Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಆನ್‌ಲೈನ್ ಮೋಸ...

ಉಡುಪಿ ಜಿಲ್ಲೆಯಲ್ಲಿ ಆನ್‌ಲೈನ್ ಮೋಸ ಪ್ರಕರಣಗಳು: ಜನವರಿ ಒಂದೇ ತಿಂಗಳಲ್ಲಿ 20 ಕೇಸು, 3.50 ಕೋಟಿ ರೂ. ವಂಚನೆ

ವಾರ್ತಾಭಾರತಿವಾರ್ತಾಭಾರತಿ3 Feb 2024 6:28 PM IST
share
ಉಡುಪಿ ಜಿಲ್ಲೆಯಲ್ಲಿ ಆನ್‌ಲೈನ್ ಮೋಸ ಪ್ರಕರಣಗಳು: ಜನವರಿ ಒಂದೇ ತಿಂಗಳಲ್ಲಿ 20 ಕೇಸು, 3.50 ಕೋಟಿ ರೂ. ವಂಚನೆ

ಉಡುಪಿ, ಫೆ.3: ಆನ್‌ಲೈನ್ ಮೂಲಕ ಮೋಸಕ್ಕೆ ಒಳಗಾಗಿ ವಂಚನೆ ಜಾಲಕ್ಕೆ ಬೀಳುವವರ ಸಂಖ್ಯೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿದ್ದು, ಕೇವಲ ಜನವರಿ ಒಂದೇ ತಿಂಗಳಲ್ಲಿ ಇಂತಹ 20 ಪ್ರಕರಣಗಳು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ. ಈ ಮೋಸದ ಜಾಲದಿಂದ ಒಟ್ಟು 3.50 ಕೋಟಿ ರೂ. ಹಣ ಕಳೆದುಕೊಂಡಿದ್ದಾರೆ.

ಜನವರಿ ತಿಂಗಳಲ್ಲಿ ಜಿಲ್ಲೆಯ ಏಳು ಪೊಲೀಸ್ ಠಾಣೆಗಳಲ್ಲಿ ದಾಖಲಾದ ಒಟ್ಟು 20 ಆನ್‌ಲೈನ್ ಮೋಸ ಪ್ರಕರಣಗಳಲ್ಲಿ ಒಟ್ಟು 3,50,70,629 ರೂ. ಹಣವನ್ನು ವಂಚಿಸಲಾಗಿದೆ. ಇದರಲ್ಲಿ ಹೆಚ್ಚಿನವರು ತಾವಾಗಿಯೇ ಹಣ ಹಾಕಿ ಮೋಸಕ್ಕೆ ಒಳಗಾಗಿದ್ದಾರೆ. ಕೇವಲ ಒಂದೇ ತಿಂಗಳಲ್ಲಿ ಭಾರೀ ದೊಡ್ಡ ಮೊತ್ತವನ್ನು ಜಿಲ್ಲೆಯ ಜನತೆ ಮೋಸದ ಜಾಲಕ್ಕೆ ಒಳಗಾಗಿ ಕಳೆದುಕೊಂಡಿದ್ದಾರೆ. ಈ ಹಿಂದೆ ವಂಚಕರು ಜನರನ್ನು ನೇರವಾಗಿ ಸಂಪರ್ಕಿಸಿ ಮೋಸ ಮಾಡುತ್ತಿದ್ದರೆ ಈಗ ಆ್ಯಪ್, ವೆಬ್‌ಸೈಟ್, ಫೋನ್ ಕರೆಗಳ ಮೂಲಕ ವಂಚಿಸುತ್ತಿದ್ದಾರೆ. ಒಟ್ಟಾರೆ ವಂಚನೆ ವಿಧ ಬದಲಾಗಿದೆ.

ಜನವರಿ ತಿಂಗಳಲ್ಲಿ ದಾಖಲಾದ ಒಟ್ಟು ಪ್ರಕರಣಗಳ ಪೈಕಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಏಳು (27,580,241 ರೂ. ವಂಚನೆ), ಮಣಿಪಾಲ ಠಾಣೆಯಲ್ಲಿ ಐದು (44,52,047ರೂ. ವಂಚನೆ), ಬೈಂದೂರು ಠಾಣೆಯಲ್ಲಿ ಮೂರು (2.26ಲಕ್ಷ ರೂ.), ಪಡುಬಿದ್ರಿ ಠಾಣೆಯಲ್ಲಿ ಎರಡು (1,945921ರೂ.) ಹಾಗೂ ಉಳಿದಂತೆ ಕೊಲ್ಲೂರು (71,020ರೂ.), ಕಾರ್ಕಳ ನಗರ (98,900 ರೂ.) ಮತ್ತು ಉಡುಪಿ ನಗರ ಠಾಣೆ (7ಲಕ್ಷ ರೂ)ಗಳಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ.

ಇದರಲ್ಲಿ ಟ್ರೇಡಿಂಗ್ ಸೇರಿದಂತೆ ವಿವಿಧ ಆ್ಯಪ್‌ಗಳ ಮೂಲಕ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಪಡೆಯುವ ಆಸೆಯಿಂದ ಹಣ ಕಳೆದುಕೊಂಡವರ ಸಂಖ್ಯೆಯೇ ಹೆಚ್ಚು. ಇಂತಹ ಏಳು ಪ್ರಕರಣಗಳಲ್ಲಿ ಬರೋಬರೀ 2.83ಕೋಟಿ ರೂ. ಹಣವನ್ನು ಕಳೆದುಕೊಳ್ಳಲಾಗಿದೆ. ಅಲೆವೂರಿನ ವೆಂಕಟರಮಣ ಎಂಬವರು ಒಬ್ಬರೇ ಈ ರೀತಿಯ ವಂಚನೆ ಖೆಡ್ಡಾಕ್ಕೆ ಬಿದ್ದು 1,38,99,000ರೂ. ಕಳೆದು ಕೊಂಡು ಸೈ ಸುಟ್ಟುಕೊಡಿದ್ದಾರೆ.

ಅದೇ ರೀತಿ ಟಾಸ್ಕ್ ನೀಡುವ ಮೂಲಕ ಎರಡು ಪ್ರಕರಣಗಳಲ್ಲಿ ಒಟ್ಟು 48.57ಲಕ್ಷ ರೂ. ದೋಚಲಾಗಿದೆ. ಒಂದು ಪ್ರಕರಣ ದಲ್ಲಿ ವ್ಯಕ್ತಿಯೊಬ್ಬರ ಖಾತೆಯಿಂದ ತನ್ನಷ್ಟಕ್ಕೇ ಹಣ ಬೇರೆಯವರ ಖಾತೆಗೆ ವರ್ಗಾವಣೆಗೊಂಡು ವಂಚನೆಯಾಗಿದೆ. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ ಹಣ ದೋಚಿದ ಮೂರು ಪ್ರಕರಣಗಳು ಒಂದೇ ದಿನ ನಡೆದಿ ರುವ ಬಗ್ಗೆ ವರದಿಯಾಗಿದೆ.

ಉಳಿದಂತೆ ಕೊರಿಯರ್‌ನಲ್ಲಿ ಡ್ರಗ್ಸ್ ಪಾರ್ಸೆಲ್ ಕಳುಹಿಸಿರುವುದಾಗಿ ಪೊಲೀಸರ ಹೆಸರಿನಲ್ಲಿ ಬೆದರಿಸಿ ವಂಚನೆ ಎಸಗಿರುವ ಎರಡು, ಗ್ರಾಹಕರ ವೇದಿಕೆ ಹೆಸರಿನಲ್ಲಿ, ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹೀಗೆ ನಾನಾ ಮಾದರಿಯಲ್ಲಿ ಜನರನ್ನು ಮೋಸದ ಜಾಲಕ್ಕೆ ಒಳಪಡಿಸಿ ವಂಚಿಸಿರುವ ಪ್ರಕರಣ ಗಳು ಈ ಒಂದೇ ತಿಂಗಳಲ್ಲಿ ನಡೆದಿರುವುದು ವರದಿಯಾಗಿವೆ.

‘ಆನ್‌ಲೈನ್ ವಂಚನೆಗೆ ಸಂಬಂಧಿಸಿ ಬಂದ ದೂರುಗಳನ್ನೆಲ್ಲವನ್ನು ದಾಖಲಿಸಿ ಕೊಳ್ಳುತ್ತಿದ್ದೇವೆ. ಕೆಲವು ಪ್ರಕರಣಗಳಲ್ಲಿ ಮೋಸಕ್ಕೆ ಒಳಗಾಗಿ ನಾಲ್ಕೈದು ವರ್ಷ ಗಳೇ ಆಗಿರುತ್ತದೆ. ಆದರೆ ಕೆಲವರು ಈಗ ಎಚ್ಚೆತ್ತುಕೊಂಡು ದೂರು ನೀಡುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಜನ ತಾವೇ ಸ್ವಯಂ ಆಗಿ ಹಣವನ್ನು ವಂಚಕರಿಗೆ ಒಪ್ಪಿಸಿ ವಂಚನೆಗೆ ಒಳಗಾಗುತ್ತಿದ್ದಾರೆ. ಆದುದರಿಂದ ಜನರೇ ಈ ಬಗ್ಗೆ ಜಾಗೃತೆ ವಹಿಸ ಬೇಕು. ಆಗ ಮಾತ್ರ ಈ ವಂಚನೆ ಜಾಲಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ’

-ಡಾ.ಕೆ.ಅರುಣ್, ಉಡುಪಿ ಎಸ್ಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X