Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಐಎಸ್‌ಪಿಆರ್‌ಎಲ್ ಭೂಸ್ವಾಧೀನಕ್ಕೆ...

ಐಎಸ್‌ಪಿಆರ್‌ಎಲ್ ಭೂಸ್ವಾಧೀನಕ್ಕೆ ಶೀಘ್ರವೇ ಪರಿಹಾರ ಹಣ ಪಾವತಿಸಿ: ಕೆಐಡಿಬಿ ಅಧಿಕಾರಿಗಳಿಗೆ ಉಡುಪಿ ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ13 Jan 2026 9:06 PM IST
share
ಐಎಸ್‌ಪಿಆರ್‌ಎಲ್ ಭೂಸ್ವಾಧೀನಕ್ಕೆ ಶೀಘ್ರವೇ ಪರಿಹಾರ ಹಣ ಪಾವತಿಸಿ: ಕೆಐಡಿಬಿ ಅಧಿಕಾರಿಗಳಿಗೆ ಉಡುಪಿ ಡಿಸಿ ಸೂಚನೆ

ಉಡುಪಿ, ಜ.13: ಕಾಪು ತಾಲೂಕಿನ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಕೇಂದ್ರ ಸರಕಾರದ ಕಚ್ಛಾ ತೈಲ ಸಂಗ್ರಹಣಾ ಘಟಕ (ಇಂಡಿಯನ್ ಸ್ಟ್ರೆಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್- ಐಎಸ್‌ಪಿಆರ್‌ಎಲ್) ಅಭಿವೃದ್ಧಿಗೆ ಅಗತ್ಯವಿರುವ ಭೂಮಿಯನ್ನು ಸಾರ್ವಜನಿಕರಿಂದ ಈಗಾಗಲೇ ಭೂಸ್ವಾಧೀನ ಪಡಿಸಿ ಕೊಳ್ಳಲಾಗಿದೆ. ಆದರೆ ಕೆಲವರಿಗೆ ಪರಿಹಾ ಹಣವನ್ನು ನೀಡಿಲ್ಲ ಎಂಬ ಮಾಹಿತಿ ಇದ್ದು, ಈ ಘಟಕಕ್ಕೆ ಭೂಮಿ ನೀಡಿರುವ ಎಲ್ಲಾ ಭೂಮಾಲಕರಿಗೆ ಶೀಘ್ರದಲ್ಲೇ ಪರಿಹಾರ ಹಣವನ್ನು ನೀಡುವಂತೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಕೆಐಎಡಿಬಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಜೂರು ಗ್ರಾಪಂ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿ ಕಚ್ಛಾತೈಲ ಸಂಗ್ರಹಣೆ ಘಟಕದ ಎರಡನೇ ಹಂತದ ವಿಸ್ತರಣಾ ಕಾಮಗಾರಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಪಾದೂರು ಗ್ರಾಮ ವ್ಯಾಪ್ತಿಯಲ್ಲಿ ಕೈಗೊಂಡಿರುವ ಯೋಜನೆಯ ಎರಡನೇ ಹಂತದ ಕಚ್ಛಾತೈಲ ಸಂಗ್ರಹಣೆ ಕಾಮಗಾರಿಯನ್ನು ಕೈಗೊಳ್ಳುವಾಗ ಸ್ಥಳೀಯ ಜನಸಾಮಾನ್ಯರಿಗೆ ತೊಂದರೆ ಉಂಟಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತೆಯನ್ನು ಕೈಗೊಳ್ಳಬೇಕು ಎಂದೂ ಅವರು ನಿರ್ದೇಶನ ನೀಡಿದರು.

ಎರಡನೇ ಹಂತದ ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸುತ್ತಮುತ್ತ ಪ್ರದೇಶಗಳ ಎಲ್ಲಾ ಮನೆಗಳ ವೀಡಿಯೋ ಚಿತ್ರೀಕರಣವನ್ನು ಕೈಗೊಳ್ಳಬೇಕು. ಕಾಮಗಾರಿ ಕೈಗೊಳ್ಳುವಾಗ ಬಂಡೆಗಳ ಸ್ಫೋಟ ಸಂದರ್ಭದಲ್ಲಿ ಯಾವುದೇ ರೀತಿಯ ಹಾನಿಗಳು ಮನೆಗಳಿಗೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದವರು ತಿಳಿಸಿದರು.

ಭೂಸ್ವಾಧೀನ ಪಡಿಸಿಕೊಂಡಿರುವ ಭೂಮಿಯ ಪರಿಹಾರದ ಹಣವನ್ನು ಮಾಲಕರಿಗೆ ಒದಗಿಸುವ ಸಂಬಂಧ ನೈಜ ಭೂಮಾಲಕರ ಕುರಿತು ಇರುವ ಗೊಂದಲವನ್ನು ಸ್ಥಳೀಯ ಕಂದಾಯ, ಸರ್ವೇ ಹಾಗೂ ಕೆ.ಐ.ಎ.ಡಿ.ಬಿ ಅಧಿಕಾರಿಗಳು ಪರಿಶೀಲಿಸಿ ಬಗೆಹರಿಸಿಕೊಳ್ಳಬೇಕು ಎಂದ ಅವರು, ಕಾಮಗಾರಿಯ ಸಂದರ್ಭದಲ್ಲಿ ಪಾರಂಪರಿಕ ತಾಣಗಳಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಕಚ್ಛಾ ತೈಲ ಸಂಗ್ರಹಣಾ ಘಟಕದ ಕಾಮಗಾರಿ ಸಂದರ್ಭದಲ್ಲಿ ಬಂಡೆ ಕಲ್ಲುಗಳನ್ನು ಸ್ಫೋಟಿಸುವುದರಿಂದ ಸ್ಥಳೀಯ ಬಾವಿಗಳ ನೀರಿನ ಗುಣಮಟ್ಟದಲ್ಲಿ ವ್ಯತ್ಯಾಸ ವಾಗಿ ನೀರು ಕಲುಷಿತಗೊಳ್ಳುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದರು.

ಕಾಮಗಾರಿ ಕೈಗೊಳ್ಳುವಾಗ ಉದ್ಯೋಗದಲ್ಲಿ ಸ್ಥಳೀಯ ಜನರಿಗೆ ಆದ್ಯತೆ ನೀಡಬೇಕು. ಹೊರಗಿನಿಂದ ಬಂದಂತಹ ಕಾರ್ಮಿಕರಿಗೆ ಪ್ರತ್ಯೇಕ ಕಾಲೋನಿ ಗಳನ್ನು ನಿರ್ಮಿಸಿ, ಅಲ್ಲಿ ವಾಸಿಸಲು ಅನುವು ಮಾಡಿಕೊಡಬೇಕು ಎಂದ ಗುರ್ಮೆ, ಕಾಮಗಾರಿ ಸಂಬಂಧ ವಾಹನಗಳ ಸಂಚಾರದ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಬೇಕು. ಇದರಿಂದ ಸಾರ್ವಜನಿಕ ರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಭಾಗವಹಿಸಿದ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಖಂಡರು, ಮೊದಲನೇ ಹಂತದ ಕಾಮಗಾರಿ ಯನ್ನು ಕೈಗೊಂಡಾಗ ಅನೇಕ ರೀತಿಯ ಸಮಸ್ಯೆಗಳು ಈ ಭಾಗದ ಜನರಿಗೆ ಉಂಟಾಗಿದ್ದು, ಈ ಬಾರಿಯೂ ಅವು ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿ, ತಮ್ಮ ಸಮಸ್ಯೆಗಳ ಕುರಿತು ಸಭೆಯ ಗಮನ ಸೆಳೆದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ತಹಶೀಲ್ದಾರರು, ತಾಲೂಕು ಪಂಚಾಯತ್ ಇ.ಓ, ಕೆಐಎಡಿಬಿ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.







Tags

PaycompensationISPRLland acquisition
share
ವಾರ್ತಾಭಾರತಿ
ವಾರ್ತಾಭಾರತಿ
Next Story
X