Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿವಮೊಗ್ಗದಲ್ಲಿ ರಾಘವೇಂದ್ರರ ಸೋಲು...

ಶಿವಮೊಗ್ಗದಲ್ಲಿ ರಾಘವೇಂದ್ರರ ಸೋಲು ನೂರಕ್ಕೆ ನೂರು ಖಚಿತ, ಬರೆದಿಟ್ಟುಕೊಳ್ಳಿ: ಕೆ.ಎಸ್.ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ11 April 2024 9:16 AM IST
share
ಶಿವಮೊಗ್ಗದಲ್ಲಿ ರಾಘವೇಂದ್ರರ ಸೋಲು ನೂರಕ್ಕೆ ನೂರು ಖಚಿತ, ಬರೆದಿಟ್ಟುಕೊಳ್ಳಿ: ಕೆ.ಎಸ್.ಈಶ್ವರಪ್ಪ

ಬೈಂದೂರು: ಮೋದಿ ಯಾರಪ್ಪನ ಆಸ್ತಿ..? ರಾಘವೇಂದ್ರನಿಗೆ ಮಾತ್ರ ಮೋದಿನಾ? ಅಥವಾ ಅವರೊಬ್ಬ ವಿಶ್ವನಾಯಕರಾ ಎಂಬುದು ನ್ಯಾಯಾಲಯ ತೀರ್ಮಾನ ಮಾಡಲಿ ಎಂದು ಬಿ.ವೈ ರಾಘವೇಂದ್ರ ವಿರುದ್ಧ ಕೆ.ಎಸ್ ಈಶ್ವರಪ್ಪ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಕುಂದಾಪುರ ಸಮೀಪದ ಹೆಮ್ಮಾಡಿಯ ಖಾಸಗಿ ಹೋಟೆಲ್ನಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಯಾರ ಬೆದರಿಕೆಗೆ ಬಗ್ಗಲ್ಲ. ಯಾರಿಗೆ ಹೆಚ್ಚು ಕೇಸ್ ಇರುತ್ತೆಯೋ ಅವನೇ ನಿಜವಾದ ಲೀಡರ್ ಎಂದು ಬಿಜೆಪಿಯನ್ನು ಅಣಕಿಸಿದರು.

ನನ್ನ ಮಗ ಕಾಂತೇಶ್ ಗೆ ಹಾವೇರಿಯಲ್ಲಿ ಟಿಕೆಟ್ ಕೊಡಿಸುವುದಾಗಿ ಆಣೆ ಮಾಡಿದ್ದರು. ತಾನೇ ಓಡಾಡಿ ಗೆಲ್ಲಿಸ್ತೀನಿ ಎಂದು ಯಡಿಯೂರಪ್ಪ ಸುಳ್ಳು ಹೇಳಿ ಮೋಸ ಮಾಡಿದ್ದಾರೆ. ಬಿಜೆಪಿಯು ಪಕ್ಷ ಸಿದ್ದಾಂತ ಬಿಟ್ಟು ಕುಟುಂಬ ರಾಜಕಾರಣದತ್ತ ಹೋಗಿದ್ದು ಅದನ್ನು ಶುದ್ಧ ಮಾಡಲು ನನ್ನ ಸ್ಪರ್ಧೆ ಹೊರತು ಬಿಜೆಪಿ ವಿರುದ್ಧ ಸ್ಪರ್ಧೆಯಲ್ಲ ಎಂದರು.

ಬಿಜೆಪಿಯ ನೊಂದ ಹಲವು ಕಾರ್ಯಕರ್ತರು ನನ್ನ ನಂಬಿದ್ದಾರೆ. ಹಿಂದುತ್ವಕ್ಕೆ ನ್ಯಾಯ ಸಿಗಬೇಕಾದರೆ ನಾನು ಗೆಲ್ಲಬೇಕು ಎಂದು ಹಿಂದುತ್ವವಾದಿಗಳು ಬಯಸಿದ್ದಾರೆ. ಜನರ ಬೆಂಬಲ, ನೊಂದ ಕಾರ್ಯಕರ್ತರು, ಹಿಂದುತ್ವವಾದಿಗಳ ಬೆಂಬಲದಿಂದ ಚುನಾವಣೆ ಗೆಲ್ಲುವ ವಿಶ್ವಾಸವಿದೆ. ಹಿಂದೂ ಸಮಾಜ ನನಗೆ ಬೆಂಬ ನೀಡಿದೆ ಎಂದರು.

ಯಡಿಯೂರಪ್ಪ ಕೆಜೆಪಿ ಕಟ್ಟಿದ್ದು ಅಧಿಕಾರ ದಾಹದಿಂದ. ನನ್ನಂತ ನಾಯಕ ಮತ್ತೊಬ್ಬನಿಲ್ಲ ಎಂದು ಯಡಿಯೂರಪ್ಪ ಕೇಂದ್ರದವರಿಗೆ ಮಂಕುಬೂದಿ ಎರಚಿದ್ದಾರೆ. ಅಮಿತ್ ಷಾ ಕಳೆದ ವಾರ ಕರೆ ಮಾಡಿದಾಗ 'ಅಪ್ಪ-ಮಕ್ಕಳ ಕೈಗೆ ಪಕ್ಷ ಕೊಟ್ಟು ಕೇಂದ್ರದಲ್ಲಿ ಕುಟುಂಬ ರಾಜಕಾರಣ ಮುಕ್ತಿಗೆ ಹೊರಟಿರುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದೆ. ಹಿಂದುತ್ವಕ್ಕೆ ಹೋರಾಟ ಮಾಡಿದವರ ಕಡೆಗಣನೆ ಮಾಡಲಾಗಿದೆ. ಯಾವುದೋ ಜಾತಿ, ಹೊಸಬರಿಗೆ ಮಣೆ ಹಾಕಲಾಗಿದೆ' ಎಂದು ಷಾ ಅವರ ಗಮನಕ್ಕೆ ತಂದೆ. ಎಂದು ಹೇಳಿದರು.

ದೆಹಲಿಗೆ ಹೋದಾಗ ಅಮಿತ್ ಷಾ ಅವರನ್ನು ಭೇಟಿ ಮಾಡಲು ಆಗಿಲ್ಲ. ನಾನು ಹೇಳಿದ ಅಂಶದ ಬಗ್ಗೆ ಷಾ ಹಾಗೂ ಮೋದಿ ಕೂತು ಚರ್ಚೆ ಮಾಡಿರಬಹುದು. ಚುನಾವಣೆಯಲ್ಲಿ ನಿಂತು ಗೆಲ್ಲಲಿ ಎಂದು ಅವರ ಅನಿಸಿಕೆ ಇರಬಹುದು ಎಂಬುದು ನನ್ನ ಭಾವನೆ ಎಂದರು.

ದೊಡ್ಡವರ ಮಾತು ಜೀವನದಲ್ಲಿ ಮೀರಿಲ್ಲ. ಸಂಘಟನೆ ಹೇಳಿದ ಮಾತು ಕೇಳಿಕೊಂಡು ಬಂದವನು ನಾನು. ಈಶ್ವರಪ್ಪ ವಾಪಾಸ್ ಆಗ್ತಾರೆ ಅಂತಾ ಈಗಲು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಬ್ರಹ್ಮ ಬಂದರೂ ನಾನು ನನ್ನ ನಿರ್ಧಾರದಿಂದ ವಾಪಾಸ್ಸಾಗಲ್ಲ. ನೂರಕ್ಕೆ ನೂರು ರಾಘವೇಂದ್ರ ಸೋಲುತ್ತಾರೆ. ಇದನ್ನು ಬರೆದಿಟ್ಟುಕೊಳ್ಳಿ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಗೋಪಾಲ ನಾಡ, ಶ್ರೀಧರ್ ಬಿಜೂರು, ಕಟ್ ಬೆಲ್ತೂರು ಗ್ರಾ.ಪಂ ಮಾಜಿ ಅಧ್ಯಕ್ಷ ನಾಗರಾಜ ಪುತ್ರನ್, ಮೀನುಗಾರ ಮುಖಂಡ ಮೋಹನ್ ಖಾರ್ವಿ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X