Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್ಕಾಂನ ಹೊರಗುತ್ತಿಗೆ ನೌಕರರಿಂದ...

ಎಸ್ಕಾಂನ ಹೊರಗುತ್ತಿಗೆ ನೌಕರರಿಂದ ಆ.10ರಿಂದ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ27 July 2023 9:48 PM IST
share
ಎಸ್ಕಾಂನ ಹೊರಗುತ್ತಿಗೆ ನೌಕರರಿಂದ ಆ.10ರಿಂದ ಮುಷ್ಕರ

ಉಡುಪಿ, ಜು.27: ರಾಜ್ಯದ ಕೆಪಿಸಿಟಿಸಿಎಲ್ ಹಾಗೂ ಎಸ್ಕಾಂಗಳಲ್ಲಿ ಕಳೆದ ಕೆಲವು ದಶಕಗಳಿಂದ ಹೊರಗುತ್ತಿಗೆ ನೌಕರರಾಗಿ, ಎಲ್ಲಾ ರೀತಿಯ ಸೌಲಭ್ಯ ಗಳಿಂದ ವಂಚಿತರಾಗಿ ದುಡಿಯುತ್ತಿರುವ 35,000ಕ್ಕೂ ಅಧಿಕ ಮಂದಿ ನೌಕರರು ತಮ್ಮ ಬಹುದಿನಗಳ ಬೇಡಿಕೆಯ ಈಡೇರಿಕೆಗೆ ಒತ್ತಾಯಿಸಿ ಆ.10 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಕೆಪಿಟಿಸಿಎಲ್ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆಯ ರಾಝ್ಯಾಧ್ಯಕ್ಷ ಲೀಲಾಸಾಗರ್ ಎಂ.ಎಸ್. ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ಟೇಶನ್ ಆಪರೇಟರ್ಸ್‌, ಸ್ಟೇಶನ್ ಸಹಾಯಕರು, ಗ್ಯಾಂಗ್‌ಮನ್‌ಗಳು ಹಾಗೂ ಮೀಟರ್ ರೀಡರ್ಸ್‌ ಇದರಲ್ಲಿ ಬರುತ್ತಾರೆ. ಇವರೆಲ್ಲರೂ ಕಳೆದ ಎರಡು ದಶಕಗಳಿಂದ ಹೊರಗುತ್ತಿಗೆ ನೌಕರರಾಗಿ ದುಡಿಯುತಿದ್ದಾರೆ. ಇವರಿಗೆ ಯಾವುದೇ ಸರಕಾರಿ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ದೂರಿದರು.

ಬೇಡಿಕೆಗಳು: ಕಳೆದ ಕೆಲವು ವರ್ಷಗಳ ತಮ್ಮ ಪ್ರಮುಖ ಬೇಡಿಕೆಯಾದ ಎಸ್ಕಾಂ ಹಾಗೂ ಕೆಪಿಟಿಸಿಎಲ್‌ಗಳಲ್ಲಿ ಹೊರಗುತ್ತಿಗೆ ನೌಕರರಾಗಿ ದುಡಿಯುತ್ತಿ ರುವ ಎಲ್ಲರನ್ನೂ ಖಾಯಂಗೊಳಿಸಬೇಕು. ಕ್ಷುಲ್ಲಕ ಕಾರಣಕ್ಕೆ ಕೆಲಸದಿಂದ ತೆಗೆದ ನೌಕರರನ್ನು ಮರು ನೇಮಕ ಮಾಡಿಕೊಳ್ಳಬೇಕು. ಯಾವುದೇ ರೀತಿಯ ಅಪಘಾತದಿಂದ ನೌಕರರು ಮರಣವನ್ನಪ್ಪಿದಾಗ ಸರಕಾರದಿಂದ 25 ಲಕ್ಷ ರೂ. ಪರಿಹಾರ ನೀಡಬೇಕು. ಕೆಲವೊಂದು ಗುತ್ತಿಗೆದಾರರು ನೌಕರರಿಂದ ಪ್ರತಿತಿಂಗಳು ನಿರಂತರವಾಗಿ ಹಪ್ತಾ ವಸೂಲಿ ಮಾಡುತಿದ್ದು, ಇದಕ್ಕೆ ತಡೆ ಹಾಕಬೇಕು.

ತಮ್ಮ ಬೇಡಿಕೆಗಳ ಕುರಿತು ಈಗಾಗಲೇ ಸರಕಾರಕ್ಕೆ ಲಿಖಿತ ರೂಪದಲ್ಲಿ ನೀಡಿದ್ದು, ಬೇಡಿಕೆ ಈಡೇರಿಕೆಗೆ ಜು.31ರ ಗಡುವು ನೀಡಲಾಗಿದೆ. ಸರಕಾರ ಇವುಗಳಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸದಿದ್ದಲ್ಲಿ ಆ.10ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಎಚ್ಚರಿಕೆ ನೀಡಲಾಗಿದೆ ಎಂದರು.

ಈ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಗಳಿಗೂ ಭೇಟಿ ನೀಡಿ ಅಲ್ಲಿನ ಹೊರಗುತ್ತಿಗೆ ನೌಕರರ ಸಭೆಯನ್ನು ಕರೆದು ಅವರಿಗೆ ಎಲ್ಲಾ ಮಾಹಿತಿ ನೀಡಲಾಗುತ್ತಿದೆ. ಇಂದು ಉಡುಪಿ ಜಿಲ್ಲಾ ಸಮಿತಿಯೊಂದಿಗೆ ಸಭೆ ನಡೆದಿದೆ. ಉಡುಪಿಯಲ್ಲಿ 750 ಮಂದಿ ಹೊರಗುತ್ತಿಗೆ ನೌಕರರಿದ್ದಾರೆ ಎಂದು ಲೀಲಾಸಾಗರ್ ತಿಳಿಸಿದರು.

ಬೇಡಿಕೆ ಈಡೇರದಿದ್ದರೆ ಈ ಬಾರಿಯ ನಾವು ಮುಷ್ಕರ ನಡೆಸುವುದು ಖಂಡಿತ. ಮೂರು ಸಾವಿರಕ್ಕೂ ಅಧಿಕ ಮಂದಿ ಮುಷ್ಕರ ಪ್ರಾರಂಭಿಸಲಿದ್ದಾರೆ. ಆಗಲೂ ಸರಕಾರ ಮಣಿಯದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಲೀಲಾಸಾಗರ್ ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಉಪಾಧ್ಯಕ್ಷ ಪರಶುರಾಮ್ ರಾಠೋಡ್, ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗಪ್ಪ ಬಾವಿನಕಟ್ಟೆ, ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯದರ್ಶಿ ಮನೋಹರ, ಉಡುಪಿ ಜಿಲ್ಲಾ ಕಾರ್ಯದರ್ಶಿ ಅನಿಲ್ ದೇವಾಡಿಗ ಉಪಸ್ಥಿತರಿದ್ದರು.

Tags

employees
share
ವಾರ್ತಾಭಾರತಿ
ವಾರ್ತಾಭಾರತಿ
Next Story
X