Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗ್ರಾಪಂ ಸಿಬ್ಬಂದಿಗೆ ಪಿಎಫ್- ಇಎಸ್‌ಐ...

ಗ್ರಾಪಂ ಸಿಬ್ಬಂದಿಗೆ ಪಿಎಫ್- ಇಎಸ್‌ಐ ಸೌಲಭ್ಯ: ಉಡುಪಿ ಜಿಲ್ಲೆಯಲ್ಲಿ ರಾಜ್ಯಕ್ಕೆ ಮಾದರಿ ಅನುಷ್ಠಾನ

ವಾರ್ತಾಭಾರತಿವಾರ್ತಾಭಾರತಿ8 Dec 2025 8:26 PM IST
share
ಗ್ರಾಪಂ ಸಿಬ್ಬಂದಿಗೆ ಪಿಎಫ್- ಇಎಸ್‌ಐ ಸೌಲಭ್ಯ: ಉಡುಪಿ ಜಿಲ್ಲೆಯಲ್ಲಿ ರಾಜ್ಯಕ್ಕೆ ಮಾದರಿ ಅನುಷ್ಠಾನ

ಉಡುಪಿ: ಸ್ವಚ್ಛ ಭಾರತ್, ತೆರಿಗೆ ವಸೂಲಾತಿ ಹಾಗೂ ಹೊಸತನದ ಕಾರ್ಯ ಚಟುವಟಿಕೆಗಳ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯು ಇದೀಗ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಇ ಪಿಎಫ್ ಹಾಗೂ ಇಎಸ್‌ಐ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಪ್ರಪ್ರಥಮ ಅನುಷ್ಠಾನದೊಂದಿಗೆ ರಾಜ್ಯದ ಮಾದರಿ ಜಿಲ್ಲೆಯಾಗಿ ಹೊರ ಹೊಮ್ಮಿದೆ.

ಗ್ರಾಮ ಪಂಚಾಯತ್ ನೌಕರರ ಬಹುದಿನಗಳ ಬೇಡಿಕೆಯಾದ ಭವಿಷ್ಯ ನಿಧಿ(ಪಿಎಫ್) ಹಾಗೂ ಆರೋಗ್ಯ ವಿಮಾ ಯೋಜನೆ(ಇಎಸ್‌ಐ)ಸೌಲಭ್ಯ ಒದಗಿಸಲು ಆರಂಭಿಕ ಹಂತದಲ್ಲಿ ಉಡುಪಿ, ಧಾರವಾಡ, ಬೆಂಗಳೂರು ಗ್ರಾಮಾಂತರ ಹಾಗೂ ದಕ್ಷಿಣ ಕನ್ನಡದಲ್ಲಿ ಪ್ರಕ್ರಿಯೆಗಳಿಗೆ ಚಾಲನೆ ನೀಡಲಾಗಿತ್ತು. ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿ, ನೇಮಕಾತಿ ವಿಧಾನ ಹಾಗೂ ಇತರ ಸೇವಾ ಷರತ್ತುಗಳು) ನಿಯಮಗಳು 2022ರಲ್ಲಿನ ತಿದ್ದುಪಡಿ ಪ್ರಕಾರ ಜಿಲ್ಲೆಯ ಪ್ರತೀ ತಾಲೂಕು ಪಂಚಾಯತ್ ವ್ಯಾಪ್ತಿಯನ್ನು ಅನುಷ್ಠಾನ ಘಟಕವಾಗಿ ಪರಿಗಣಿಸಿ, ಗ್ರಾಪಂಗಳ ಅನುಮೋದಿತ ಸಿಬ್ಬಂದಿಗೆ ಭವಿಷ್ಯ ನಿಧಿ ಹಾಗೂ ಇಎಸ್‌ಐ ಸೌಲಭ್ಯ ಜಾರಿಗೆ ತರಲು ಉಲ್ಲೇಖಿಸಲಾಗಿತ್ತು.

ಧಾರವಾಡ, ಬೆಂಗಳೂರು ಗ್ರಾಮಾಂತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾಗಶಃ ಅನುಷ್ಠಾನವಾಗಿದ್ದು, ಈ ಪೈಕಿ ವ್ಯವಸ್ಥಿತ ಪೂರ್ವಸಿದ್ಧತೆ ಹಾಗೂ ಸಮನ್ವಯದೊಂದಿಗೆ ಉಡುಪಿ ಜಿಲ್ಲೆ ಅನುಷ್ಠಾನ ಮಾಡುವುದರೊಂದಿಗೆ ಮಾದರಿಯಾಗಿ ಗುರುತಿಸಿಕೊಂಡಿದೆ.

ಪಾವತಿ ವಿಧಾನ: ಈ ಸೌಲಭ್ಯಕ್ಕಾಗಿ ನೌಕರರು ತಮ್ಮ ಮೂಲವೇತನ ಹಾಗೂ ತುಟ್ಟಿ ಭತ್ಯೆಯ ಶೇ.12ರಷ್ಟನ್ನು ಪಾವತಿಸಿದರೆ ಸಂಬಂಧಿಸಿದ ಗ್ರಾಮ ಪಂಚಾಯತ್ ತನ್ನ ಪಾಲನ್ನು ನೌಕರರ ಪಿಎಫ್ ವಂತಿಗೆ ಸಮನಾಗಿ ಪಾವತಿ ಮಾಡಲಿದೆ.

ಇಎಸ್‌ಐಗೆ ನೌಕರರು ಶೇ.0.75ರಷ್ಟು ಹಾಗೂ ಗ್ರಾಮ ಪಂಚಾಯತ್ ತನ್ನ ಪಾಲಿನ ಶೇ.3.25ರಷ್ಟು ಪಾವತಿಸಲಿದೆ. ಆರ್ಥಿಕ ಭದ್ರತೆ, ಉಳಿತಾಯ, ಪಿಂಚಣಿ ಸೇರಿದಂತೆ ವೈದ್ಯಕೀಯ ಆರೈಕೆ, ಅನಾರೋಗ್ಯ ನಿರ್ವಹಣೆ, ಹಾಗೂ ನಗದು ಸೌಲಭ್ಯಗಳು ಈ ವ್ಯಾಪ್ತಿಯಲ್ಲಿ ಅನ್ವಯವಾಗುವುದರಿಂದ ಗ್ರಾಮ ಪಂಚಾಯತ್ ನೌಕರರಿಗೆ ಉಪಯುಕ್ತವಾಗಲಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಈ ಕುರಿತು ಆದ್ಯತೆಯೊಂದಿಗೆ ಗಮನಹರಿಸಿರುವುದರಿಂದ, ಈಗಾಗಲೇ ತಾಲೂಕು ಪಂಚಾಯತ್‌ಗಳಲ್ಲಿ ನಿಗದಿತ ಖಾತೆಯನ್ನು ತಾಪಂ ಇ.ಓ ಹಾಗೂ ಲೆಕ್ಕಾಧಿಕಾರಿಗಳ ಪದನಾಮದಲ್ಲಿ ತೆರೆಯಲಾಗಿದ್ದು, ಪ್ರಕ್ರಿಯೆಗಳನ್ನು ನಿರ್ವಹಿಸಲು ಮೇಲ್ವಿಚಾರಕರನ್ನೂ ನೇಮಕ ಮಾಡಿಕೊಳ್ಳಲಾಗಿದೆ.

ಇಎಸ್‌ಐ ಹಾಗೂ ಇಪಿಎಫ್ ಅಡಿಯಲ್ಲಿ ದೊರೆಯುವ ಸೌಲಭ್ಯಗಳ ಕುರಿತಂತೆ ಜಿಲ್ಲಾಮಟ್ಟದಲ್ಲಿ ಇಲಾಖೆಗಳ ಸಮನ್ವಯದೊಂದಿಗೆ ಎಲ್ಲಾ ಗ್ರಾಮ ಪಂಚಾಯತ್‌ನ ಸಿಬ್ಬಂದಿಗಳು ಹಾಗೂ ಗ್ರಂಥಾಲಯ ಮೇಲ್ವಿಚಾರಕರಿಗೆ ಕಾರ್ಯಾಗಾರದ ಮೂಲಕ ಪೂರ್ಣ ಮಾಹಿತಿಯನ್ನೂ ನೀಡಲಾಗಿದೆ.

803 ಸಿಬ್ಬಂದಿಗಳಿಗೆ ಸೌಲಭ್ಯ:

ಉಡುಪಿ ಜಿಲ್ಲೆಯ 155 ಗ್ರಾಮ ಪಂಚಾಯತ್‌ಗಳ ಪೈಕಿ 654 ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ 149 ಗ್ರಂಥಾಲಯ ಮೇಲ್ವಿಚಾರಕರು ಈ ಸೌಲಭ್ಯ ಪಡೆಯಲಿದ್ದಾರೆ.

2008ರಿಂದಲೂ ಈ ಕುರಿತು ಹೋರಾಟ ನಡೆಸುತ್ತಿದ್ದ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಸೇವಾಭದ್ರತೆ ಹಾಗೂ ಆರೋಗ್ಯ ಸೌಲಭ್ಯದ ನಿಟ್ಟಿನಲ್ಲಿ ಇದು ಮಹತ್ತರವಾದ ಕೊಡುಗೆಯಾಗಿದೆ.

‘ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ತಾಲೂಕು ಮಟ್ಟದ ಘಟಕವಾಗಿ ಗ್ರಾಪಂ ನೌಕರರಿಗೆ ಭವಿಷ್ಯ ನಿಧಿ ಮತ್ತು ಇಎಸ್‌ಐ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಂಡ ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಅವರ ಕಾರ್ಯ ಅಭಿನಂದನೆಯ. ಇದು ರಾಜ್ಯದಲ್ಲಿಯೇ ಮಾದರಿಯಾದ ಪ್ರಯತ್ನವಾಗಿದ್ದು ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

-ಪದ್ಮನಾಭ ಆರ್.ಕುಲಾಲ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಕ.ರಾ.ಗ್ರಾ.ಪಂ.ನೌ.ಶ್ರೇ.ಸಂಘ

‘ಗ್ರಾಮ ಪಂಚಾಯತ್‌ಗಳ ಯೋಜನೆ ಹಾಗೂ ಸೌಲಭ್ಯಗಳನ್ನು ನಾಗರಿಕರಿಗೆ ತಲುಪಿಸಲು ಸಿಬ್ಬಂದಿಗಳ ಶ್ರಮ ಬಹುಮುಖ್ಯವಾದುದು. ಇಪಿಎಫ್ ಹಾಗೂ ಇಎಸ್‌ಐ ಸೌಲಭ್ಯಗಳ ಅನುಷ್ಠಾನಕ್ಕೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರು- ಸದಸ್ಯರು, ಪಿಡಿಓ ಹಾಗೂ ಜಿ.ಪಂ. ತಾ.ಪಂ ಹಂತದ ಅಧಿಕಾರಿಗಳ ಸಹಕಾರ ಹಾಗೂ ಸಮನ್ವಯಕ್ಕಾಗಿ ಕೃತಜ್ಞತೆ ಗಳು’

-ಪ್ರತೀಕ್ ಬಾಯಲ್, ಸಿಇಒ, ಜಿಪಂ ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X