Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್‌ಐಆರ್ | ಉಡುಪಿ ಜಿಲ್ಲೆಯಲ್ಲಿ 97,673...

ಎಸ್‌ಐಆರ್ | ಉಡುಪಿ ಜಿಲ್ಲೆಯಲ್ಲಿ 97,673 ಮಂದಿಗೆ ನೋಟೀಸು ಜಾರಿ

► 18,371 ಮಂದಿಯ ವಿಚಾರಣೆ ಪೂರ್ಣ ► 65,749 ವಿಚಾರಣೆಗೆ ಬಾಕಿ

ವಾರ್ತಾಭಾರತಿವಾರ್ತಾಭಾರತಿ11 Sept 2026 9:02 PM IST
share
ಎಸ್‌ಐಆರ್ | ಉಡುಪಿ ಜಿಲ್ಲೆಯಲ್ಲಿ 97,673 ಮಂದಿಗೆ ನೋಟೀಸು ಜಾರಿ

ಉಡುಪಿ, ಸೆ.11: ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆದಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಐಆರ್)ಯಲ್ಲಿ ಮತದಾರರ ನೋಂದಣಿ ಹಾಗೂ ನೋಟೀಸುಗಳ ವಿಲೇವಾರಿಗೆ ಸಂಬಂಧಿಸಿದಂತೆ ಇದುವರೆಗೆ ಜಿಲ್ಲೆಯ 97,673 ಮಂದಿಗೆ ನೋಟೀಸುಗಳನ್ನು ಜಾರಿಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇವುಗಳಲ್ಲಿ 84,120 ನೋಟೀಸುಗಳನ್ನು ವಿತರಿಸುವ ಮೂಲಕ ಶೇ.86.12ರಷ್ಟು ಸಾಧನೆ ಮಾಡಲಾಗಿದೆ. ಇನ್ನು 13,553 ನೋಟೀಸುಗಳು ವಿತರಣೆಗೆ ಬಾಕಿ ಇವೆ. ವಿತರಿಸಲಾದ ನೋಟೀಸುಗಳಲ್ಲಿ 18,371 ಮಂದಿಯ ವಿಚಾರಣೆಗಳು ಪೂರ್ಣಗೊಂಡಿದ್ದು, 65,749 ನೋಟೀಸುಗಳ ವಿಚಾರಣೆ ಬಾಕಿ ಇವೆ ಎಂದು ಜಿಲ್ಲಾಧಿಕಾರಿಗಳ ಹೇಳಿಕೆ ವಿವರಿಸಿದೆ.

ವಿಚಾರಣೆ ನಡೆಸಲು ಅಕ್ಟೋಬರ್ 12 ಕೊನೆಯ ದಿನವಾಗಿದೆ. ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿಗೆ ಅಕ್ಟೋಬರ್ 22ಕೊನೆಯ ದಿನವಾಗಿದ್ದು, ಅಕ್ಟೋಬರ್ 27ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಗೊಳ್ಳಲಿದೆ. ಜಿಲ್ಲೆಯಲ್ಲಿ ಒಟ್ಟು 10,00,754 ಮತದಾರರಿದ್ದು, ಇವರಲ್ಲಿ 4,84,236 ಪುರುಷರು, 5,16,509 ಮಹಿಳೆಯರು, 9 ತೃತೀಯ ಲಿಂಗಿಗಳಿದ್ದಾರೆ. ಜಿಲ್ಲೆಯಾದ್ಯಂತ ಒಟ್ಟು 1,244 ಮತದಾನ ಕೇಂದ್ರಗಳಿವೆ.

44,841 ಅರ್ಜಿ ಸ್ವೀಕೃತ: ನಮೂನೆ 6, 6ಎ, 7 ಮತ್ತು 8ರಲ್ಲಿ ಒಟ್ಟು 44,841 ಅರ್ಜಿಗಳನ್ನು ಜಿಲ್ಲೆಯಲ್ಲಿ ಸ್ವೀಕರಿಸ ಲಾಗಿದೆ. ಇದರಲ್ಲಿ ನಮೂನೆ 6 (ಹೊಸ ಮತದಾರರ ಸೇರ್ಪಡೆ)ಗೆ 10,231 ಅರ್ಜಿಗಳು, ನಮೂನೆ 6ಎ (ಅನಿವಾಸಿ ಭಾರತೀಯರು)ಗೆ 321 ಅರ್ಜಿಗಳು, ನಮೂನೆ 7 (ಆಕ್ಷೇಪಣೆ ಹೆಸರು ತೆಗೆದು ಹಾಕುವುದು)ಗೆ 744 ಅರ್ಜಿಗಳು ಹಾಗೂ ನಮೂನೆ 8 (ವಿವಿಧ ತಿದ್ದುಪಡಿ/ಬದಲಿ ಕಾರ್ಡ್/ವಿಕಲಚೇತನರ ಗುರುತಿಸುವಿಕೆ)ಗೆ 33,545 ಅರ್ಜಿಗಳು ಸೇರಿವೆ.

ಅರ್ಹ ನಾಗರಿಕರೆಲ್ಲರೂ ಮತದಾರರ ಪಟ್ಟಿಗೆ ಸೇರ್ಪಡೆಯಾಗುವುದನ್ನು ಖಚಿತಪಡಿಸಿಕೊಳ್ಳಲು, ಜಿಲ್ಲೆಯ ಎಲ್ಲಾ ಮತದಾನ ಕೇಂದ್ರಗಳಲ್ಲಿ ಎರಡನೇ ಹಂತದ ವಿಶೇಷ ಅಭಿಯಾನವನ್ನು ಸೆ.19(ಶನಿವಾರ) ಮತ್ತು 20( ರವಿವಾರ) ದಂದು ಹಮ್ಮಿಕೊಳ್ಳಲಾಗಿದೆ. ಇದೇ ಅಕ್ಟೋಬರ್ 1ಕ್ಕೆ 18 ವರ್ಷ ಪೂರ್ಣ ಗೊಳ್ಳುವ ಎಲ್ಲಾ ಯುವಕ-ಯುವತಿಯರು ಇಲ್ಲಿ ಅರ್ಜಿ ಸಲ್ಲಿಸಬಹುದು.

ಎನ್‌ಆರ್‌ಐಗೆ ವಿಶೇಷ ರಿಯಾಯಿತಿ: ಹಿರಿಯ ನಾಗರಿಕರು, ವಿಕಲ ಚೇತನರು, ಅನಾರೋಗ್ಯಪೀಡಿತರು ಹಾಗೂ ಅನಿವಾಸಿ ಭಾರತೀಯರ (ಎನ್‌ಆರ್‌ಐ) ಪರವಾಗಿ ಅವರ ಕುಟುಂಬದ ಪ್ರೌಢ ಸದಸ್ಯರೊಬ್ಬರು ಸಂಬಂಧಪಟ್ಟ ಇಆರ್‌ಒ/ಎಇಆರ್‌ಒ ಕಚೇರಿಗೆ ಖುದ್ದಾಗಿ ಹಾಜರಾಗಿ ಅಗತ್ಯ ದಾಖಲೆಗಳು/ಮಾಹಿತಿಯನ್ನು ಸಲ್ಲಿಸಿ ನೋಟೀಸ್ ವಿಲೇವಾರಿ ಮಾಡಲು ಅವಕಾಶ ನೀಡಲಾಗಿದೆ.

ಮತದಾನ ಕೇಂದ್ರಗಳ ಪುನರಚನೆ ಹಾಗೂ ಸರಣಿ ಸಂಖ್ಯೆಗಳ ಬದಲಾವಣೆ ಯಿಂದಾಗಿ, ಕೆಲ ಮತದಾರರ ಭಾಗದ (ಪಾರ್ಟ್ ನಂಬರ್) ಅಥವಾ ಕ್ರಮ ಸಂಖ್ಯೆ (ಸೀರಿಯಲ್ ನಂಬರ್) ಬದಲಾಗಿರುವ ಸಾಧ್ಯತೆ ಇದ್ದು, ಹಳೆಯ ಭಾಗದ ಸಂಖ್ಯೆಯಲ್ಲಿ ಹೆಸರು ಸಿಗದ ಮತದಾರರು ತಮ್ಮ ಎಪಿಕ್ ಸಂಖ್ಯೆಯನ್ನು ಬಳಸಿ -voters.eci.gov.in- ವೆಬ್‌ಸೈಟ್ ಅಥವಾ ECINET ಮೊಬೈಲ್ ಆ್ಯಪ್ ಮೂಲಕ ತಮ್ಮ ಹೆಸರನ್ನು ಹುಡುಕಬಹುದು.

ಅರ್ಜಿಗಳನ್ನು ಆನ್‌ಲೈನ್ ಮೂಲಕವೂ ಸಲ್ಲಿಸಬಹುದು. ಇದಕ್ಕಾಗಿ ಮೇಲಿನ ವೆಬ್‌ಸೈಟ್ ಹಾಗೂ ಆ್ಯಪ್‌ಗಳನ್ನು ಬಳಸಿ ಅಗತ್ಯ ಸ್ವಯಂ- ದೃಢೀಕರಿಸಿದ ದಾಖಲೆಗಳೊಂದಿಗೆ (ವಯಸ್ಸು ಮತ್ತು ವಿಳಾಸದ ಪುರಾವೆ) ಅರ್ಜಿ ಸಲ್ಲಿಸಬಹುದು. ಅಥವಾ ಭರ್ತಿ ಮಾಡಿದ ನಮೂನೆ 6 ಮತ್ತು ಘೋಷಣಾ ಪತ್ರವನ್ನು ಅಗತ್ಯ ದಾಖಲೆಗಳೊಂದಿಗೆ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಅಥವಾ ಇಆರ್‌ಒ ಕಚೇರಿಗೆ ಸಲ್ಲಿಸಬಹುದು.

ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:1950 /1800 4255 1950ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Tags

SIRNoticesissuedUdupi district
share
ವಾರ್ತಾಭಾರತಿ
ವಾರ್ತಾಭಾರತಿ
Next Story
X