Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವೃದ್ಧಾಪ್ಯ ವೇತನವೂ ಹೋಯ್ತು... ಮಾಸಾಶನ...

ವೃದ್ಧಾಪ್ಯ ವೇತನವೂ ಹೋಯ್ತು... ಮಾಸಾಶನ ಸಿಗಲೇ ಇಲ್ಲ: ಸುಕೇಶ್ ಪಾಣ

ವಾರ್ತಾಭಾರತಿವಾರ್ತಾಭಾರತಿ31 Aug 2023 9:53 PM IST
share
ವೃದ್ಧಾಪ್ಯ ವೇತನವೂ ಹೋಯ್ತು... ಮಾಸಾಶನ ಸಿಗಲೇ ಇಲ್ಲ: ಸುಕೇಶ್ ಪಾಣ

ಉಡುಪಿ : ಪಾಣರ ಯಾನೆ ನಲಿಕೆಯವರು ಕೋಲ ಕಟ್ಟುವವರು ಹಾಗೂ ಧರ್ಮ ನರ್ತಕ ವೃತ್ತಿ ಮಾಡುತ್ತಾರೆ. ಕಳೆದ ಕೋವಿಡ್ ಸಂದರ್ಭದಲ್ಲಿ ಈ ಸಮಾಜ ತೀವ್ರ ಸಂಕಷ್ಟದಲ್ಲಿದ್ದಾಗ 60 ವರ್ಷ ಮೇಲ್ಪಟ್ಟ ಧರ್ಮನರ್ತಕರಿಗೆ ಮಾಸಾಶನ ನೀಡುವುದಾಗಿ ಅಂದಿನ ಬಿಜೆಪಿ ಸರಕಾರ ಘೋಷಿಸಿತು.

ಇದರಿಂದ 60ರಿಂದ 70ರಷ್ಟಿರುವ ಹಿರಿಯ ನರ್ತಕರು ಮಾಸಾಶನಕ್ಕೆ ಅರ್ಜಿ ಸಲ್ಲಿಸಲು ಮುಂದಾದರು. ಇವರಲ್ಲಿ ಕೆಲವರಿಗೆ ವೃದ್ಧಾಪ್ಯ ವೇತನ ಸಿಗುತ್ತಿತ್ತು. ಮಾಸಾಶನಕ್ಕಾಗಿ ಅದನ್ನು ಬಿಡುವಂತೆ ಹೇಳಲಾಯಿತು. ಮಾಸಾಶನ ಮಂಜೂರಾಗುವ ಮೊದಲೇ ವೃದ್ಧಾಪ್ಯ ವೇತನವನ್ನು ರದ್ದುಪಡಿಸಲಾಯಿತು ಎಂದು ಸುಕೇಶ್ ಪಾಣ ವಿವರಿಸಿದರು.

ಸಮಾಜದ ಹಿರಿಯ ದೈವ ನರ್ತಕರಾದ ಸಾಧು ಪಾಣರ ಮಂಚಿ ಅವರಿಗೆ ವೃದ್ಧಾಪ್ಯ ವೇತನ ಸಿಗುತ್ತಿತ್ತು. ಮಾಸಾಶನಕ್ಕೆ ಅರ್ಜಿ ಸಲ್ಲಿಸಿದಾಗ ಅವರಿಗೆ ವೃದ್ಧಾಪ್ಯ ವೇತನವನ್ನು ನಿಲ್ಲಿಸಲಾಯಿತು. ಈಗ ಅವರಿಗೆ ಅತ್ತ ವೃದ್ಧಾಪ್ಯ ವೇತನವೂ ಇಲ್ಲ. ಇತ್ತ ಮಾಸಾಶನವೂ ಮಂಜೂರಾಗಿಲ್ಲ. ಇದರಿಂದ ಸಾಧು ಪಾಣರ ತೀವ್ರ ಸಂಕಷ್ಚದಲ್ಲಿದ್ದಾರೆ ಎಂದು ಪಾಣ ಬೇಸರದಿಂದ ನುಡಿದರು.

ಸರಕಾರ ಮಾಸಾಶನ ಘೋಷಣೆ ಮಾಡಿದ್ದು ಮಾತ್ರ. ಇದುವರೆಗೆ ಯಾರಿಗೂ ಮಂಜೂರಾಗಿಲ್ಲ. ಅನುದಾನವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾಗಿ ಸಮಾಜದ ಹಿರಿಯರು ಮಾಸಾಶನಕ್ಕೆ ಅರ್ಜಿಯನ್ನೇ ಹಾಕಿಲ್ಲ. ಯಾರೂ ನಮ್ಮ ನೆರವಿಗೂ ಬಂದಿಲ್ಲ ಎಂದು ಪಾಂಡುರಂಗ ಪಡ್ಡಂ ವಿಷಾಧ ವ್ಯಕ್ತಪಡಿಸಿದರು.

ರಿಷಬ್ ಶೆಟ್ಟಿಯ ಕಾಂತಾರ ಚಿತ್ರದ ಯಶಸ್ಸಿನ ಬಳಿಕ ನಮ್ಮ ಪಾಣರ ಯಾನೆ ನಲಿಕೆ ಸಮಾಜದ ಬಗ್ಗೆ ಇಂದಿನ ಜನತೆಗೆ ಅರಿಯು ಮೂಡಿದೆ. ಆದರೆ ಇದರಿಂದ ನಮ್ಮ ಸಮಾಜಕ್ಕೆ ಯಾವುದೇ ಲಾಭ ಸಿಕ್ಕಿಲ್ಲ. ನಮ್ಮ ಸಂಕಷ್ಟ ಮುಂದುವರಿದೆ ಎಂದು ಅವರು ನೋವಿನಿಂದ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X