ಪಡುಬಿದ್ರಿ: ಚಲಿಸುತ್ತಿದ್ದ ಲಾರಿಯಡಿಗೆ ಹಾರಿ ಕಾರ್ಮಿಕ ಆತ್ಮಹತ್ಯೆ

ಪಡುಬಿದ್ರಿ: ಚಲಿಸುತ್ತಿದ್ದ ವಾಹನದ ಚಕ್ರದಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಉತ್ತರಪ್ರದೇಶದ ಮನೋಜ್ ಕುಮಾರ್(42) ಎಂದು ಗುರುತಿಸಲಾಗಿದೆ.
ಮನೋಜ್ ಕುಮಾರ್ ಹೆಜಮಾಡಿಯ ಕಂಪೆನಿಯೊಂದರಲ್ಲಿ ಕೆಲಸ ಮಾಡಿ ಕೊಂಡಿದ್ದರು. ಮನೋಜ್ ಮೇ 15ರಂದು ಸಂಜೆ ಪಡುಬಿದ್ರಿ ಜಂಕ್ಷನ್ನಲ್ಲಿ ಚಲಿಸುತ್ತಿದ್ದ ಲಾರಿಯ ಹಿಂದಿನ ಚಕ್ರದಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story




