Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 2026ರ ಪರ್ಯಾಯ ಮಹೋತ್ಸವ| ಮೂಲಭೂತ...

2026ರ ಪರ್ಯಾಯ ಮಹೋತ್ಸವ| ಮೂಲಭೂತ ಸೌಕರ್ಯ, ಕಾನೂನು ಸುವ್ಯವಸ್ಥೆಗೆ ಅಗತ್ಯ ಕ್ರಮ: ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ5 Nov 2025 8:24 PM IST
share
2026ರ ಪರ್ಯಾಯ ಮಹೋತ್ಸವ| ಮೂಲಭೂತ ಸೌಕರ್ಯ, ಕಾನೂನು ಸುವ್ಯವಸ್ಥೆಗೆ ಅಗತ್ಯ ಕ್ರಮ: ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

ಉಡುಪಿ: ಉಡುಪಿ ನಗರದಲ್ಲಿ 2026ರ ಜನವರಿ ತಿಂಗಳಲ್ಲಿ ನಡೆಯುವ ಉಡುಪಿಯ ಅಷ್ಟಮಠಗಳ ಪೈಕಿ ಒಂದಾದ ಶೀರೂರು ಮಠದ ಪರ್ಯಾಯ ಮಹೋತ್ಸವದ ವೇಳೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ನಗರದಲ್ಲಿ ಅಗತ್ಯ ಮೂಲಭೂತ ಸೌಕರ್ಯ ಸೇರಿದಂತೆ ಕಾನೂನು ಸುವ್ಯವಸ್ಥೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಪರ್ಯಾಯ ಮಹೋತ್ಸವಕ್ಕೆ ಹೊರ ಜಿಲ್ಲೆ, ಹೊರ ರಾಜ್ಯ ಹಾಗೂ ವಿದೇಶಗಳಿಂದ ಸಾಕಷ್ಟು ಸಂಖ್ಯೆಯ ಭಕ್ತರು ಉಡುಪಿ ನಗರಕ್ಕೆ ಆಗಮಿಸುವ ಸಾಧ್ಯತೆಗಳಿವೆ. ಇವರಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು, ವಾಹನಗಳ ಸುಗಮ ಸಂಚಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಜನರ ದಟ್ಟಣೆಯಾಗದಂತೆ ನೋಡಿಕೊಳ್ಳುವುದು ಸೇರಿದಂತೆ ವಿವಿಧ ಸೌಕರ್ಯಗಳನ್ನು ಶ್ರೀಕೃಷ್ಣ ಮಠದ ಸಮನ್ವಯದೊಂದಿಗೆ ಕೈಗೊಳ್ಳಬೇಕು ಎಂದು ಸೂಚಿಸಿದರು.

ಪರ್ಯಾಯ ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಇದಕ್ಕಾಗಿ ನಗರವನ್ನು ಸಂಪರ್ಕಿಸುವ ಹಾಗೂ ನಗರದೊಳಗಿನ ರಸ್ತೆಗಳ ದುರಸ್ತಿ ಕಾರ್ಯವನ್ನು ಉತ್ತಮ ಗುಣಮಟ್ಟದೊಂದಿಗೆ ಕೈಗೊಳ್ಳಬೇಕು. ದಾರಿದೀಪಗಳು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದ ಜಿಲ್ಲಾಧಿಕಾರಿಗಳು, ನಗರದ ಶುಚಿತ್ವ ಕಾಪಾಡಲು ಹೆಚ್ಚು ಮಂದಿ ಪೌರ ಕಾರ್ಮಿಕರನ್ನು ನಿಯೋಜಿಸಬೇಕು ಎಂದು ಪೌರಾಯುಕ್ತರಿಗೆ ಸೂಚನೆ ನೀಡಿದರು.

ಮಠದ ಆವರಣದಲ್ಲಿ ಜನಜಂಗುಳಿಯಾಗಿ ಜನರ ಸಂಚಾರಕ್ಕೆ ತೊಂದರೆ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಬಂದೋಬಸ್ತ್‌ಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸುವುದರೊಂದಿಗೆ ಕಂಟ್ರೋಲ್ ರೂಮ್‌ಗಳು ದಿನದ ಇಪ್ಪನಾಲ್ಕು ಗಂಟೆ ಕಾರ್ಯಾಚರಿಸುವಂತೆ ನೋಡಿ ಕೊಳ್ಳಬೇಕು. ವಾಹನಗಳ ಸುಗಮ ಸಂಚಾರಕ್ಕೆ, ಅವುಗಳ ನಿಲುಗಡೆಗೆ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆಗಳನ್ನು ಅಲ್ಲಲ್ಲಿ ಕಲ್ಪಿಸಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ತುರ್ತು ಆರೋಗ್ಯ ಚಿಕಿತ್ಸೆ ನೀಡಲು ಶ್ರೀಕೃಷ್ಣ ಮಠ ಹಾಗೂ ರಥಬೀದಿಯಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನೊಳಗೊಂಡ ತಂಡದ ಆರೋಗ್ಯ ಕೇಂದ್ರಗಳನ್ನು ತಾತ್ಕಾಲಿಕವಾಗಿ ರಚಿಸುವುದರೊಂದಿಗೆ ಆಂಬುಲೆನ್ಸ್‌ ಅನ್ನು ಸನ್ನದ್ಧ ಸ್ಥಿತಿಯಲ್ಲಿ ನಿಯೋಜಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶೀರೂರು ಸ್ವಾಮೀಜಿಗಳ ಚೊಚ್ಚಲ ಪರ್ಯಾಯವನ್ನು ವೀಕ್ಷಿಸಲು ರಾಜ್ಯದ ವಿವಿದೆಡೆಗಳಿಂದ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಬೇಡಿಕೆಗೆ ಅನುಗುಣವಾಗಿ ಕೆಎಸ್ಸಾರ್ಟಿಸಿ ಬಸ್‌ಗಳ ಸೌಲಭ್ಯವನ್ನು ಕಲ್ಪಿಸಬೇಕು ಎಂದ ಅವರು, ಈ ಸಂದರ್ಭದಲ್ಲಿ ಸ್ಥಳೀಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಪ್ಯಾಕೇಜ್ ಟೂರ್ ವ್ಯವಸ್ಥೆ ಮಾಡಬೇಕು ಎಂದರು.

ಪರ್ಯಾಯ ಸಂದರ್ಭದಲ್ಲಿ ನಿರಂತರ ವಿದ್ಯುಚ್ಛಕ್ತಿ ಪೂರೈಕೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸ್ವರೂಪ ಟಿ.ಕೆ., ಹೆಚ್ಚುವರಿ ಅಗ್ನಿಶಾಮಕ ವಾಹನಗಳನ್ನು ಮಠದ ಪರಿಸರದಲ್ಲಿ ನಿಯೋಜಿಸಬೇಕು. ಪರ್ಯಾಯೋತ್ಸವ ಅಂಗವಾಗಿ ವಾಹನಗಳಲ್ಲಿ ಹೊರೆ ಕಾಣಿಕೆಗಳು ಬರಲಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಗಳಾಗದ ರೀತಿಯಲ್ಲಿ ಎಲ್ಲಾ ವ್ಯವಸ್ಥೆ ಮಾಡಬೇಕು ಎಂದರು.

ಜ.18ರ ಬೆಳಗಿನ ಜಾವ ನಡೆಯಲಿರುವ ಪುರ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು, ಸ್ಥಬ್ಧ ಚಿತ್ರಗಳು ಭಾಗವಹಿಸಲಿದ್ದು, ಇವುಗಳು ಶಿಸ್ತುಬದ್ಧವಾಗಿ ಸಾಗುವಂತೆ ನೋಡಿಕೊಳ್ಳಬೇಕು. ಮೆರವಣಿಗೆ ಸಾಗುವ ದಾರಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿದ್ದಲ್ಲಿ ಅವುಗಳನ್ನು ಗುರುತಿಸುವುದರೊಂದಿಗೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಮೆರವಣಿಗೆ ಸಾಗುವ ದಾರಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಜನಸಂದಣಿ ಹೆಚ್ಚಾಗಲಿರುವುದರಿಂದ ಯಾವುದೇ ಅವಘಡ ಗಳು ಸಂಭವಿಸದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ವಾಹನಗಳು ಹೆಚ್ಚು ಆಗಮಿಸುವ ಕಾರಣ ಅವುಗಳಿಗೆ ಸೂಕ್ತ ಪಾರ್ಕಿಂಗ್ ಸ್ಥಳ ನಿಗದಿ ಪಡಿಸಬೇಕು. ಊರ ಹಬ್ಬದ ರೀತಿಯಲ್ಲಿ ಪರ್ಯಾಯ ಮಹೋತ್ಸವ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಕಮಿಷನರ್ ರಶ್ಮಿ, ಮಠದ ದಿವಾನರಾದ ಡಾ.ಉದಯಕುಮಾರ್ ಸರಳತ್ತಾಯ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಸ್ವಾಗತ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿ ದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X