Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Padubidri | ತೇಲಿ ಬಂದ ಮುಳುಗಿದ...

Padubidri | ತೇಲಿ ಬಂದ ಮುಳುಗಿದ ಮೀನುಗಾರಿಕಾ ದೋಣಿ

ವಾರ್ತಾಭಾರತಿವಾರ್ತಾಭಾರತಿ3 July 2026 9:50 PM IST
share
Padubidri | ತೇಲಿ ಬಂದ ಮುಳುಗಿದ ಮೀನುಗಾರಿಕಾ ದೋಣಿ

ಪಡುಬಿದ್ರಿ: ಸಮುದ್ರದಲ್ಲಿ ನೀರು ತುಂಬಿ ಅಪಘಾತಕ್ಕೊಳಗಾಗಿದ್ದ ಮಲ್ಪೆ ನೋಂದಣಿಯ ‘ಮಂಜು ಮಾತ’ ಗಿಲ್‌ನೆಟ್ ಮೀನುಗಾರಿಕಾ ದೋಣಿ ಶುಕ್ರವಾರ ಸಂಜೆ ಹೆಜಮಾಡಿ ಸಿಎಸ್‌ಪಿ ಠಾಣಾ ವ್ಯಾಪ್ತಿಯ ಎರ್ಮಾಳು ಬಡಾ ಗ್ರಾಮದ ಉಚ್ಚಿಲ ಕಡಲ ತೀರಕ್ಕೆ ತೇಲಿ ಬಂದಿದೆ.

ಜೂ.29ರಂದು ಬೆಳಿಗ್ಗೆ ಮಲ್ಪೆ ಬಂದರಿನಿಂದ ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ದೋಣಿಯ ತಳಭಾಗದಿಂದ ಮಧ್ಯಾಹ್ನ ನೀರು ಸೋರಿಕೆಯಾಗತೊಡಗಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೇ ಭಾರತೀಯ ಕರಾವಳಿ ಕಾವಲು ಪಡೆಯ ಸಹಾಯ ಕೋರಲಾಗಿದ್ದು, ಸ್ಥಳಕ್ಕೆ ಧಾವಿಸಿದ ಕೋಸ್ಟ್‌ಗಾರ್ಡ್ ಸಿಬ್ಬಂದಿ ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದ್ದರು. ದೋಣಿಯನ್ನು ರಕ್ಷಿಸಲು ಸಾಧ್ಯವಾಗದ ಕಾರಣ ಸಮುದ್ರದಲ್ಲೇ ಬಿಟ್ಟು ಕಾರ್ಯಾಚರಣೆ ಪೂರ್ಣಗೊಳಿಸಲಾಗಿತ್ತು.

ಬಳಿಕ ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ಸಿಎಸ್‌ಪಿ ಠಾಣೆ, ಮೀನುಗಾರಿಕಾ ಇಲಾಖೆ, ಇಮಿಗ್ರೇಶನ್ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳು ಮೀನುಗಾರರನ್ನು ವಶಕ್ಕೆ ಪಡೆದು ದಾಖಲೆಗಳನ್ನು ಪರಿಶೀಲಿಸಿದರು. ನಾಲ್ವರು ತಮಿಳುನಾಡು ಹಾಗೂ ಇಬ್ಬರು ಕೇರಳ ಮೂಲದವರಾಗಿರುವುದು ದೃಢಪಟ್ಟಿದೆ.

ಜಿಲ್ಲಾಧಿಕಾರಿಗಳ ಮೀನುಗಾರಿಕಾ ನಿಷೇಧಾಜ್ಞೆ ಉಲ್ಲಂಘಿಸಿ ಕಾನೂನುಬಾಹಿರವಾಗಿ ಮೀನುಗಾರಿಕೆ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ದೋಣಿ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ದೋಣಿಯ ಲೈಸೆನ್ಸ್ ಮತ್ತು ನೋಂದಣಿ ರದ್ದುಪಡಿಸುವಂತೆ ಮೀನುಗಾರಿಕಾ ಇಲಾಖೆಗೆ ವರದಿ ಸಲ್ಲಿಸಲಾಗಿದೆ.

ಶುಕ್ರವಾರ ಸಂಜೆ ಸುಮಾರು 6.15ಕ್ಕೆ ದೋಣಿಯು ಉಚ್ಚಿಲ ಸಮುದ್ರ ತೀರಕ್ಕೆ ತೇಲಿ ಬಂದಿದ್ದು, ಮಾಹಿತಿ ಪಡೆದ ಹೆಜಮಾಡಿ ಸಿಎಸ್‌ಪಿ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಅಬ್ದುಲ್ ರಜಾಕ್, ಸಿಪಿಸಿ ಪ್ರವೀಣ್, ಕೆಎನ್‌ಡಿ ರಾಜೇಶ್ ಹಾಗೂ ತೀರ್ಥ ಅವರು ಸ್ಥಳೀಯ ಮೀನುಗಾರರು ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ದೋಣಿಯನ್ನು ಸುರಕ್ಷಿತವಾಗಿ ಕಡಲ ತೀರಕ್ಕೆ ಎಳೆದು ತಂದಿದ್ದಾರೆ.

Tags

Padubidri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X