Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪುರ ಹಿಂಸಾಚಾರ ಖಂಡಿಸಿ ಸಮಾನ ಮನಸ್ಕ...

ಮಣಿಪುರ ಹಿಂಸಾಚಾರ ಖಂಡಿಸಿ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 July 2023 7:59 PM IST
share
ಮಣಿಪುರ ಹಿಂಸಾಚಾರ ಖಂಡಿಸಿ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಕುಂದಾಪುರ, ಜು.25: ಮಣಿಪುರದಲ್ಲಿ ನಡೆಯುತ್ತಿರುವ ಅಮಾನುಷ ಘಟನೆಗಳನ್ನು ಖಂಡಿಸಿ ಕುಂದಾಪುರ ಸಹಬಾಳ್ವೆ, ಸಮುದಾಯ, ಕಥೊಲಿಕ್ ಸಭಾ, ಮಹಿಳಾ ಸಂಘಟನೆ, ತಾಲೂಕು ದಲಿತ ಸಂಘರ್ಷ ಸಮಿತಿ ಸಹಿತ ಹಲವು ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿ ಪ್ರತಿಭಟನಾ ಹಮ್ಮಿಕೊಳ್ಳಲಾಗಿತ್ತು.

ಕಾಂಗ್ರೆಸ್ ಮುಖಂಡ ಕೆ.ವಿಕಾಸ್ ಹೆಗ್ಡೆ ಮಾತನಾಡಿ, ಪ್ರಪಂಚದಾದ್ಯಂತ ಈ ರೀತಿಯ ಹಲವು ಜನಾಂಗೀಯ ಕಲಹ ಹಾಗೂ ಘರ್ಷಣೆಗಳು ನಡೆದಾಗ ಅಲ್ಲಿನ ಆಳುವ ಸರಕಾರಗಳು ಅವುಗಳನ್ನು ಹತೋಟಿಗೆ ತಂದಿರುವ ನಿದರ್ಶನ ಗಳಿವೆ. ಆದರೆ ಮಣಿಪುರದಲ್ಲಿ ಸುದೀರ್ಘ ಅವಧಿಯಿಂದ ಘರ್ಷಣೆ ಹಾಗೂ ಪ್ರಾಣ ಹಾನಿ ಸಂಭವಿಸುತ್ತಿದ್ದರೂ, ಆಳುವ ಸರಕಾರಗಳು ಪರಿಣಾಮಕಾರಿ ನಡೆಯನ್ನು ತೋರಿಸಿಲ್ಲ. ಆದುದರಿಂದ ಇದು ಸರಕಾರಿ ಪ್ರಯೋಜಿ ತವೇ ಎಂಬ ಅನುಮಾನ ಮೂಡಿಸುತ್ತಿದೆ ಎಂದರು.

ಹಿರಿಯ ಪತ್ರಕರ್ತ ಶಶಿಧರ ಹೆಮ್ಮಾಡಿ ಮಾತನಾಡಿ, ಮಣಿಪುರದಲ್ಲಿ ನಡೆದ ಘಟನೆಗೆ ದೇಶವೇ ತಲೆ ತಗ್ಗಿಸಬೇಕಾಗಿದೆ. ಬುಡಕಟ್ಟು ಜನಾಂಗವೊಂದರ ಮೇಲೆ ನಡೆದ ಭಯಾನಕ ಕೌರ್ಯದ ಮಾಹಿತಿಯಿದ್ದರೂ ಸರಕಾರ ಹಾಗೂ ಸಂಬಂಧಿಸಿದ ಇಲಾಖೆ ಕ್ರಮ ಕೈಗೊಂಡಿರಲಿಲ್ಲ. 5 ಸಾವಿರಕ್ಕೂ ಹೆಚ್ಚು ಮನೆ ಗಳನ್ನು ಸುಟ್ಟು ಹಾಕಿದ್ದರೂ, ಲೆಕ್ಕವಿಲ್ಲದಷ್ಟು ಚರ್ಚುಗಳನ್ನು ನಾಶ ಮಾಡಿದ್ದರೂ, ಮೌನಕ್ಕೆ ಶರಣಾಗಿರುವ ಇಲ್ಲಿನ ಸರ್ಕಾರಗಳ ವೈಫಲ್ಯ ಜಗತ್ತಿಗೆ ಸ್ಪಷ್ಟವಾಗುತ್ತಿದೆ ಎಂದರು.

ಸಹಬಾಳ್ವೆ ಕುಂದಾಪುರದ ಸಂಚಾಲಕ ವಿನೋದ್ ಕ್ರಾಸ್ತಾ, ಉಡುಪಿ ಸಹಬಾಳ್ವೆ ಸಮಿತಿಯ ಹುಸೇನ್ ಕೋಡಿಬೆಂಗ್ರೆ, ಸಿಪಿಐ ಮುಖಂಡ ವಿ.ಚಂದ್ರ ಶೇಖರ ಮಾತನಾಡಿದರು. ಕುಂದಾಪುರ ರೋಮನ್ ಕೆಥೊಲಿಕ್ ವಲಯದ ಪ್ರಧಾನ ಧರ್ಮಗುರು ಸ್ಟ್ಯಾನಿ ತಾವ್ರೊ, ಕೆಥೊಲಿಕ್ ಸಭಾ ವಲಯ ಅಧ್ಯಕ್ಷ ವಿಲ್ಸನ್ ಡಿಆಲ್ಮೇಡಾ, ಸಹಬಾಳ್ವೆಯ ಸಂಚಾಲಕ ರಫೀಕ್, ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಮಿತಿ ಅಧ್ಯಕ್ಷ ಮಂಜುನಾಥ ಗಿಳಿಯಾರ್, ಮಾನವ ಬಂಧುತ್ವ ವೇದಿಕೆ ಘಟಕದ ಸಂಚಾಲಕ ಬರ್ನಾಡ್ ಡಿಕೋಸ್ತಾ, ಪುರಸಭೆಯ ಮಾಜಿ ಅಧ್ಯಕ್ಷೆ ದೇವಕಿ ಪಿ ಸಣ್ಣಯ್ಯ, ಸಿಪಿಎಂ ಅಧ್ಯಕ್ಷ ಹೆಚ್. ನರಸಿಂಹ, ಪುರಸಭಾ ಸದಸ್ಯರಾದ ಚಂದ್ರಶೇಖರ ಖಾರ್ವಿ, ಪ್ರಭಾವತಿ ಶೆಟ್ಟಿ, ಅಬ್ಬು ಅಹ್ಮದ್, ಅಶ್ಬಕ್ ಕೋಡಿ, ಸಮುದಾಯ ಸಂಘಟನೆಯ ಸದಾನಂದ ಬೈಂದೂರು, ಉದಯ್ ಗಾಂವ್ಕರ್, ವಾಸುದೇವ ಗಂಗೇರ್, ಬಾಲಕೃಷ್ಣ, ಕಾಂಗ್ರೆಸ್ ಪಕ್ಷದ ಬಿ.ಹಾರೋನ್ ಸಾಹೇಬ್, ಚಂದ್ರ.ಎ. ಅಮೀನ್, ಗಣೇಶ್ ಶೇರೆಗಾರ್, ಅಬ್ದುಲ್ಲಾ ಕೋಡಿ, ರೇವತಿ ಶೆಟ್ಟಿ, ಶಾಲೆಟ್ ರೆಬೆಲ್ಲೊ, ಶೋಭಾ ಸಚ್ಚಿದಾನಂದ, ಶಾಂತಿ ಪಿರೇರಾ, ಆಶಾ ಕರ್ವಾಲ್ಲೊ, ಕೇಶವ್ ಭಟ್, ರೋಶನ್ ಶೆಟ್ಟಿ, ಅಭಿಜಿತ್ ಪೂಜಾರಿ, ಜ್ಯೋತಿ ನಾಯ್ಕ್,ಸುನೀಲ್ ಪೂಜಾರ ಕೋಡಿ, ಶಿವಕುಮಾರ್, ಕುಮಾರ್ ಖಾರ್ವಿ, ಜ್ಯೋತಿ, ಅಶೋಕ್ ಸುವರ್ಣ, ರೋಶನ್ ಬರೆಟ್ಟೊ, ಮುನಾಫ್, ಯಾಸಿನ್ ಹೆಮ್ಮಾಡಿ, ಗಂಗಾಧರ್ ಶೆಟ್ಟಿ ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಕ್ಯಾಂಡಲ್ ಬೆಳಗುವ ಮೂಲಕ ಮಣಿಪುರದ ಹಿಂಸಾಚಾರ ದಲ್ಲಿ ಮೃತರಾದವರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ಕುಂದಾಪುರ ವಲಯದ ವಿವಿಧ ಚರ್ಚ್‌ಗಳ ಕ್ರೈಸ್ತ ಧರ್ಮಗುರುಗಳು, ಉಡುಪಿ ಧರ್ಮಪ್ರಾಂತ್ಯದ ಧರ್ಮಗುರುಗಳು, ಧರ್ಮಭಗಿನಿಯರು ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X