Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ...

ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಮೀನಾಮೇಷ: ಸದಸ್ಯರ ಆಕ್ರೋಶ

ಕುಂದಾಪುರ ಪುರಸಭಾ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ31 July 2025 10:03 PM IST
share
ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಮೀನಾಮೇಷ: ಸದಸ್ಯರ ಆಕ್ರೋಶ

ಕುಂದಾಪುರ, ಜು.31: ನಗರದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಿಸಿ, ವೃತ್ತ ರಚಿಸುವ ಬಗ್ಗೆ ಗುರುವಾರ ನಡೆದ ಕುಂದಾಪುರ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ತಳಸಮುದಾಯದ ನಾಯಕನ ಪುತ್ಥಳಿ ನಿರ್ಮಾಣಕ್ಕೆ ವಿರೋಧ ಬರುವುದರ ಹಿಂದೆ ಯಾರ ಕೈವಾಡವಿದೆ ಎಂದು ಸದಸ್ಯರು ಪುರಸಭಾ ಮುಖ್ಯಾಧಿಕಾರಿಯನ್ನು ತೀವ್ರವಾಗಿ ತರಾಟೆಗೆ ತೆಗೆದು ಕೊಂಡರು.

ಪುರಸಭಾ ಅಧ್ಯಕ್ಷ ಮೋಹನದಾಸ ಶೆಣೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಈ ಹಿಂದಿನ ಸಭೆಗಳಲ್ಲಿ ಮಾಡಿದ ಸರ್ವಾನುಮತದ ನಿರ್ಣಯ ಇದ್ದರೂ ಪೊಲೀಸರಿಂದ ಆಕ್ಷೇಪ ಬಂದಿರುವುದನ್ನು ಉಲ್ಲೇಖಿಸಿ, ಸದಸ್ಯರಾದ ಗಿರೀಶ್ ಜಿ.ಕೆ., ಚಂದ್ರಶೇಖರ ಖಾರ್ವಿ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ್ ವಿ. ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

‘ಪೊಲೀಸರಲ್ಲಿ ಕೇಳಿ ಪುರಸಭೆ ಮಾಡುವುದಲ್ಲ. ಸುಪ್ರಿಂಕೋರ್ಟ್ ತೀರ್ಪು ಉಲ್ಲೇಖಿಸಿ ಪೊಲೀಸರು ಆಕ್ಷೇಪಿಸಿದರೆ, ತೀರ್ಪಿನ ಬಳಿಕ ದೇಶದಲ್ಲಿ ಒಂದೇ ಒಂದು ಪ್ರತಿಮೆ, ವೃತ್ತ ನಿರ್ಮಾಣ ನಡೆಯಲಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.

ಲೆಕ್ಕಾಧಿಕಾರಿ ಸಭೆಗೆ ಹಾಜರಾಗಿಲ್ಲ, ತಪ್ಪು ಮಾಹಿತಿ ನೀಡುತ್ತಾರೆ. ಸದಸ್ಯರ ಹಕ್ಕುಚ್ಯುತಿ ಆಗುತ್ತಿದೆ. ಲೆಕ್ಕಪತ್ರ ಸರಿ ಇಲ್ಲ ಎಂದು ಉಲ್ಲೇಖಿಸಿದ ನಿರ್ಣಯ ವನ್ನೇ ಬರೆಯಲಿಲ್ಲ ಎಂದು ಗಿರೀಶ್, ಶ್ರೀಧರ ಶೇರೆಗಾರ್, ಚಂದ್ರಶೇಖರ ಖಾರ್ವಿ ಹೇಳಿದರು. ಮುಂದಿನ ಸಭೆಗೆ ಕರೆಸಲಾಗುವುದು ಎಂದು ಮುಖ್ಯಾಧಿಕಾರಿ ಆನಂದ್ ಜೆ.ಸಮಜಾಯಿಷಿ ನೀಡಿದರು.

ಹೆದ್ದಾರಿ, ಸರ್ವಿಸ್ ರಸ್ತೆ ಸಮಸ್ಯೆ ಬಗ್ಗೆ ಪುರಸಭೆಯ ನಿರ್ಣಯ, ಒತ್ತಾಯ ಗಳನ್ನು ಹೆದ್ದಾರಿ ಪ್ರಾಧಿಕಾರ, ಗುತ್ತಿಗೆದಾರರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿ ಬಳಿ ನಿಯೋಗ ಕೊಂಡೊಯ್ದು ಪ್ರಾಧಿಕಾರದ ವಿರುದ್ಧ ಕ್ರಮಕ್ಕೆ ಒತ್ತಾಯಿಸಬೇಕು ಎಂದು ಗಿರೀಶ್ ಅಧ್ಯಕ್ಷರನ್ನು ಒತ್ತಾಯಿಸಿದರು.ಸಂಸದರ ಬಳಿ ಹೇಳಿದರೂ ಪ್ರಾಧಿಕಾರದವರು ಸ್ಪಂದಿಸಲಿಲ್ಲ ಎಂದು ಅಧ್ಯಕ್ಷರು ಉತ್ತರಿಸಿ , ಡಿಸಿ ಬಳಿ ಹೋಗುವ ಸೂಚನೆಗೆ ಸಮ್ಮತ ವ್ಯಕ್ತಪಡಿಸಿದರು.

ಭಂಡಾರ್ಕಾರ್ಸ್ ರಸ್ತೆಯಲ್ಲೇ ಅಂಗಡಿ ಕಟ್ಟಡಗಳ ಮುಂಭಾಗ ರಸ್ತೆಗೆ ಬಂದಿದೆ. ಅಡ್ಡಾದಿಡ್ಡಿ ವಾಹನ ನಿಲ್ಲು ತ್ತವೆ ಎಂದು ಗಿರೀಶ್ ಹೇಳಿದರೆ, ಕಾಲೇಜು ರಸ್ತೆ ಪಾರ್ಕಿಂಗ್ ಸಮಸ್ಯೆ ನಿವಾರಣೆಯಾಗಿಲ್ಲ. ಫಲಕ ಅಳವಡಿಸಿಲ್ಲ. ಯುವಕರು ದ್ವಿಚಕ್ರ ವಾಹನ ವೀಲಿಂಗ್ ಮಾಡುತ್ತಾರೆ. ಅನೇಕ ಮೀಟಿಂಗ್‌ಗಳಲ್ಲಿ ಈ ಬಗ್ಗೆ ದೂರಿದರೂ ಪರಿಹಾರ ದೊರೆಯಲಿಲ್ಲ ಎಂದು ರೋಹಿಣಿ ಉದಯ ಕುಮಾರ್ ಹೇಳಿದರು.

ಕೋಡಿ ಚರಂಡಿ ಕಾಮಗಾರಿ ನಿರ್ಣಯ ಆದರೂ ಕಾಮಗಾರಿ ಮಾತ್ರ ಇನ್ನೂ ಶುರುವಾಗಿಲ್ಲ ಎಂದು ಅಶ್ಪಕ್ ಕೋಡಿ ಹೇಳಿದರು. ಸ್ಥಳ ತನಿಖೆ ಮಾಡಿ ಅಂದಾಜುಪಟ್ಟಿ ತಯಾರಿಸಲಾಗುತ್ತಿದೆ ಎಂದು ಅಧ್ಯಕ್ಷರು ಹೇಳಿದರು. ಕೋಡಿಯಲ್ಲಿ ಬೀದಿದೀಪಕ್ಕೆ ಕಂಬ ನೀಡಲಾಗಿದೆ, ದೀಪ ನೀಡಿಲ್ಲ ಎಂದಾಗ ಎರಡೂ ಗುತ್ತಿಗೆದಾರರು ಬೇರೆ ಎನ್ನುವ ಉತ್ತರ ಬಂತು.

ನನ್ನ ವಾರ್ಡ್‌ಗೆ 4 ವರ್ಷದಿಂದ ವಿದ್ಯುತ್ ಕಂಬ ನೀಡಿಲ್ಲ, ರಿಕ್ಷಾ ನಿಲ್ದಾಣ ಬಳಿ ಬೀದಿದೀಪ ಅಳವಡಿಸಿ ಎಂದು ಪ್ರಭಾವತಿ ಶೆಟ್ಟಿ ಮನವಿ ಮಾಡಿದರು. ಸಭೆಯಲ್ಲಿ ಉಪಾಧ್ಯಕ್ಷೆ ವನಿತಾ ಬಿಲ್ಲವ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X