ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು

ಕೋಟ, ಜು.31: ಬುಧವಾರ ರಾತ್ರಿ 9:30ರ ಸುಮಾರಿಗೆ ಹರ್ಕಾಡಿಯ ಹಳ್ಳಾಡಿ ಸೇತುವೆ ಬಳಿ ಹಿಂದಿನಿಂದ ಮೋಟಾರು ಸೈಕಲ್ ಢಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಚಾರಿ ಕೃಷ್ಣ ಆಚಾರ್ಯ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 5:30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





