Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋಡಿ ಕೃಷಿಭೂಮಿಗೆ ನುಗ್ಗಿದ ಉಪ್ಪುನೀರು:...

ಕೋಡಿ ಕೃಷಿಭೂಮಿಗೆ ನುಗ್ಗಿದ ಉಪ್ಪುನೀರು: ಕುಂದಾಪುರ ಎಸಿ, ತಹಶಿಲ್ದಾರ್ ಭೇಟಿ, ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ4 March 2025 8:51 PM IST
share
ಕೋಡಿ ಕೃಷಿಭೂಮಿಗೆ ನುಗ್ಗಿದ ಉಪ್ಪುನೀರು: ಕುಂದಾಪುರ ಎಸಿ, ತಹಶಿಲ್ದಾರ್ ಭೇಟಿ, ಪರಿಶೀಲನೆ

ಕುಂದಾಪುರ: ಕೋಡಿ ಆಸುಪಾಸಿನಲ್ಲಿ ಕೆಲದಿನಗಳಿಂದ ಉಪ್ಪುನೀರು ಕೃಷಿಭೂಮಿ ಹಾಗೂ ಜನವಸತಿ ಪ್ರದೇಶಕ್ಕೆ ನುಗ್ಗುತ್ತಿದ್ದು ಕುಂದಾಪುರ ಉಪವಿಭಾಗದ ಸಹಾಯಕ ಕಮಿಷನರ್ ಕೆ.ಮಹೇಶ್ಚಂದ್ರ, ತಹಶಿಲ್ದಾರ್ ಮಲ್ಲಿಕಾರ್ಜುನ್, ಪುರಸಭೆ ಮುಖ್ಯಾಧಿಕಾರಿ ಆನಂದ್ ಜೆ. ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರಿಂದ ಮಾಹಿತಿ ಪಡೆದರು.

ಕೋಡಿಯ ನಾಗಜೆಟ್ಟಿಗೇಶ್ವರ ದೇವಸ್ಥಾನ ಸಮೀಪದ ಮನೆಗಳು ಹಾಗೂ ಉಪ್ಪುನೀರಿನಿಂದ ಆವೃತವಾದ ಕೃಷಿಭೂಮಿ ಹಾಗೂ ಕೋಡಿ ಚಕ್ರಮ್ಮ ದೇವಸ್ಥಾನ ಬಳಿ ಕೃಷಿಭೂಮಿ ವೀಕ್ಷಿಸಿದ ಎಸಿ, ಅಧಿಕಾರಿಗಳು ಸ್ಥಳೀಯರು ಹಾಗೂ ಕೃಷಿಕರ ಅಹವಾಲುಗಳನ್ನು ಆಲಿಸಿದರು. ರಿಂಗ್ ರೋಡ್ ನಿರ್ಮಾಣ ಹಾಗೂ ಉಪ್ಪು ನೀರು ತಡೆಗೋಡೆ ರಚನೆ ಬಗ್ಗೆ ಸಾರ್ವಜನಿಕರು ಬೇಡಿಕೆ ಮುಂದಿಟ್ಟರು.

ಈ ಸಂದರ್ಭದಲ್ಲಿ ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನದಾಸ್ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ತಹಶಿಲ್ದಾರ್ ಮಲ್ಲಿಕಾರ್ಜುನ್, ಪುರಸಭೆ ಮುಖ್ಯಾಧಿಕಾರಿ ಆನಂದ್ ಜೆ., ಸ್ಥಳೀಯರಾದ ಪ್ರಗತಿಪರ ಕೃಷಿಕ ಗಂಗಾಧರ ಪೂಜಾರಿ ಕೋಡಿ, ಶಂಕರ್ ಪೂಜಾರಿ, ಗೋಪಾಲ ಪೂಜಾರಿ, ಅಶೋಕ್ ಪೂಜಾರಿ ಕೋಡಿ, ನಾಗರಾಜ ಪುತ್ರನ್, ಸುರೇಖಾ ಮಧುಕರ್, ಯೋಗೇಶ್ ಪೂಜಾರಿ ಕೋಡಿ, ಭಾಸ್ಕರ್ ಪುತ್ರನ್, ದಿನೇಶ್, ತೇಜ ಪೂಜಾರಿ, ತಿಮ್ಮಪ್ಪ ಖಾರ್ವಿ, ಸುನೀಲ್ ಪೂಜಾರಿ ಕೋಡಿ, ರತ್ನಾಕರ್ ಶೇರಿಗಾರ್, ಸುಬ್ರಮಣ್ಯ, ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

‘ಹಲವೆಡೆ ಕೃಷಿಭೂಮಿ ಪ್ರದೇಶಗಳಿಗೆ ಉಪ್ಪುನೀರು ನುಗ್ಗಿರುವುದು ಕಂಡು ಬಂದಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಸಣ್ಣ ನೀರಾವರಿ ಹಾಗೂ ಬಂದರು ಮತ್ತು ಒಳನಾಡು ಸಾರಿಗೆ ಇಲಾಖಾಧಿಕಾರಿಗಳಿಗೆ ಶೀಘ್ರ ಸ್ಥಳಕ್ಕೆ ಭೇಟಿ ನೀಡಲು ಸೂಚಿಸಲಾಗುತ್ತದೆ. ಅವರು ತಾಂತ್ರಿಕ ವರದಿ ಸಿದ್ದಪಡಿಸಿ, ಅಂದಾಜುಪಟ್ಟಿ ತಯಾರಿಸಿ ನೀಡುತ್ತಾರೆ. ಇದನ್ನು ಜಿಲ್ಲಾಧಿಕಾರಿ, ಸರಕಾರಕ್ಕೆ ಸಲ್ಲಿಸುತ್ತೇವೆ’

-ಕೆ.ಮಹೇಶ್ಚಂದ್ರ, ಉಪವಿಭಾಗಾಧಿಕಾರಿಗಳು, ಕುಂದಾಪುರ

ಉಪ್ಪುನೀರು ತುಂಬಿದ ಕೊಡ ಹಿಡಿದು ಗ್ರಾಮಸ್ಥರ ಪ್ರತಿಭಟನೆ

ಕೋಡಿ ಭಾಗದ ಕೃಷಿಗದ್ದೆ, ಮನೆಯಂಗಳದಲ್ಲಿ ನುಗ್ಗುತ್ತಿರುವ ಉಪ್ಪುನೀರಿನ ಸಮಸ್ಯೆ ಬಗ್ಗೆ ಯಾವುದೇ ಸ್ಪಂದನ ದೊರೆತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಮಂಗಳವಾರ ಪುರಸಭೆ ಹಾಗೂ ತಾಲೂಕು ಕಚೇರಿ ಎದುರು ಉಪ್ಪುನೀರು ತುಂಬಿದ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಸತತ ೨೦ ವರ್ಷಗಳಿಂದ ಸ್ಥಳೀಯ ಆಡಳಿತಕ್ಕೆ, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುತ್ತಾ ಬಂದಿದ್ದರೂ, ಇಲ್ಲಿಯ ತನಕ ಶಾಶ್ವತ ಪರಿಹಾರ ಕೊಡಲು ಸಾಧ್ಯವಾಗಲಿಲ್ಲ. ನೂರಾರು ಎಕರೆ ಕೃಷಿ ಭೂಮಿ, ತೆಂಗಿನ ತೋಟ ಸಂಪೂರ್ಣ ನಾಶವಾಗಿದೆ. ಬಾವಿಯಲ್ಲಿ ಸಿಹಿ ನೀರು ಸದಾಕಾಲ ಲಭ್ಯವಿದ್ದರೂ ಉಪ್ಪುನೀರು ಬಂದು ಸೇರಿ ಬಾವಿ ನೀರು ಕೂಡ ಉಪ್ಪಾಗಿ ಕುಡಿಯದಂತಾಗಿದೆ. ದೂರದಿಂದ ನೀರನ್ನು ಹೊತ್ತು ತರುವ ಪರಿಸ್ಥಿತಿ ಇದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಅಲ್ಲಲ್ಲಿ ಎಕರೆಗಟ್ಟಲೆ ಜಾಗದಲ್ಲಿ ಉಪ್ಪುನೀರು ಸಂಗ್ರಹವಾಗಿ ವಿಪರೀತ ಸೊಳ್ಳೆ ಕಾಟ ಇದೆ. ಶಾಶ್ವತ ಪರಿಹಾರ ದೊರೆಯಬೇಕು ಎಂದು ತಹಶೀಲ್ದಾರ್, ಸಹಾಯಕ ಕಮಿಷನರ್, ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ರತ್ನಾಕರ ಶೇರೆಗಾರ್, ಅಶೋಕ್ ಪೂಜಾರಿ ಕೋಡಿ, ಸುಬ್ರಹ್ಮಣ್ಯ ಶೇರೆಗಾರ್, ಪ್ರಸಾದ್ ಗಾಣಿಗ, ದಿನೇಶ್ ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X