Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಜ್ಯದ 9 ಲಕ್ಷ ಕಾರ್ಮಿಕ ಮಕ್ಕಳಿಗೆ...

ರಾಜ್ಯದ 9 ಲಕ್ಷ ಕಾರ್ಮಿಕ ಮಕ್ಕಳಿಗೆ ಸ್ಕಾಲರ್‌ಶಿಪ್: ಸಚಿವ ಸಂತೋಷ್ ಲಾಡ್

ವಾರ್ತಾಭಾರತಿವಾರ್ತಾಭಾರತಿ20 Nov 2023 7:54 PM IST
share
ರಾಜ್ಯದ 9 ಲಕ್ಷ ಕಾರ್ಮಿಕ ಮಕ್ಕಳಿಗೆ ಸ್ಕಾಲರ್‌ಶಿಪ್: ಸಚಿವ ಸಂತೋಷ್ ಲಾಡ್

ಉಡುಪಿ, ನ.20: ಕಾರ್ಮಿಕ ಕಲ್ಯಾಣ ಮಂಡಳಿಯ ಮೂಲಕ ರಾಜ್ಯದ ಕಾರ್ಮಿಕ ಮಕ್ಕಳಿಗೆ ವಿತರಿಸಲಾಗುವ ಸ್ಕಾಲರ್‌ ಶಿಪ್‌ಗೆ ಈ ಬಾರಿ 13 ಲಕ್ಷ ಅರ್ಜಿಗಳು ಬಂದಿದ್ದು, ಇವುಗಳಲ್ಲಿ 9 ಲಕ್ಷ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ನ್ನು ವಿತರಿಸುತಿದ್ದೇವೆ ಎಂದು ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಪಂನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಕರೆದ ಸುದ್ದಿಗೋಷ್ಠಿಯಲ್ಲಿ ಇಲಾಖೆಯ ಮಾಹಿತಿಗಳನ್ನು ಪತ್ರಕರ್ತ ರೊಂದಿಗೆ ಹಂಚಿಕೊಂಡರು.

ಬಿಜೆಪಿ ಅಧಿಕಾರದ ಅವಧಿಯಲ್ಲಿ ರಾಜ್ಯದ ಮೂರು ಲಕ್ಷ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿ ವೇತನ ನೀಡಲಾಗಿತ್ತು. ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಈಗ ಅದನ್ನು 9 ಲಕ್ಷಕ್ಕೆ ಏರಿಸಲಾಗಿದೆ. ಅಲ್ಲದೇ ಹಿಂದಿನ ಸರಕಾರ ಯಾವುದೇ ಸರಿಯಾದ ಕಾರಣಗಳಿಲ್ಲದೇ ಅವೈಜ್ಞಾನಿಕವಾಗಿ ಏರಿಸಿದ ಮೊತ್ತವನ್ನು ನಿರ್ದಿಷ್ಟ ಮಟ್ಟದಲ್ಲಿರಿಸಿದ್ದೇವೆ ಎಂದರು.

ಬಿಜೆಪಿ ಆಡಳಿತದಲ್ಲಿ ಕೋವಿಡ್ ಸಂದರ್ಭದ ಕಿಟ್ ವಿತರಣೆಯಲ್ಲಿ ಕಾರ್ಮಿಕ ನಿಧಿಯ ದುರ್ಬಳಕೆಯ ಆರೋಪ ಕೇಳಿ ಬಂದಿದ್ದು, ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿದ್ದ 13,000 ಕೋಟಿ ರೂ.ನಿಧಿ ಏಕಾಏಕಿ 6,500 ಕೋಟಿ ರೂ.ಗೆ ಇಳಿದಿತ್ತು. ಕೇವಲ 2,500ದಿಂದ 3000 ಕೋಟಿ ರೂ.ಮಾತ್ರ ಸೆಸ್ ಸಂಗ್ರಹವಾಗಿತ್ತು. ಅವೈಜ್ಞಾನಿಕವಾಗಿ 39 ಲಕ್ಷ ಕಾರ್ಡ್ ಗಳನ್ನು ಹೆಚ್ಚುವರಿಯಾಗಿ ಹಂಚಲಾಗಿತ್ತು. ಇದರಲ್ಲಿ ಸಾಕಷ್ಟು ನಕಲಿ ಕಾರ್ಡ್‌ಗಳ ಆರೋಪವೂ ಕೇಳಿಬಂದಿತ್ತು ಎಂದರು.

2008ರಿಂದ ನಿರ್ಮಿಸಿದ ಹೊಸ ಕಟ್ಟಡಗಳ ಜಿಯೋ ಮ್ಯಾಪಿಂಗ್ ಮೂಲಕ ಹೆಚ್ಚುವರಿಯಾಗಿ 3,000 ಕೋಟಿ ರೂ. ಸೆಸ್ ಸಂಗ್ರಹಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಜಿಯೋ ಮ್ಯಾಪಿಂಗ್ ನೆರವಿನಿಂದ ಕೇಂದ್ರ ಸಹಿತ ಕಟ್ಟಡ ನಿರ್ಮಾಣದಾರರು ನೀಡಬೇಕಾದ ಬಾಕಿ ಸೆಸ್ ವಸೂಲಿಗೂ ಕ್ರಮ ಕೈಗೊಳ್ಳಲಾಗುವುದು ಎಂದರು.

ದೇಶದಲ್ಲಿ ಶೇ.90ರಷ್ಟು ಹಾಗೂ ರಾಜ್ಯದಲ್ಲಿ ಶೇ.85ರಷ್ಟು ಅಸಂಘಟಿತ ಕಾರ್ಮಿಕರಿದ್ದು, ರಾಜ್ಯದಲ್ಲಿ ಸುಮಾರು 1.80 ಕೋಟಿ ಜನರು ಸಾಮಾಜಿಕ ಭದ್ರತೆಯಿಂದ ವಂಚಿತರಾಗಿ ಅಸಂಘಟಿತ ವಲಯದಲ್ಲಿದ್ದಾರೆ ಎಂದರು. ಇ -ಕಾಮರ್ಸನಲ್ಲಿ 5 ಲಕ್ಷ, ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ 45ರಿಂದ 50 ಲಕ್ಷ, ಸಿನಿಮಾರಂಗದಲ್ಲಿ 5 ಲಕ್ಷ, ಮನೆಗೆಲಸದಲ್ಲಿ 20 ಲಕ್ಷ ಮಂದಿ ತೊಡಗಿಸಿ ಕೊಂಡಿದ್ದು ಇವರೆಲ್ಲರೂ ಅಸಂಘಟಿತ ಕ್ಷೇತ್ರದಲ್ಲಿದ್ದಾರೆ.

ಗ್ಯಾರೇಜ್ ಕೆಲಸಗಾರರ ಸಹಿತ ವಾಣಿಜ್ಯ ವಾಹನ ಪರವಾನಗಿದಾರರು 35 ಲಕ್ಷ ಮಂದಿಯಿದ್ದು, ಇವರೆಲ್ಲರ ಅನುಕೂಲ ಕ್ಕಾಗಿ ಯೋಜನೆ ಯೊಂದನ್ನು ರೂಪಿಸಲಾಗುತ್ತಿದೆ. ಕಾರ್ಮಿಕ ಇಲಾಖೆ ಸಂಗ್ರಹಿಸುತ್ತಿರುವ ಸೆಸ್ ಆದಾಯದಲ್ಲಿ 1.20 ಕೋಟಿಯಷ್ಟು ಅಸಂಘಟಿತ ಕಾರ್ಮಿಕರನ್ನು ಸಾಮಾಜಿಕ ಭದ್ರತೆ ಯೋಜನೆಗೊಳಪಡಿಸುವ ಗುರಿಯಿದೆ. ಸೆಸ್ ಆದಾಯ ಸಂಗ್ರಹ ಹೆಚ್ಚಿದರೆ ಮತ್ತಷ್ಟು ಜನರಿಗೆ ಸೌಲಭ್ಯ ಒದಗಿಸಲಾಗುವುದು. ಇವರಿಗೆ ಯುನಿವರ್ಸಲ್ ಕಾರ್ಡ್ ಕೊಡಲೂ ಉದ್ದೇಶಿಸಲಾಗಿದೆ ಎಂದರು.

ಇಎಸ್‌ಐ ಆಸ್ಪತ್ರೆಗೆ ಜಾಗ: ಉಡುಪಿ ಜಿಲ್ಲೆಗೆ ಮಂಜೂರಾಗಿರುವ ಇಎಸ್‌ಐ ಆಸ್ಪತ್ರೆಗಾಗಿ ಜಮೀನನ್ನು ಗುರುತಿಸಿದ್ದು, ಎಲ್ಲಾ ದಾಖಲೆಗಳ ಸಹಿತ ಮರು ಪ್ರಸ್ತಾವನೆಯನ್ನು ಕೇಂದ್ರ ಕಾರ್ಮಿಕ ಇಲಾಖೆಗೆ ಕಳುಹಿಸಲಾಗಿದೆ. ರಾಜ್ಯದಲ್ಲಿ ಇಎಸ್‌ಐ ಚಂದಾದಾರರಿಗೆ ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ವಾರ್ಷಿಕ 44 ಕೋಟಿ ರೂ. ವ್ಯಯವಾಗುತ್ತಿದೆ. ರಾಜ್ಯದಲ್ಲಿ 19 ಆಸ್ಪತ್ರೆ ಹಾಗೂ ನಾಲ್ಕು ಮೆಡಿಕಲ್ ಕಾಲೇಜು ಆಸ್ಪತ್ರೆಗಳಿವೆ. ಇವುಗಳಿಗೆ ರಾಜ್ಯ ಸರಕಾರ 450 ಕೋಟಿ ರೂ.ನೀಡಿದೆ ಎಂದು ಸಂತೋಷ್ ಲಾಡ್ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಕಾರ್ಮಿಕರಿಗೆ ನೀಡಿದ ನಕಲಿ ಕಾರ್ಡುಗಳನ್ನು ಪತ್ತೆ ಹಚ್ಚಿ ರದ್ದು ಪಡಿಸಲಾಗುತ್ತಿದೆ. ಟೈಲರ್‌ಗಳಿಗೂ ಸಾಮಾಜಿಕ ಭದ್ರತೆ ಯೋಜನೆ ಒದಗಿಸಲು ಬೇಡಿಕೆಯಿದೆ ಎಂದರು.

ಕಾರ್ಮಿಕ ಇಲಾಖಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕಾರ್ಮಿಕ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ ಡಿ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X