Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನ.18-19: ಉಡುಪಿ ಜಿಲ್ಲಾ ಮಟ್ಟ ಅಂಚೆಚೀಟಿ...

ನ.18-19: ಉಡುಪಿ ಜಿಲ್ಲಾ ಮಟ್ಟ ಅಂಚೆಚೀಟಿ ಪ್ರದರ್ಶನ ‘ಕೃಷ್ಣಾಪೆಕ್ಸ್’

ವಾರ್ತಾಭಾರತಿವಾರ್ತಾಭಾರತಿ10 Nov 2023 9:17 PM IST
share
ನ.18-19: ಉಡುಪಿ ಜಿಲ್ಲಾ ಮಟ್ಟ ಅಂಚೆಚೀಟಿ ಪ್ರದರ್ಶನ ‘ಕೃಷ್ಣಾಪೆಕ್ಸ್’

ಉಡುಪಿ, ನ.10: ಉಡುಪಿ ಅಂಚೆ ವಿಭಾಗದಿಂದ ನ.18 ಮತ್ತು 19 ರಂದು ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ ‘ಕೃಷ್ಣಾಪೆಕ್ಸ್-2023’ನ್ನು ಆಯೋಜಿ ಸಲಾಗಿದೆ ಎಂದು ಉಡುಪಿ ಅಂಚೆ ಅಧೀಕ್ಷಕರಾದ ರಮೇಶ್ ಪ್ರಭು ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉಡುಪಿ ಅಂಚೆ ವಿಭಾಗ 1973ಯಲ್ಲಿ ರಚನೆಯಾ ಗಿದ್ದು, ಈ ವರ್ಷ ಸುವರ್ಣ ಸಂಭ್ರಮೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ ವನ್ನು ಆಯೋಜಿಸಲಾಗುತ್ತಿದೆಎಂದರು.

ಅಂಚೆ ಚೀಟಿ ಸಂಗ್ರಹಣೆ ಎಂಬುದು ಉತ್ತಮ ಹವ್ಯಾಸ ಮಾತ್ರವಲ್ಲದೆ ನಮ್ಮ ಜ್ಞಾನವನ್ನು ಹೆಚ್ಚಿಸುವ ಜೊತೆಗೆ ದೇಶ-ವಿದೇಶಗಳ ಹಿರಿಮೆ- ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ. ಇಂದಿನ ಯುವ ಪೀಳಿಗೆಯಲ್ಲಿ ಈ ಹವ್ಯಾಸವನ್ನು ಬೆಳೆಸುವ ಉದ್ದೇಶದಿಂದ ಅಂಚೆ ಇಲಾಖೆಯು ಇಂತಹ ಅಂಚೆ ಚೀಟಿ ಪ್ರದರ್ಶನವನ್ನು ನಡೆಸುತ್ತಾ ಬರುತ್ತಿದೆ ಎಂದು ವಿವರಿಸಿದರು.

ಎರಡು ದಿನಗಳ ಈ ಪ್ರದರ್ಶನದಲ್ಲಿ ಜಿಲ್ಲೆಯ ಪ್ರತಿಷ್ಠಿತ ಅಂಚೆ ಚೀಟಿ ಸಂಗ್ರಹಕಾರರು ಭಾಗವಹಿಸಲಿದ್ದು, ತಮ್ಮ ಸಂಗ್ರಹ ವನ್ನು ಪ್ರದರ್ಶಿಸಲಿದ್ದಾರೆ. ಕಾರ್ಯಕ್ರಮವನ್ನು ಕರ್ನಾಟಕ ಅಂಚೆ ವೃತ್ತದ ಗೌರವಾನ್ವಿತ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಕೆ ಪ್ರಕಾಶ್ ಬೆಳಗ್ಗೆ 10ಗಂಟೆಗೆ ಉದ್ಘಾಟಿಸಲಿದ್ದಾರೆ. ದಕ್ಷಿಣ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಎಲ್.ಕೆ. ದಾಸ್ ಮತ್ತು ನಿರ್ದೇಶಕ ಟಿ.ಎಸ್.ಅಶ್ವತನಾರಾಯಣ ಭಾಗವಹಿಸಲಿದ್ದಾರೆ ಎಂದರು.

ಪ್ರದರ್ಶನದಲ್ಲಿ ಸುಮಾರು 150ಕ್ಕೂ ಅಧಿಕ ಫಲಕಗಳಲ್ಲಿ ವಿವಿಧ ಅಂಚೆ ಚೀಟಿಗಳು ಹಾಗೂ ಅಂಚೆ ಪರಿಕರಗಳನ್ನು ಪ್ರದರ್ಶಿಸಲಾಗುವುದು. ಈ ಪ್ರದರ್ಶನವು ಮೂರು ವಿಭಾಗಗಳಲ್ಲಿ ನಡೆಯಲಿದ್ದು, ಮೊದಲನೇಯದಾಗಿ ಇನ್ವಿಟೇಶನ್ ಕ್ಲಾಸ್(ಆಹ್ವಾನಿತರು)ನಲ್ಲಿ ಈ ಹಿಂದೆ ವಿವಿಧ ಪ್ರದರ್ಶನ ಗಳಲ್ಲಿ ಪ್ರಶಸ್ತಿ ವಿಜೇತರಾದ ಜಿಲ್ಲೆಯ ಸಂಗ್ರಹಕಾರರು ತಮ್ಮ ಸಂಗ್ರಹವನ್ನು ಪ್ರದರ್ಶಿಸಲಿದ್ದಾರೆ.

ಎರಡನೇ ವಿಭಾಗದಲ್ಲಿ ಜಿಲ್ಲೆಯ ಸಂಗ್ರಹಣಕಾರರು ತಮ್ಮ ಅಂಚೆಚೀಟಿಗಳ ಸಂಗ್ರಹವನ್ನು ಪ್ರದರ್ಶಿಸಲಿದ್ದು ಉತ್ತಮ ಪ್ರದರ್ಶನಗಳಿಗೆ ಪ್ರಶಸ್ತಿಗಳನ್ನು ನೀಡಲಾಗುವುದು. ಮೂರನೇ ವಿಭಾಗದಲ್ಲಿ ಜಿಲ್ಲೆಯ ಯುವಜನ ಹಾಗು ಮಕ್ಕಳು ತಮ್ಮ ಸಂಗ್ರಹವನ್ನು ಪ್ರದರ್ಶಿಸಲಿದ್ದು ಉತ್ತಮ ಪ್ರದರ್ಶನಗಳಿಗೆ ಪ್ರಶಸ್ತಿಗಳನ್ನು ನೀಡಲಾಗುವುದು.

ಈ ಪ್ರದರ್ಶನದಲ್ಲಿ ಮಕ್ಕಳಿಗಾಗಿ ಅಂಚೆ ಚೀಟಿ ಸಂಗ್ರಹಣೆಯ ಬಗ್ಗೆ ಕಾರ್ಯಾಗಾರವನ್ನು ಕೂಡಾ ಏರ್ಪಡಿಸಲಾಗುವುದು.ಈ ಸಂದರ್ಭದಲ್ಲಿ ನಾಲ್ಕು ವಿಶೇಷ ಅಂಚೆ ಲಕೋಟೆಗಳು ಮತ್ತು ಹನ್ನೊಂದು ಪಿಕ್ಚರ್ ಪೋಸ್ಟ್ ಕಾರ್ಡ್(ಸಚಿತ್ರ ಅಂಚೆ ಕಾರ್ಡ್)ಗಳು ಅನಾವರಣಗೊಳ್ಳಲಿವೆ ಎಂದು ರಮೇಶ್ ಪ್ರಭು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನಾ ಸಮಿತಿಯ ಉಪಾದ್ಯಕ್ಷ ಕೃಷ್ಣರಾಜ್ ಭಟ್, ಜೊತೆ ಕಾರ್ಯದರ್ಶಿ ವಸಂತ್, ಕಾರ್ಯ ಕ್ರಮ ಸಂಯೋಜಕಿ ಪೂರ್ಣಿಮಾ ಜನಾರ್ದನ್ ಹಾಗೂ ಮಾಧ್ಯಮ ಸಂಚಾಲಕ ಸುರೇಶ್ ಕೆ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X