆಗುವ ಮೂಲಕ ದಿಕ್ಕರಿಸಬೇಕು ಎಂದು ಅವರು ಹೇಳಿದರು.

ಸಾಮಾಜಿಕ ಹೋರಾಟಗಾರ ಅಮೃತ್ ಶೆಣೈ, ಸೌಹಾರ್ದ ಸಂಚಾರ ಸಮಿತಿಯ ಅಧ್ಯಕ್ಷ ಹಂಝತ್ ಹೆಜಮಾಡಿ, ಬೈಂದೂರು ಜೋಗಿಮನೆಯ ಶ್ರೀವಸಂತನಾಥ ಗುರುಜೀ, ಚರ್ಚಿನ ಸಹಾಯಕ ಧರ್ಮಗುರು ರೆ.ಫಾ. ಲಿಯೋ ಪ್ರವೀಣ್ ಡಿಸೋಜ ಸೌಹಾರ್ದ ಸಂದೇಶ ನೀಡಿದರು.

ಧರ್ಮಗುರು ಫಾದರ್ ವಿಲಿಯಂ ಮಾರ್ಟಿಸ್, ಎಸ್‌ವೈಎಸ್ ಸಮಿತಿಯ ರಾಜ್ಯಾಧ್ಯಕ್ಷ ಬಶಿರ್ ಸಅದಿ ಬೆಂಗಳೂರು, ಪ್ರಧಾನ ಕಾರ್ಯದರ್ಶಿ ಮೌಲಾನ ಅಬೂಬಕರ್ ಸಿದ್ದೀಕ್ ಮೊಂಟಗೊಳಿ, ನ್ಯಾಯವಾದಿ ಹಬೀಬ್, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ, ಪ್ರಮುಖರಾದ ಎಂ.ಎ.ಗಫೂರ್, ಡಾ.ಗಣನಾಥ ಎಕ್ಕಾರು, ಪ್ರಶಾಂತ್ ಜತ್ತನ್ನ, ರಮೇಶ್ ಕಾಂಚನ್, ಸುಂದರ್ ಮಾಸ್ಟರ್, ಶ್ಯಾಮರಾಜ್ ಬಿರ್ತಿ, ನಾಗೇಶ್ ಉದ್ಯಾವರ, ಪ್ರಭಾಕರ ಪೂಜಾರಿ, ಸುಭಾನ್ ಹೊನ್ನಾಳ, ಇಸ್ಮಾಯಿಲ್ ಹುಸೇನ್ ಕಟಪಾಡಿ, ಹನೀಫ್ ಹಾಜಿ ಅಂಬಾಗಿಲು, ತೌಫಿಕ್ ಹಾಜಿ ಮೊದಲಾದವರು ಉಪಸ್ಥಿತರಿದ್ದರು. ಎಸ್‌ವೈಎಸ್ ರಾಜ್ಯ ಸಂಯೋಜಕ ಅಬ್ದುರ‌್ರಹ್ಮಾನ್ ರಝ್ವಿ ಕಲ್ಕಟ್ಟ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X