Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ''ಬಿಎಸ್ಸೆನ್ನೆಲ್ ಟವರ್ ಗಳಿಗೆ ಕಳಪೆ...

''ಬಿಎಸ್ಸೆನ್ನೆಲ್ ಟವರ್ ಗಳಿಗೆ ಕಳಪೆ ಗುಣಮಟ್ಟದ ಬ್ಯಾಟರಿ, ಸೋಲಾರ್ ಪ್ಯಾನೆಲ್ ಪೂರೈಕೆ''

ಸಂಸದ ಕೋಟ ಸಭೆಯಲ್ಲಿ ಸಮಸ್ಯೆ ತೋಡಿಕೊಂಡ ಬಿನ್ನೆಸ್ಸೆನ್ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ21 Nov 2024 12:59 PM IST
share
ಬಿಎಸ್ಸೆನ್ನೆಲ್ ಟವರ್ ಗಳಿಗೆ ಕಳಪೆ ಗುಣಮಟ್ಟದ ಬ್ಯಾಟರಿ, ಸೋಲಾರ್ ಪ್ಯಾನೆಲ್ ಪೂರೈಕೆ

ಉಡುಪಿ, ನ.21: ಉಡುಪಿ -ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ ರಜತಾದ್ರಿಯ ಸಂಸದರ ಕಚೇರಿಯಲ್ಲಿ ಬುಧವಾರ ಬಿಸ್ಸೆನ್ನೆಲ್ ಅಧಿಕಾರಿಗಳ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸಿದರು. ಬ್ಯಾಟರಿ ಕೊರತೆ ಕಾರಣ ಸುಮಾರು 60ಕ್ಕೂ ಅಧಿಕ ಟವರ್ ಗಳು ಕಾರ್ಯನಿರ್ವಹಿಸಲು ತೊಂದರೆಯಾಗುತ್ತಿವೆ. ಕೆಲವು ಕಡೆಗಳಲ್ಲಿ ಜನರೇಟರ್ ವ್ಯವಸ್ಥೆ ಇದ್ದರೂ ನಿರ್ವಹಣೆ ಕೊರತೆ, ಗುತ್ತಿಗೆದಾರರ ಸಮಸ್ಯೆಯಿಂದ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಈ ಕುರಿತು ಇಲಾಖೆ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಈ ವೇಳೆ ಅಧಿಕಾರಿಗಳು, ಬ್ಯಾಟರಿ ಮತ್ತು ಸೋಲಾರ್ ಪ್ಯಾನೆಲ್ಗಳು ಕಳಪೆ ಗುಣಮಟ್ಟದಲ್ಲಿ ಬರುತ್ತಿರುವುದರಿಂದ ಗುಣಮಟ್ಟದ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಸಮಸ್ಯೆ ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು, ಸಂಬಂಧಿತ ಕೇಂದ್ರ ಸಚಿವರಿಗೆ ಪತ್ರ ಬರೆದು ಈ ಬಗ್ಗೆ ಗಮನ ಸೆಳೆಯುವುದಾಗಿ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಬ್ಯಾಟರಿಗಳು ಬಂದಿವೆ ಆದರೆ ಅಳವಡಿಸಿಲ್ಲ. ಗುತ್ತಿಗೆದಾರರು ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಸಾಕಷ್ಟು ತೊಂದರೆಗಳಾಗಿದೆ ಎಂದರು. ಅಗತ್ಯವಿದ್ದರೆ ಪ್ರಕರಣ ದಾಖಲಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸದರು ಸೂಚಿಸಿದರು.

ಉಡುಪಿ ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ ನ 191 ಟವರ್ ಗಳಿದ್ದು, ಅವುಗಳ ಪೈಕಿ ಬಹಳಷ್ಟು ಟವರ್ ಗಳು 3ಜಿಯಿಂದ 4ಜಿಗೆ ಮೇಲ್ದರ್ಜೆಗೇರಲು ವಿಳಂಬವಾಗುತ್ತಿವೆ ಎಂದು ಸಂಸದರು ಆಕ್ಷೇಪಿಸಿದರು. ಬಿಎಸ್ಸೆನ್ನೆಲ್ ಟವರ್ ನಿರ್ವಹಣೆಗೆ ಪೈಲೆಟ್ ಯೋಜನೆಯನ್ನು ಯೋಜಿಸಿರುವುದಾಗಿ ತಿಳಿಸಿದ ಸಂಸದರು, ಗ್ರಾಪಂ ಮಟ್ಟದಲ್ಲಿ ನಿರ್ವಹಣೆಗೆ 20 ಗ್ರಾಮಗಳನ್ನು ಪೈಲೆಟ್ ಆಗಿ ಆಯ್ಕೆ ಮಾಡಿ ನಿರ್ವಹಣೆ ಜವಾಬ್ದಾರಿಯನ್ನು ಅವರಿಗೆ ನೀಡುವುದಕ್ಕೆ ಆಲೋಚನೆ ಮಾಡಲಾಗುವುದು ಎಂದು ಹೇಳಿದರು. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

30ಕ್ಕೂ ಹೆಚ್ಚು ಹೊಸ ಟವರ್ ಗಳಿಗೆ ಪ್ರಸ್ತಾವ

ಸುಮಾರು 30ಕ್ಕೂ ಅಧಿಕ ಹೊಸ ಟವರ್ ಗಳಿಗೆ ಪ್ರಸ್ತಾವ ಸಲ್ಲಿಕೆಯಾಗಿದೆ. ಈ ಎಲ್ಲಾ ಟವರ್ ಗಳಿಗೂ ತಕ್ಷಣ ಅನುಮತಿ ನೀಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೇಂದ್ರ ಸರಕಾರದ ಪ್ರತಿಷ್ಠಿತ ಇಲಾಖೆಯಾಗಿರುವ ಬಿಎಸ್ಸೆನ್ನೆಲ್ ಖಾಸಗಿ ಕಂಪೆನಿಗಳಿಗೆ ಸಡ್ಡು ಹೊಡೆಯುವಂತೆ ಬೆಳೆಯಬೇಕು. ಆಗ ಮಾತ್ರ ಜನರಿಗೆ ವಿಶ್ವಾಸ ಬರುವುದಕ್ಕೆ ಸಾಧ್ಯ. ಎಲ್ಲಾ ಅಧಿಕಾರಿಗಳು ಒಟ್ಟಾಗಿ ಈ ಕುರಿತು ಕೆಲಸ ಮಾಡಿ ಹಳ್ಳಿಹಳ್ಳಿಗೂ ನೆಟ್ವರ್ಕ್ ಸಂಪರ್ಕ ಸಿಗುವಂತೆ ಮಾಡಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಬಿಸ್ಸೆನ್ನೆಲ್ ಡಿಜಿಎಂ ನವೀನ್ ಗುಪ್ತ, ಎ.ಜಿ.ಆರ್. ಎಂ.ಬಿಂದೂ ಮುರಳೀಧರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X