ಉಡುಪಿ: ಗ್ರಾಪಂಗಳ ಮುಂಭಾಗ ಕಾಂಗ್ರೆಸ್ ನಿಂದ ‘ಸತ್ಯದರ್ಶನ’ ಪ್ರತಿಭಟನೆ

ಉಡುಪಿ, ಜು.16: ಇತ್ತೀಚೆಗೆ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಡೆಕಾರ್, ಅಂಬಲಪಾಡಿ, ಬಡಾನಿಡಿಯೂರು ಹಾಗೂ ತೆಂಕನಿಡಿಯೂರು ಗ್ರಾಪಂಗಳ ಮುಂಭಾಗದಲ್ಲಿ ಕಾಂಗ್ರೆಸ್ ಪಕ್ಷದ ಸತ್ಯದರ್ಶನ ಪ್ರತಿಭಟನೆಯನ್ನು ಜು.15ರಂದು ಹಮ್ಮಿಕೊಳ್ಳಲಾಗಿತ್ತು.
ಕಡೆಕಾರಿನಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, 9/11 ಸಮಸ್ಯೆ, ಅಕ್ರಮ ಸಕ್ರಮ 53 ಮತ್ತು 57 ಅರ್ಜಿ ತಿರಸ್ಕಾರ, ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ರದ್ದತಿ ಹಾಗೂ ವಿದ್ಯುತ್ ದರ ಏರಿಕೆಯ ಕುರಿತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಆರೋಪಿಸಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಉಡುಪಿಯ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಗಮನಹರಿಸಲಿ. ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಬದಲು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿರುವ ಮಲ್ಪೆ ರಾಷ್ಟ್ರೀಯ ಹೆದ್ದಾರಿ, ಅಂಬಲಪಾಡಿ ರಸ್ತೆ, ಪರ್ಕಳ ರಸ್ತೆ ಹಾಗೂ ಸಂತೆಕಟ್ಟೆ ರಸ್ತೆಯ ಕಾಮಗಾರಿಯ ಬಗ್ಗೆ ಒತ್ತಾಯಿಸಲಿ. ಧರ್ಮದ ರಾಜಕಾರಣವನ್ನು ಬಿಟ್ಟು ಇನ್ನಾದರೂ ಅಭಿವೃದ್ಧಿಗೆ ಗಮನ ಕೊಡಲಿ ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಮುಖಂಡರಾದ ಪ್ರಸಾದ್ರಾಜ್ ಕಾಂಚನ್, ಕಡೆಕಾರ್ ಗ್ರಾಪಂ ಅಧ್ಯಕ್ಷ ಜಯಕರ್ ಶೇರಿಗಾರ್, ಉಪಾಧ್ಯಕ್ಷ ನವೀನ್ ಶೆಟ್ಟಿ, ಸದಸ್ಯರಾದ ಸರಸ್ವತಿ, ತಾರಾನಾಥ್ ಸುವರ್ಣ, ಸುಕನ್ಯಾ ಪೂಜಾರಿ, ಲೀಲಾ ಕುಂದರ್, ಇಂದಿರಾ ಶೆಟ್ಟಿ, ರಮೇಶ್ ಕೋಟ್ಯಾನ್, ನಿರ್ಮಲಾ, ವೀಣಾ ಪ್ರಕಾಶ್, ರಂಜಿತಾ, ದಿನೇಶ್, ನಾಯಕರಾದ ಮಹಾಬಲ ಕುಂದರ್, ನರಸಿಂಹಮೂರ್ತಿ, ಐರಿನ್ ಅಂದ್ರಾದೆ, ವನಜಾ ಜಯಕರ್, ನಳಿನಾಕ್ಷಿ ಬಂಗೇರ, ಸದಾನಂದ್ ಕುಲಾಲ್, ಸುರೇಶ್ ಶೆಟ್ಟಿ, ದಿನೇಶ್ ಪೂಜಾರಿ, ಗಣೇಶ್ ನೆರ್ಗಿ, ಸಂಧ್ಯಾ ತಿಲಕ್ ರಾಜ್, ಸತೀಶ್ ಕೊಡವೂರು, ಸತೀಶ್ ಮಂಚಿ ಉಪಸ್ಥಿತರಿದ್ದರು.
ಅಂಬಲಪಾಡಿ: ಇಲ್ಲಿ ನಡೆದ ಸಭೆಯನ್ನುದ್ದೇಶಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಹರೀಶ್ ಕಿಣಿ ಮಾತನಾಡಿದರು.
ಮುಖಂಡರಾದ ಅಶೋಕ್ ಕುಮಾರ್ ಕೊಡವೂರು, ರಮೇಶ್ ಕಾಂಚನ್, ಪ್ರಸಾದ್ ರಾಜ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಮಹಾಬಲ ಕುಂದರ್, ಲಕ್ಷ್ಮಣ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಬಡಾನಿಡಿಯೂರು: ಇಲ್ಲಿ ನಡೆದ ಸಭೆಯನ್ನುದ್ದೇಶಿಸಿ ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಮಾತನಾಡಿದರು.
ಮುಖಂಡರಾದ ರಮೇಶ್ ಕಾಂಚನ್, ಪ್ರಸಾದ್ ರಾಜ್ ಕಾಂಚನ್, ಹರೀಶ್ ಕಿಣಿ, ಪ್ರಖ್ಯಾತ್ ಶೆಟ್ಟಿ, ಮಹಾಬಲ ಕುಂದರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಸುರೇಶ್ ಶೆಟ್ಟಿ ಬಡಾನಿಡಿಯೂರು, ಯುವರಾಜ್ ಪುತ್ತೂರು, ಕಿರಣ್ ಕುಂದರ್, ರಾಮಪ್ಪ ಸಾಲ್ಯಾನ್, ಬಂಧು ಕಾಂಚನ್, ಜಗದೀಶ್ ಸುವರ್ಣ, ವನಿತಾ ಫೆರ್ನಾಂಡಿಸ್ ಉಪಸ್ಥಿತರಿದ್ದರು.
ತೆಂಕನಿಡಿಯೂರು: ಇಲ್ಲಿ ನಡೆದ ಸಭೆಯನ್ನುದ್ದೇಶಿಸಿ ಉಡುಪಿ ವಿಧಾನಸಭಾ ಕಾಂಗ್ರೆಸ್ ಪಕ್ಷದ ನಾಯಕ ಪ್ರಸಾದ್ ರಾಜ್ ಕಾಂಚನ್ ಮಾತನಾಡಿದರು.
ಮುಖಂಡರಾದ ರಮೇಶ್ ಕಾಂಚನ್, ಹರೀಶ್ ಕಿಣಿ, ಮಹಾಬಲ ಕುಂದರ್, ದಿನಕರ ಹೇರೂರು, ಗ್ರಾಪಂ ಅಧ್ಯಕ್ಷೆ ಶೋಭಾ ನಾಯ್ಕ್, ಸದಸ್ಯರಾದ ರವಿರಾಜ್, ಶರತ್ ಶೆಟ್ಟಿ, ಅನುಷಾ ಆಚಾರ್ಯ, ವಿನಯಾ ಆಚಾರ್ಯ, ಸತೀಶ್ ನಾಯ್ಕ್, ಸುರೇಶ್ ನಾಯಕ್, ಪೃಥ್ವಿರಾಜ್ ಶೆಟ್ಟಿ ಉಪಸ್ಥಿತರಿದ್ದರು.







