Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಸರಕಾರ ಮತ್ತು ಸಮಾಜದಿಂದ ಆದಿವಾಸಿಗಳ...

‘ಸರಕಾರ ಮತ್ತು ಸಮಾಜದಿಂದ ಆದಿವಾಸಿಗಳ ಶೋಷಣೆ’: ಪರ್ಯಾಯ ಶಿಕ್ಷಣ ಕುರಿತ ವಿಚಾರಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ30 Sept 2024 7:19 PM IST
share
‘ಸರಕಾರ ಮತ್ತು ಸಮಾಜದಿಂದ ಆದಿವಾಸಿಗಳ ಶೋಷಣೆ’: ಪರ್ಯಾಯ ಶಿಕ್ಷಣ ಕುರಿತ ವಿಚಾರಗೋಷ್ಠಿ

ಮಣಿಪಾಲ: ನಾಡಿನ ಆದಿವಾಸಿಗಳಿಂದ (ಬುಡಕಟ್ಟು ಜನಾಂಗ ದವರು) ಅವರ ಸಮುದಾಯದ ಮೌಲ್ಯಗಳು, ಹಾಡುಗಳು, ನೃತ್ಯ, ವೈದ್ಯಕೀಯ ವ್ಯವಸ್ಥೆ, ಪರಿಸರ ವಿಜ್ಞಾನದ ಪ್ರಪಂಚ ಕಲಿಯಲು ಬಹಳಷ್ಟು ವಿಷಯಗಳಿವೆ. ಆದರೆ ನಮ್ಮ ಸರಕಾರಗಳು ಹಾಗೂ ಸಮಾಜದಿಂದ ಅವರು ಸಮಾನವಾಗಿ ಶೋಷಿಸಲ್ಪಡುತ್ತಿದ್ದಾರೆ ಎಂದು ಮಣಿಪಾಲದ ಗಾಂಧಿಯನ್ ಸೆಂಟರ್‌ನಲ್ಲಿ ನಡೆದ ವಿಚಾರ ಸಂಕಿರಣವೊಂದರಲ್ಲಿ ಮಾತನಾಡಿದವರು ಪ್ರತಿಪಾದಿಸಿದರು.

ಮಣಿಪಾಲದ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್)ನಲ್ಲಿ ಕೇರಳದ ಬಹುಮುಖ ಪ್ರತಿಭೆಯ ಬರಹಗಾರ, ನಾಟಕರಾರ, ಚಲನಚಿತ್ರ ನಿರ್ಮಾಪಕ ಹಾಗೂ ಪರ್ಯಾಯ ಶಿಕ್ಷಣದ ಪ್ರಯೋಗಶೀಲ ಕೆ.ಜೆ.ಬೇಬಿ ಅವರ ನೆನಪಿನಲ್ಲಿ ಆಯೋಜಿಸಲಾದ ಪರ್ಯಾಯ ಶಿಕ್ಷಣ ಕುರಿತ ಗೋಷ್ಠಿಯಲ್ಲಿ ಮಾತನಾಡಿದವರು ಈ ವಿಚಾರವನ್ನು ಮಂಡಿಸಿದರು.

ಆದಿವಾಸಿಗಳ ದೇಸಿ ಜ್ಞಾನ ಅಮೂಲ್ಯವಾದುದು. ಅವರಿಂದ ನಾವೆಲ್ಲರೂ ಕಲಿಯುವುದು ಬಹಳಷ್ಟಿದೆ. ಜೊತೆಗೆ, ಅವರು ಅನುಭವಿಸುತ್ತಿರುವ ಬವಣೆಯನ್ನು ಪರಿಹರಿಸುವದು ನಮ್ಮೆಲ್ಲರ ಜವಾಬ್ದಾರಿ ಸಹ ಆಗಿದೆ ಎಂದವರು ಅಭಿಪ್ರಾಯಪಟ್ಟರು.

ಆದಿವಾಸಿಗಳನ್ನು ಸಮಾಜ ಸರಿಯಾಗಿ ಅರ್ಥೈಸಿಕೊಳ್ಳದ ಕಾರಣ ಅವರು ‘ಕಾನೂನು ಶೋಷಣೆ’ಗೂ ಒಳಗಾಗುತ್ತಿದ್ದಾರೆ ಎಂದು ಅವರು ವಿವರಿಸಿದರು. ವಿವಿಧ ಕ್ಷೇತ್ರಗಳ ತಜ್ಞರಾದ ಪ್ರೊ.ಕೆ ಶಂಕರನ್, ಡಾ. ಹರಿ ಪಿ ಜಿ, ಅನಿತಾ ಇ ಎ, ವಕೀಲರಾದ ಮಿನಿ ಎಂ ಆರ್, ಏಕ್ತಾರಾ, ಸುಧಿ ಎಸ್, ಡಾ. ಶ್ರೀಕುಮಾರ್, ಪ್ರೊ.ಮೋಹನಕುಮಾರ್ ವಿ, ಪ್ರೊ. ವರದೇಶ್ ಹಿರೇಗಂಗೆ, ಡಾ.ರೆಸ್ಮಿ ಭಾಸ್ಕರನ್, ಡಾ.ದೆಬ್ರಾಯ್, ಅಪರ್ಣಾ ಪರಮೇಸ್ವರನ್ ಇದರಲ್ಲಿ ಪಾಲ್ಗೊಂಡಿದ್ದರು.

ಜಿಸಿಪಿಎಎಸ್, ಸಹೃದಯ ಸಂಗಮಮ್ ಮತ್ತು ಕೇರಳ ಸಾಂಸ್ಕೃತಿಕ ಮತ್ತು ಸಾಮಾಜಿಕ ಕೇಂದ್ರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪರ್ಯಾಯ ಶಿಕ್ಷಣ ಗೋಷ್ಠಿ, ಸಾಕ್ಷ್ಯಚಿತ್ರ ಪ್ರದರ್ಶನ, ಆದಿವಾಸಿಗಳ ಗೀತೆಗಳ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಡಾ.ಹರಿ ಪಿ.ಜಿ ಹಾಗೂ ಅನಿತಾ ಇ.ಎ. ಅವರು ಕೇರಳದ ವಯನಾಡಿನಲ್ಲಿ ಕೆ.ಜೆ.ಬೇಬಿ ನಡೆಸುತ್ತಿದ್ದ ಆದಿವಾಸಿಗಳ ಶಾಲೆ ’ಕನವು’, ಅಲ್ಲಿ ಆದಿವಾಸಿಗಳನ್ನು ಶೋಷಿಸುತ್ತಿರುವ ಕಾನೂನು ಜಾರಿ ಸಂಸ್ಥೆಗಳ ಬಗ್ಗೆ ಮಾತನಾಡಿದರು. ಮಿನಿ ಎಂ.ಆರ್, ಏಕ್ತಾರಾ ಮತ್ತು ಸುಧಿ ಎಸ್. ಆದಿವಾಸಿಗಳ ಹಾಡುಗಳನ್ನು ಹಾಡಿ ಕುಣಿದರು.

ಕಳೆದ ಸೆ.೧ರಂದು ನಿಧನರಾದ ಕೆ.ಜೆ.ಬೇಬಿ ಅವರ ಶೈಕ್ಷಣಿಕ ಪ್ರಯೋಗ ‘ಕನವು’ (ಕನಸು) ಚಲನಚಿತ್ರವನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು. ಬಳಿಕ ಅದರ ಕುರಿತು ಸಂವಾದ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X