Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರಾವಳಿ ಜಿಲ್ಲೆಗಳಲ್ಲಿ ಮಾ.31ರವರೆಗೆ...

ಕರಾವಳಿ ಜಿಲ್ಲೆಗಳಲ್ಲಿ ಮಾ.31ರವರೆಗೆ ಗಾಳಿ-ಮಳೆ ಸಾಧ್ಯತೆ

ಗಾಳಿ-ಮಳೆಯಿಂದ ಉಡುಪಿ ಜಿಲ್ಲೆಯಲ್ಲಿ 14 ಲಕ್ಷ ರೂ.ಗಳಿಗೂ ಅಧಿಕ ಹಾನಿ

ವಾರ್ತಾಭಾರತಿವಾರ್ತಾಭಾರತಿ27 March 2025 9:43 PM IST
share
ಕರಾವಳಿ ಜಿಲ್ಲೆಗಳಲ್ಲಿ ಮಾ.31ರವರೆಗೆ ಗಾಳಿ-ಮಳೆ ಸಾಧ್ಯತೆ

ಉಡುಪಿ: ರಾಜ್ಯದ ಪಶ್ಚಿಮ ಕರಾವಳಿಯ ಉಡುಪಿ ಮತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾ.31ರವರೆಗೆ ಅಲ್ಲಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಿಡಿಲು ಸಹಿತ ಮಳೆ ಸುರಿಯುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಭಾರೀ ಗಾಳಿ, ಸಿಡಿಲು-ಗುಡುಗು ಸಹಿತ ಸುರಿದ ಮಳೆಯಿಂದ ಇನ್ನಷ್ಟು ಹಾನಿಯ ವಿವರಗಳು ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಮಿಗೆ ಬಂದಿವೆ. ಇದರಲ್ಲಿ ಕಾರ್ಕಳ ಮುಡಾರಿನ ಕೋಳಿ ಫಾರ್ಮ್ ಸಂಪೂರ್ಣ ಹಾನಿ, ಕಾರ್ಕಳ ಮತ್ತು ಬೈಂದೂರು ತಾಲೂಕುಗಳ 24 ಮನೆಗಳಿಗೆ ಭಾಗಶ:ದಿಂದ ಸಂಪೂರ್ಣ ಹಾನಿ ಸೇರಿದೆ.

ಅಲ್ಲದೇ ಕಾರ್ಕಳ ತಾಲೂಕಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಹಾನಿಯಾದ 19 ಪ್ರಕರಣಗಳು, ಕುಂದಾಪುರ ತಾಲೂಕಿನಲ್ಲಿ ನಾಲ್ಕು ಪ್ರಕರಣ, ಬೈಂದೂರು ತಾಲೂಕಿನಲ್ಲಿ ಐದು ಪ್ರಕರಣಗಳು ವರದಿಯಾಗಿವೆ. ಇನ್ನು ಕಾರ್ಕಳ, ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಮಿಯ್ಯಾರು, ಕೆರಾಡಿ ಹಾಗೂ ಜಡ್ಕಲ್‌ನಲ್ಲಿ ಗಾಳಿ-ಮಳೆಯಿಂದ ಅಂಗಡಿ ಹಾಗೂ ದನದ ಕೊಟ್ಟಿಗೆಗೆ ಹಾನಿಯಾದ ವರದಿ ಬಂದಿದ್ದು, 75,000ರೂ.ಗಳಿಗೂ ಅದಿಕ ನಷ್ಟದ ಅಂದಾಜು ಮಾಡಲಾಗಿದೆ.

ಕಾರ್ಕಳ ತಾಲೂಕು ಮುಡಾರು ಗ್ರಾಮದ ಕೃಷ್ಣಪ್ಪ ಪೂಜಾರಿ ಎಂಬವರಿಗೆ ಸೇರಿದ ಕೋಳಿ ಫಾರ್ಮ್‌ನ 150ಕ್ಕೂ ಅಧಿಕ ಸಿಮೆಂಟ್ ಶೀಟ್‌ಗಳು ಗಾಳಿಗೆ ಹಾರಿಹೋಗಿದ್ದು, ಅಲ್ಲಿದ್ದ ಕೋಳಿಗಳು ಮೃತಪಟ್ಟಿವೆ. ಇದರಿಂದ ಎರಡು ಲಕ್ಷ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಒಟ್ಟಾರೆ 14 ಲಕ್ಷ ರೂ. ಹಾನಿ:

ಜಿಲ್ಲೆಯಲ್ಲಿ ಕಳೆದೆರಡು ದಿನಗಳ ಮಳೆಯಿಂದ ಇನ್ನೂ 14 ಲಕ್ಷ ರೂ.ಗಳಿಗೂ ಅಧಿಕ ಸೊತ್ತುಗಳಿಗೆ ಹಾನಿಯಾಗಿರುವ ಅಂದಾಜು ಮಾಡಲಾಗಿದೆ. ಕಾರ್ಕಳ ತಾಲೂಕಿನಲ್ಲಿ 19 ಮನೆಗಳಿಗಾದ ಹಾನಿಯಂದ 2.90 ಲಕ್ಷ ರೂ., ಬೈಂದೂರಿನ 5 ಮನೆಗಳಿಗೆ ಅಂದಾಜು 2.55ಲಕ್ಷ ರೂ., ಕಾರ್ಕಳ ತಾಲೂಕಿನಲ್ಲಿ 19 ತೋಟಗಾರಿಕಾ ಬೆಳೆಗಳಿಗಾದ ಹಾನಿಯಿಂದ 3.50ಲಕ್ಷ ರೂ, ಕುಂದಾಪುರ ತಾಲೂಕಿನಲ್ಲಿ ನಾಲ್ಕು ಪ್ರಕರಣಗಳಿಂದ 1.20 ಲಕ್ಷ ರೂ. ಬೈಂದೂರಿನ ಐದು ಪ್ರಕರಣಗಳಿಂದ 2.90 ಲಕ್ಷ ರೂ. ನಷ್ಟ ಸಂಭವಿಸಿದ ಮಾಹಿತಿಗಳು ಇಲ್ಲಿಗೆ ಬಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X