Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊಂಕಣ ರೈಲ್ವೆಯಿಂದ ರೋ-ರೋ ಕಾರು ಸೇವೆ...

ಕೊಂಕಣ ರೈಲ್ವೆಯಿಂದ ರೋ-ರೋ ಕಾರು ಸೇವೆ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ21 July 2025 9:53 PM IST
share
ಕೊಂಕಣ ರೈಲ್ವೆಯಿಂದ ರೋ-ರೋ ಕಾರು ಸೇವೆ ಪ್ರಾರಂಭ

ಉಡುಪಿ: 1999ರಿಂದ ಭಾರತದಲ್ಲಿ ಟ್ರಕ್‌ಗಳ ರೋಲ್ ಆನ್- ರೋಲ್ ಆಫ್ (ರೋ-ರೋ) ಸೇವೆ ನೀಡು ತ್ತಿರುವ ಕೊಂಕಣ ರೈಲ್ವೆ ನಿಗಮ, ಇದೀಗ ಈ ಸೇವೆಯನ್ನು ಖಾಸಗಿ ಕಾರು ಮಾಲಕರಿಗೂ ವಿಸ್ತರಿಸಲು ಸನ್ನದ್ಧವಾಗಿದೆ. ಸದ್ಯಕ್ಕೆ ಮಹಾರಾಷ್ಟ್ರದ ಕೋಲಾಡ್ ಹಾಗೂ ಗೋವಾದ ವೆರ್ಣ ನಡುವೆ ಈ ಸೇವೆಯನ್ನು ಆಗಸ್ಟ್ 23ರಿಂದ ಪ್ರಾರಂಭಿಸಲು ನಿರ್ಧರಿಸಿದೆ.

ಪಶ್ಚಿಮ ಘಟ್ಟ ದುರ್ಗಮ ಪ್ರದೇಶದಲ್ಲಿ ಸರಕುಗಳಿಂದ ತುಂಬಿದ ಟ್ರಕ್‌ಗಳನ್ನು ಮುಂಬಯಿಯಿಂದ ಮಂಗಳೂರುವರೆಗೆ ಸುಲಭದಲ್ಲಿ ತಲುಪಿಸುತಿದ್ದ ರೋ-ರೋ ವ್ಯವಸ್ಥೆ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವಲ್ಲಿ ಸಫಲವಾಗಿತ್ತು. ಇದರೊಂದಿಗೆ ತೈಲದ ಬಳಕೆ ಹಾಗೂ ವಾಯು-ಹೊಗೆ ಮಾಲಿನ್ಯದಿಂದಲೂ ವಾತಾವರಣವನ್ನು ರಕ್ಷಿಸಿತ್ತು.

ರೋ-ರೋ ಟ್ರಕ್ ಸೇವೆಯ ಯಶಸ್ಸಿನಿಂದ ಉತ್ತೇಜಿತವಾದ ಕೊಂಕಣ ರೈಲ್ವೆ ಇದೀಗ ಕಾರು ಸೇವೆ ಯನ್ನು ಪ್ರಾರಂಭಿಸಲಿದೆ.ಆ.23ರಿಂದ ಕೋಲಾಡ್ ಹಾಗೂ ಆ.24ರಿಂದ ವೆರ್ಣದಿಂದ ಈ ಸೇವೆ ಆರಂಭ ಗೊಳ್ಳಲಿದ್ದು, ದಿನ ಬಿಟ್ಟು ದಿನ ಈ ಸೇವೆ ಸೆ.11ರವರೆಗೆ ಲಭ್ಯವಿರುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಪ್ರತಿದಿನ ಸಂಜೆ 5ಗಂಟೆಗೆ ಆಯಾ ನಿಲ್ದಾಣದಿಂದ ಹೊರಡುವ ರೈಲು ಮರುದಿನ ಮುಂಜಾನೆ 5 ಗಂಟೆಗೆ ತನ್ನ ಗುರಿ ತಲುಪಲಿದೆ. ಈ ಸೇವೆಯನ್ನು ಪಡೆಯಲು ಇಚ್ಛಿಸುವ ಗ್ರಾಹಕರು ಮೂರು ಗಂಟೆ ಮೊದಲೇ ನಿಲ್ದಾಣಗಳಲ್ಲಿ ಹಾಜರಿರಬೇಕು ಎಂದು ತಿಳಿಸಿದೆ.

ವಿಶೇಷವಾಗಿ ವಿನ್ಯಾಸಗೊಳಿಸಿದ ರೇಕ್‌ಗಳಲ್ಲಿ 40 ಕಾರುಗಳಿಗೆ ಇರಲು ಅವಕಾಶಗಳಿವೆ. ಇದಕ್ಕಾಗಿ ಪ್ರತಿ ಕಾರಿಗೆ ಜಿಎಸ್‌ಟಿ ಸೇರಿ 7,875 ರೂ. ಚಾರ್ಜ್ ಮಾಡಲಾಗುತ್ತದೆ. ಇದರೊಂದಿಗೆ ಪ್ರತಿ ಕಾರಿಗೆ ಮೂವರು ರೈಲಿನಲ್ಲಿರುವ 3ಎಸಿ ಕೋಚ್‌ನಲ್ಲಿ ಅಥವಾ ಸೀಟಿಂಗ್ ಕೋಚ್‌ನಲ್ಲಿ ನಿರ್ದಿಷ್ಟ ಮೊತ್ತ ನೀಡಿ ಪ್ರಯಾಣಿಸ ಬಹುದು.

ಪ್ರತಿ ಟ್ರಿಪ್‌ಗೆ ಕನಿಷ್ಠ 16 ಕಾರುಗಳು ಬುಕ್ ಆಗಿರಬೇಕು. ಇಲ್ಲದಿದ್ದರೆ ಆ ಟ್ರಿಪ್‌ನ್ನು ರದ್ದುಪಡಿಸಲಾಗುತ್ತದೆ ಹಾಗೂ ಮುಂಗಡ ಹಣವನ್ನು ಗ್ರಾಹಕರಿಗೆ ಹಿಂದಿರುಗಿಸಲಾಗುತ್ತದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X