Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಅಪರಾಹ್ನದ ಬಳಿಕ ಬಿಡುವು ಪಡೆದ...

ಉಡುಪಿ: ಅಪರಾಹ್ನದ ಬಳಿಕ ಬಿಡುವು ಪಡೆದ ಮಳೆ; ಹೆಚ್ಚಿದ ಹಾನಿ

ವಾರ್ತಾಭಾರತಿವಾರ್ತಾಭಾರತಿ30 May 2025 8:28 PM IST
share
ಉಡುಪಿ: ಅಪರಾಹ್ನದ ಬಳಿಕ ಬಿಡುವು ಪಡೆದ ಮಳೆ; ಹೆಚ್ಚಿದ ಹಾನಿ

ಉಡುಪಿ: ನಿರಂತರವಾಗಿ ಸುರಿಯುತಿದ್ದ ಮಳೆ, ಶುಕ್ರವಾರ ಅಪರಾಹ್ನದ ಬಳಿಕ ಬಿಡುವು ಪಡೆದ ಕಾರಣ ಉಡುಪಿ ಜಿಲ್ಲೆಯ ಜನತೆ ನೆಮ್ಮದಿಯ ನಿಟ್ಟುಸಿರುವ ಬಿಡುವಂತಾಯಿತು. ನಿನ್ನೆ ಸಂಜೆಯಿಂದ ಇಂದು ಮುಂಜಾನೆಯವರೆಗೆ ನಿರಂತರವಾಗಿ ಸುರಿದ ಮಳೆ, ನೆರೆಯ ಭೀತಿಯನ್ನು ಉಂಟುಮಾಡಿತ್ತಲ್ಲದೇ, ಇಂದು ಪುನರಾರಂಭಗೊಳ್ಳಬೇಕಿದ್ದ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಆರಂಭವನ್ನು ಒಂದು ದಿನ ಮುಂದೂಡುವಂತೆ ಮಾಡಿತ್ತು.

ನಿರಂತರವಾಗಿ ಸುರಿದ ಮಳೆಯ ಹಿನ್ನೆಲೆಯಲ್ಲಿ ಮುಂಜಾನೆಯೇ ಜಿಲ್ಲಾದಿಕಾರಿಯವರು ಜಿಲ್ಲೆಯ ಎಲ್ಲಾ ಶಾಲೆಗಳಿಗೂ ರಜೆ ಘೋಷಿಸಿದ್ದರು. ಇದರಿಂದ ಬೇಸಿಗೆ ರಜೆಯ ಕಳೆದು ಇಂದು ಶಾಲೆಗೆ ಬರಲು ಸಿದ್ಧರಾಗಿದ್ದ ಮಕ್ಕಳು ನಾಳೆಯವರೆಗೆ ಕಾಯುವಂತಾಯಿತು.

ಬೆಳಗ್ಗೆ 11ಗಂಟೆಯ ಬಳಿಕ ಮಳೆಯ ಬಿರುಸು ಕಡಿಮೆಯಾಯಿತು. 12 ಗಂಟೆಯ ಬಳಿಕ ಒಂದೆರಡು ಬಾರಿ ಬಿಸಿಲು ಸಹ ಆಕಾಶದಲ್ಲಿ ಕಾಣಿಸಿ ಕೊಂಡಿತ್ತು. ಆದರೆ ನಿರಂತರ ಮಳೆ ಹಾಗೂ ಗಾಳಿಯಿಂದ ಜಿಲ್ಲೆಯಲ್ಲಿ ಹಾನಿಯ ಪ್ರಕರಣಗಳು ಮಾತ್ರ ಹೆಚ್ಚಾಗಿವೆ.

ಮನೆಗೆ ನುಗ್ಗಿದ ನೀರು: ನಿರಂತರ ಮಳೆಯಿಂದ ಉಡುಪಿ ತಾಲೂಕು ಕೊಡವೂರು ಗ್ರಾಮದ ಕೊಳ ಪ್ರದೇಶದಲ್ಲಿ ಮಳೆ ನೀರು ಮನೆಯೊಂದಕ್ಕೆ ನುಗ್ಗಿ ಗೃಹಪಯೋಗಿ ವಸ್ತು ಹಾಗೂ ದಿನಸಿ ಸಾಮಗ್ರಿಗಳಿಗೆ ಹಾನಿಯಾಗಿದೆ ಎಂದು ಉಡುಪಿ ತಹಶೀಲ್ದಾರ್ ಕಚೇರಿಯ ಮಾಹಿತಿ ತಿಳಿಸಿದೆ.

ಬಾವಿಯ ಆವರಣಗೋಡೆ ಕುಸಿತ: ಕುಂದಾಪುರ ತಾಲೂಕಿನ ಕೆದೂರು ಗ್ರಾಮದ ನಡಿಬೆಟ್ಟಿನ ಕರುಣಾಕರ ಶೆಟ್ಟಿ ಎಂಬವರ ತೋಟದ ಬಾವಿಯ ಆವರಣ ಗೋಡೆ ಪೂರ್ಣವಾಗಿ ಕುಸಿದು ಭೂಮಿಯೊಳಗೆ ಸೇರಿದೆ. ಇದರಿಂದ ಈಗ ಆಳವಾದ ನೀರಿನ ಹೊಂಡ ಮಾತ್ರ ಕಂಡುಬರುತ್ತಿದೆ. ಅದೇ ತಾಲೂಕಿನ ಮೊಳಹಳ್ಳಿ ಗ್ರಾಮದ ರಾಮ ಕುಲಾಲ ಎಂಬವರ ಮನೆಯ ಆವರಣ ಗೋಡೆ ಭಾರೀ ಮಳೆಗೆ ಕುಸಿದು ಬಿದ್ದಿದ್ದು ಒಂದು ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ.

ಗಾಳಿ-ಮಳೆಯಿಂದ ತೋಟಗಾರಿಕಾ ಬೆಳೆಗಳಿಗೂ ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಹಕ್ಲಾಡಿಯ ಶಶಿಕಾಂತ ದಾಸ್ ಎಂಬವರ ಅಡಿಕೆ ತೋಟದಲ್ಲಿದ್ದ ಮರಗಳು ಧರಾಶಾಹಿಯಾಗಿವೆ. ಅದೇ ರೀತಿ ಗುಡಿಬೆಟ್ಟು ಮೇಲಬೆಟ್ಟು ಗಿರಿಜಮ್ಮ ಶೆಟ್ಟಿಯವರ ಮನೆಯ ಅಡಿಕೆ ತೋಟದ ಮೇಲೆ ದೊಡ್ಡ ಗಾತ್ರದ ಹುಣಸೆ ಮರ ಬಿದ್ದು ಅಡಿಕೆ ತೋಟಕ್ಕೆ ಭಾರೀ ಹಾನಿಯುಂಟಾಗಿದೆ.

ಕುಂದಾಪುರ ಪುರಸಭಾ ವ್ಯಾಪ್ತಿಯ ಖಾರ್ವಿಕೇರಿಯಲ್ಲಿ ಮಂಜುಳಾ ಖಾರ್ವಿ ಹಾಗೂ ಸುರೇಶ್ ಖಾರ್ವಿ ಅವರ ಮನೆ ಮೇಲೆ ಮರ ಬಿದ್ದು ತಲಾ 50ಸಾವಿರ ರೂ.ಗಳಿಗೂ ಅಧಿಕ ಹಾನಿಯ ಅಂದಾಜು ಮಾಡಲಾಗಿದೆ.

11 ಮನೆಗಳಿಗೆ ಹಾನಿ, 8ಲಕ್ಷ ರೂ.ನಷ್ಟ: ಉಳಿದಂತೆ ಜಿಲ್ಲೆಯ ವಿವಿದೆಡೆಗಳಲ್ಲಿ 11ಕ್ಕೂ ಅಧಿಕ ಮನೆಗಳಿಗೆ ಹಾನಿಯುಂಟಾಗಿದ್ದು, ಎಂಟು ಲಕ್ಷ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ.

ಬೈಂದೂರು ತಾಲೂಕು ಶಿರೂರು ಗ್ರಾಮದ ರಾಘು ಹಾಗೂ ರಫೀಕ್ ಎಂಬವರ ಮನೆ ಗಾಳಿ-ಮಳೆಯಿಂದ ಭಾಗಶ: ಹಾನಿಯಾಗಿದ್ದು, ತಲಾ ಎರಡು ಲಕ್ಷ ರೂ.ನಷ್ಟ ಉಂಟಾಗಿರುವುದಾಗಿ ತಹಶೀಲ್ದಾರ್‌ರ ಮಾಹಿತಿ ತಿಳಿಸಿದೆ. ಅದೇ ರೀತಿ ಕಾಪ್ಸಿ ಎಂಬವರ ಮನೆಗೆ ಒಂದು ಲಕ್ಷ ರೂ.ನಷ್ಟವಾಗಿದೆ.

ಇನ್ನು ಕುಂದಾಪುರ ತಾಲೂಕು ಕರ್ಕುಂಜೆಯ ಸಂಜೀವ ಮೊಗವೀರ ಹಾಗೂ ಕಾಪು ತಾಲೂಕು ಪಲಿಮಾರು ಗ್ರಾಮದ ಗೋಪಾಲಕೃಷ್ಣ ಎಂಬವರ ಮನೆಗಳಿಗೂ ತಲಾ ಒಂದು ಲಕ್ಷ ರೂ.ನಷ್ಟ ಉಂಟಾಗಿದೆ.

ಉಡುಪಿ ತಾಲೂಕಿನ ಆತ್ರಾಡಿಯ ದೂಮ ಪೂಜಾರಿ, ಪೆರ್ಡೂರಿನ ಗುಲಾಬಿ ಆಚಾರ್ಯ, ಪಡುತೋನ್ಸೆಯ ಸುಂದರ ಕೋಟ್ಯಾನ್, ಮೀನಾ ಬಂಗೇರ, ಕುಂದಾಪುರ ಕಸಬಾದ ದಿನೇಶ್ ಎಂಬವರ ಮನೆಗಳಿಗೂ ಮಳೆಯಿಂದ ಭಾರೀ ಹಾನಿ ಉಂಟಾಗಿದೆ.

ಹವಾಮಾನ ಇಲಾಖೆಯು ನಾಳೆಗೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯಾವುದೇ ಮಳೆಯ ಎಚ್ಚರಿಕೆಯನ್ನು ನೀಡಿಲ್ಲ. ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಇನ್ನು ಮೂರು ದಿನಗಳ ಎಲ್ಲೋ ಅಲರ್ಟ್ ನೀಡಲಾಗಿದೆ. ಹೀಗಾಗಿ ನಾಳೆಯಿಂದ ಬಿಸಿಲಿನ ವಾತಾವರಣವನ್ನು ನಿರೀಕ್ಷಿಸಬಹುದಾಗಿದೆ.

ಜಿಲ್ಲೆಯಲ್ಲಿ ಮಳೆ ವಿವರ

ಶುಕ್ರವಾರ ಬೆಳಗ್ಗೆ 8:30ರವರೆಗೆ ಹಿಂದಿನ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 96.1ಮಿ.ಮೀ. ಮಳೆಯಾಗಿದೆ.

ಬೈಂದೂರು 89.7ಮಿ.ಮೀ.

ಬ್ರಹ್ಮಾವರ 108.0ಮಿ.ಮೀ.

ಹೆಬ್ರಿ 58.9ಮಿ.ಮೀ.

ಕುಂದಾಪುರ 92.1ಮಿ.ಮೀ.

ಉಡುಪಿ 137.5ಮಿ.ಮೀ.

ಕಾಪು 182.1ಮಿ.ಮೀ.

ಕಾರ್ಕಳ 78.5ಮಿ.ಮೀ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X