ಶಂಕರನಾರಾಯಣ | ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಸಾಂದರ್ಭಿಕ ಚಿತ್ರ
ಶಂಕರನಾರಾಯಣ, ಡಿ.9: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.9ರಂದು ಬೆಳಗ್ಗೆ ಸಿದ್ಧಾಪುರ ಗ್ರಾಮದ ಮೇಲ್ಕಡ್ರಿ ಎಂಬಲ್ಲಿ ನಡೆದಿದೆ.
ಮೃತರನ್ನು ಮೇಲ್ಕಡ್ರಿಯ ರವೀಂದ್ರನಾಥ ಶೆಟ್ಟಿ(70) ಎಂದು ಗುರುತಿಸಲಾಗಿದೆ.
ಇವರು ಮನೆಯ ತೆಂಗಿನಮರದಿಂದ ತೆಂಗಿನ ಕಾಯಿ ಕೊಯ್ಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಆಯತಪ್ಪಿ ಕೆಳಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





