Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಾದ್ಯಂತ ಮಳೆ ಇಳಿಮುಖ

ಉಡುಪಿ ಜಿಲ್ಲೆಯಾದ್ಯಂತ ಮಳೆ ಇಳಿಮುಖ

ಹಲವು ಮನೆಗಳಿಗೆ ಹಾನಿ: ಚರಂಡಿ ದುರಸ್ತಿ, ಜನಜೀವನ ಸಹಜ ಸ್ಥಿತಿಯತ್ತ

ವಾರ್ತಾಭಾರತಿವಾರ್ತಾಭಾರತಿ21 May 2025 8:52 PM IST
share
ಉಡುಪಿ ಜಿಲ್ಲೆಯಾದ್ಯಂತ ಮಳೆ ಇಳಿಮುಖ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ರೆಡ್ ಅಲರ್ಟ್ ಇದ್ದರೂ ಬೆಳಗ್ಗೆ ನಂತರ ಮಳೆ ಪ್ರಮಾಣ ಇಳಿಮುಖವಾಗಿದೆ. ಬೆಳಗಿನ ಜಾವ ಕಾಪು, ಉಡುಪಿ ಸೇರಿದಂತೆ ಹಲವು ಭಾಗಗಳಲ್ಲಿ ಭಾರೀ ಗಾಳಿಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಕಾರ್ಕಳ-80.9ಮಿ.ಮೀ., ಕುಂದಾಪುರ-104.0ಮಿ.ಮೀ., ಉಡುಪಿ-145.7ಮಿ.ಮೀ., ಬೈಂದೂರು- 104.1ಮಿ.ಮೀ., ಬ್ರಹ್ಮಾವರ- 152.5ಮಿ.ಮೀ., ಕಾಪು-96.5ಮಿ.ಮೀ., ಹೆಬ್ರಿ-79.3ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಸರಾಸರಿ 104.7 ಮಿ.ಮೀ. ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಕಾಪು, ಪಡುಬಿದ್ರೆ, ಉಡುಪಿ, ಮಣಿಪಾಲ, ಕಾರ್ಕಳಗಳಲ್ಲಿ ಬೆಳಗ್ಗೆಯಿಂದ ಭಾರೀ ಗಾಳಿ ಮಳೆಯಾಗಿದ್ದು, ಹಲವು ಕಡೆ ಮರಗಳು ಬಿದ್ದು ತೊಂದರೆ ಉಂಟಾಗಿದೆ. ಕೆಲವು ಕಡೆ ವಿದ್ಯುತ್ ಕಂಬಗಳು ಧರೆಗೆ ಬಿದ್ದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಿದೆ. ಬಳಿಕ ಮಧ್ಯಾಹ್ನದ ನಂತರ ಮಳೆ ಕಡಿಮೆಯಾಗಿ ಸಂಜೆ ವೇಳೆ ಸಂಪೂರ್ಣ ವಿರಾಮ ಪಡೆದಿದೆ. ಇದರಿಂದ ಉಡುಪಿ, ಮಣಿಪಾಲ ಸಹಿತ ಜಿಲ್ಲೆಯ ಎಲ್ಲ ಭಾಗದಲ್ಲೂ ಸಹಜ ಸ್ಥಿತಿ ಕಂಡುಬಂದಿದೆ.

ಹಲವು ಮನೆಗಳಿಗೆ ಹಾನಿ: ಕುಂದಾಪುರ ತಾಲೂಕಿನ 74 ಉಳ್ಳೂರು ಗ್ರಾಮದ ಎರಡು ಮನೆಗಳ ಮೇಲೆ ಮರ ಬಿದ್ದು ಒಟ್ಟು 20ಸಾವಿರ ರೂ. ಹಾಗೂ ಬ್ರಹ್ಮಾವರ ತಾಲೂಕಿನ ಹೇರೂರು ಹಾಗೂ ಹನೆಹಳ್ಳಿ ಗ್ರಾಮದ ಎರಡು ಮನೆಗಳಿಗೆ ಹಾನಿಯಾಗಿ ಒಟ್ಟು 35ಸಾವಿರ ರೂ. ಮತ್ತು ಬ್ರಹ್ಮಾವರ ಕಾರ್ಕಡದ ಗಿರಿಜ ಎಂಬವರ ಮನೆ ಗಾಳಿ ಮಳೆಯಿಂದ ಭಾಗಶಃ ಹಾನಿಯಾಗಿ 2ಲಕ್ಷ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಗಾಳಿಮಳೆಯಿಂದ ಕುಂದಾಪುರ ತಾಲೂಕಿನ 74 ಉಳ್ಳೂರು ವನಜ ಆಚಾರ್ಯ ಎಂಬವರ ಅಡಿಕೆ ಬೆಳೆ ಹಾನಿಯಾಗಿ 20,000ರೂ., ಮತ್ತು ಸಿದ್ದು ಅವರ ಅಡಿಕೆ ಬೆಳೆ ಹಾನಿಯಾಗಿ 15,000ರೂ. ನಷ್ಟ ಉಂಟಾಗಿದೆ. ಕುಂದಾಪುರ ಅಂಪಾರು ಎಂಬಲ್ಲಿ ಜಾನುವಾರು ಕೊಟ್ಟಿಗೆಗೆ ಮರ ಬಿದ್ದು ಭಾಗಶಃ ಹಾನಿಯಾಗಿ 10,000ರೂ. ನಷ್ಟವಾಗಿದೆ.

ಲಕ್ಷ್ಮೀಂದ್ರ ನಗರದಲ್ಲಿ ದುರಸ್ತಿ: ನಿನ್ನೆ ಸುರಿದ ಭಾರಿ ಮಳೆಯಿಂದ ಚರಂಡಿ ನೀರು ಅಂಗಡಿ ಮುಗ್ಗಟ್ಟುಗಳಿಗೆ ನುಗ್ಗಿ ಸಮಸ್ಯೆ ಉಂಟಾಗಿದ್ದ ಮಣಿಪಾಲ ಸಮೀಪದ ಲಕ್ಷ್ಮೀಂದ್ರ ನಗರ ಮತ್ತು ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಚರಂಡಿ ದುರಸ್ತಿ ಕಾರ್ಯವನ್ನು ನಡೆಸಲಾಯಿತು.

ಲಕ್ಷ್ಮೀಂದ್ರ ನಗರದಲ್ಲಿ ಕಾಂಕ್ರೀಟ್ ರಸ್ತೆಯಿಂದ ಮುಚ್ಚಿದ್ದ ಭಾಗವನ್ನು ತೆರವು ಮಾಡಿ ಚರಂಡಿಗೆ ಸಂಕರ್ಪ ಕಲ್ಪಿಸಿ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಲಾಯಿತು. ಮಣಿಪಾಲ ಕೈಗಾರಿಕಾ ಪ್ರದೇಶ ಹಾಗೂ ನಗರಸಭಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಹಾಗೂ ಅಗಲ ಕಿರಿದಾಗಿರುವ ಚರಂಡಿ ಗಳನ್ನು ತೆರವು ಮಾಡಲಾಯಿತು.

ಸ್ಥಳಕ್ಕೆ ಭೇಟಿ ನೀಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಭಾರತಿ ಪ್ರಶಾಂತ್, ಕಲ್ಪನ ಸುಧಾಮ, ಬಾಲಕೃಷ್ಣ ಶೆಟ್ಟಿ, ಅಶೋಕ್ ನಾಯ್ಕ್, ಚಂದ್ರಶೇಖರ್, ಗಿರಿಧರ ಆಚಾರ್ಯ, ಪ್ರಮುಖ ರಾದ ದಿನೇಶ್ ಅಮೀನ್, ನಗರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X