ಕುಂದಾಪುರದಲ್ಲಿ ಮೂಲ ಜಾನಪದ ಸಂಸ್ಕೃತಿ ಜೀವಂತ: ಡಾ.ಬಾಲಾಜಿ

ಕುಂದಾಪುರ, ಜು.27: ಹಾಲಾಡಿಯ ರಾಜೀವ್ ಶೆಟ್ಟಿ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಕನ್ನಡ ಜಾನಪದ ಪರಿಷತ್ ಅಂಗ ಸಂಸ್ಥೆ ಜಾನಪದ ಯುವ ಬ್ರಿಗೇಡ್ ಉಡುಪಿ ಜಿಲ್ಲಾ ಘಟಕದ ಉದ್ಘಾ ಟನೆಯನ್ನು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್.ಬಾಲಾಜಿ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಕುಂದಾಪುರದ ಗ್ರಾಮೀಣ ಭಾಗಗಳಲ್ಲಿ ಮೂಲ ಜಾನಪದ ಸಂಸ್ಕೃತಿ ಜೀವಂತವಾಗಿದೆ. ಅಳಿವಿನ ಅಂಚಿನಲ್ಲಿರುವ ಮೂಲ ಜಾನಪದ ಕಲೆಗಳನ್ನು ದಾಖಲಿಕಾರಣ ಮೂಲಕ ಜಾನಪದ ಯುವ ಬ್ರಿಗೇಡ್ ಉಡುಪಿ ಜಿಲ್ಲಾ ಘಟಕ ಜಾನಪದ ಸಂರಕ್ಷಣೆ ಕಾರ್ಯದಲ್ಲಿ ತೊಡಗಲಿದೆ. ಯುವಜನರು ಸ್ಥಳೀಯ ಜಾನಪದ ಕಲೆಯನ್ನು ಅನುಕರಣೆ ಮಾಡಿ ಅದನ್ನೇ ಅಭ್ಯಾಸ ಮಾಡಬೇಕೆಂದರು.
ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ, ಸಾಹಿತಿ ಮಂಜುನಾಥ್ ಕಾಮತ್ ಮಾತನಾಡಿ ದರು. ಜಾನಪದ ಯುವ ಬ್ರಿಗೇಡ್ ಜಿಲ್ಲಾ ಸಂಚಾಲಕರಾಗಿ ವಿನಯ್, ಸಹ ಸಂಚಾಲಕರಾಗಿ ಶರತ್ ಪೂಜಾರಿ, ಬೈಂದೂರ್ ಸಂಚಾಲಕರಾಗಿ ದರ್ಶನ್ ಪೂಜಾರಿ, ಸ್ವಸ್ಟಿಕ್ ಬಂಡಾರಿ, ಪ್ರಕೃತಿ ಸಾಲಿಗ್ರಾಮ, ಸೌಪಣಿಕ ಪದವಿ ಸ್ವೀಕರಿಸಿದರು.
ಗ್ರಾಪಂ ಸದಸ್ಯರಾದ ಗುರುಪ್ರಸಾದ್ ಶೆಟ್ಟಿ, ಜನಾರ್ದನ್ ಹಾಲಾಡಿ, ಪುನೀತ್ ಪೂಜಾರಿ, ಕಾಲೇಜಿನ ಉಪನ್ಯಾಸಕರು ಪ್ರಕಾಶ್, ಚಂದ್ರಶೇಖರ, ಗಣಪತಿ ಹೆಗಡೆ, ಕುಮಾರ್ ಕಲಾವಿದ ಗುಂಡು ಪೂಜಾರಿ, ಜಾನಪದ ಯುವ ಬ್ರಿಗೇಡ್ ರಾಜ್ಯ ಸಂಚಾಲಕರು ಅಭಿ ಶೆಟ್ಟಿ, ಕರಾವಳಿ ವಿಭಾಗ ಸಂಚಾಲಕರು ಸಂದೇಶ್ ನಾಯಕ, ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರು ಸಂಪತ್ ಕುಮಾರ್ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಸರ ರಾಜ್ಯ ಮಹಿಳಾ ಘಟಕ ಸಂಚಾಲಕಿ ಡಾ ಭಾರತಿ ಮರವಂತೆ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಹಾಲಾಡಿ ಚಂಡೆ ತಂಡ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಂದ ಜನಪದ ಕಾರ್ಯಕ್ರಮ ಹಾಗೂ ಯಕ್ಷಗಾನ ಪ್ರದರ್ಶನ ನೀಡಲಾಯಿತು.







