Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಡ ವರ್ತಕರನ್ನು ಜಿ.ಎಸ್.ಟಿ ಸಂಕಟದಿಂದ...

ಬಡ ವರ್ತಕರನ್ನು ಜಿ.ಎಸ್.ಟಿ ಸಂಕಟದಿಂದ ಪಾರು ಮಾಡಿದ ರಾಜ್ಯ ಸರಕಾರ: ಹರ್ಷ ವ್ಯಕ್ತಪಡಿಸಿದ ಕಾರ್ಕಳ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ24 July 2025 11:13 AM IST
share
ಬಡ ವರ್ತಕರನ್ನು ಜಿ.ಎಸ್.ಟಿ ಸಂಕಟದಿಂದ ಪಾರು ಮಾಡಿದ ರಾಜ್ಯ ಸರಕಾರ: ಹರ್ಷ ವ್ಯಕ್ತಪಡಿಸಿದ ಕಾರ್ಕಳ ಕಾಂಗ್ರೆಸ್

ಕಾರ್ಕಳ : ಅವೈಜ್ಙಾನಿಕ ನೋಟಿಸ್ ಜಾರಿಗೊಳಿಸಿದ ಕೇಂದ್ರ ಸರ್ಕಾರದ ತೆರಿಗೆ ಇಲಾಖೆಯ ಕ್ರಮದಿಂದ ಆತಂಕ ಹಾಗೂ ಗೊಂದಲಕ್ಕೊಳಗಾಗಿದ್ದ ರಾಜ್ಯದ ವರ್ತಕ ವಲಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ವಿಶೇಷ ಕಾಳಜಿಯಿಂದ ರಕ್ಷಿಸಿದ್ದಾರೆಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಹರ್ಷ ವ್ಯಕ್ತಪಡಿಸಿದ್ದಾರೆ.

ಟೀ ಅಂಗಡಿ, ಕಾಂಡಿಮೆಂಡ್ಸ್, ಬೇಕರಿ ಮುಂತಾದ ಸಣ್ಣಪುಟ್ಟ ವ್ಯಾಪಾರಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳು ಮೋದಿ ಸರ್ಕಾರದ ಡಿಜಿಟಲ್ ಇಂಡಿಯಾ ಯೋಜನೆಯಡಿ ಅಭಿವೃದ್ಧಿಗೊಂಡ ಯುಪಿಐ ಆ್ಯಪ್ ಮೂಲಕ ವ್ಯಾಪಾರ ವ್ಯವಹಾರ ನಡೆಸುತ್ತಿದ್ದು, ಇದನ್ನೇ ಮಾನದಂಡವಾಗಿಸಿದ ಕೇಂದ್ರ ಸರ್ಕಾರ ನಿಯಂತ್ರಿತ ತೆರಿಗೆ ಇಲಾಖೆಯು ವ್ಯಾಪಾರಿಗಳ ಮೇಲೆ ವಿಪರೀತ ಎನ್ನುವಷ್ಟು ತೆರಿಗೆ ಹಾಕಿ ನೋಟಿಸ್ ಜಾರಿಗೊಳಿಸಿದ್ದರಿಂದಾಗಿ ರಾಜ್ಯದ ವರ್ತಕ ವಲಯವು ಆತಂಕಕ್ಕೀಡಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಮಯೋಚಿತ ನಿರ್ಧಾರದಿಂದ ವ್ಯಾಪಾರಿ ವಲಯದ ಈ ಎಲ್ಲಾ ಆತಂಕವನ್ನು ದೂರಗೊಳಿಸಿದ್ದು, ಇದು ಸಿದ್ದರಾಮಯ್ಯನವರ ಆಡಳಿತ ಅನುಭವಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ ನಿಯಂತ್ರಿಯ ತೆರಿಗೆ ಇಲಾಖೆಯ ಅವೈಜ್ಞಾನಿಕ ತೆರಿಗೆ ಸಂಗ್ರಹದ ಕ್ರಮಗಳು ನಿತ್ಯ ಜನರನ್ನು ಶೋಷಣೆಗೊಳಪಡಿಸುತ್ತಿದೆ, ಅದರಲ್ಲಿ ಪ್ರಮುಖವಾಗಿ ವ್ಯಾಪಾರಸ್ಥರಿಗೆ ದಿನ ಒಂದಕ್ಕೆ 2000 ರೂಪಾಯಿಗಿಂತ ಹೆಚ್ಚುವರಿ ಹಣವು ಗೂಗಲ್ ಪೆ ಮೂಲಕ ಜಮಾವಣೆಯಾದರೆ ಅದರಿಂದ ಶೇಕಡಾ 1.8 ರಷ್ಟು ಹಣವನ್ನು GST ಪಾವತಿಸಬೇಕಾಗಿದೆ.

ಕಷ್ಟಕಾಲದಲ್ಲಿ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಜನರು ತಮ್ಮ ಕುಟುಂಬ ಸದಸ್ಯರಿಗೆ ಅರೋಗ್ಯ ವಿಮೆ ಹಾಗು ಜೀವ ವಿಮೆ ಮಾಡಿಸಿಕೊಂಡರೆ ಅಲ್ಲಿಯೂ ತೆರಿಗೆ ಇಲಾಖೆ ಶೇಕಡಾ 18 ರಷ್ಟು GST ಬರೆ ಹಾಕಿ ಜನರನ್ನು ಶೋಷಿಸುತ್ತಿದೆ. ತಮ್ಮ ಕಷ್ಟಕ್ಕೆ ಸಹಾಯವಾಗಲಿ ಎಂದು ಆರೋಗ್ಯ ವಿಮೆ ಮಾಡಿಸುವ ಜನರಿಗೆ ತೆರಿಗೆ ಇಲಾಖೆ ಕಷ್ಟಕೊಡುವುದು ಅಮಾನವೀಯ ಕ್ರಮ, ಇದರಿಂದ ಜನಸಾಮಾನ್ಯರು ತೊಂದರೆ ಪಡುವಂತಾಗಿದೆ. ತಮ್ಮ ಕಷ್ಟ ಕಾಲಕ್ಕೆ ಸಹಾಯ ಆಗಲಿ ಎಂದು ಅರೋಗ್ಯ ವಿಮೆ, ಜೀವ ವಿಮೆ ಜನಸಾಮಾನ್ಯರು ವಿಮೆಗಳನ್ನು ಮಾಡುತ್ತಾರೆ, ಆದರೆ ಶೇಕಡಾ 18 ರಷ್ಟು ಹಣ ಹೆಚ್ಚುವರಿಯಾಗಿ GST ಮುಖಾಂತರ ಯಾಕೆ ಕಟ್ಟಬೇಕು? ವಿಮೆಯನ್ನು ಕ್ಲೈಮು ಮಾಡುವ ಸಂದರ್ಭದಲ್ಲಿಯೂ ಪುನಃ ಅದೇ GST ತೆರಿಗೆ ಹಾಕಿ ಅದರಲ್ಲೂ ಹಣ ವಸೂಲಿ ಮಾಡುವ ಕ್ರಮ ಎಷ್ಟು ಸರಿ? ನಾವು ಬ್ಯಾಂಕ್ ನಲ್ಲಿ ನಮ್ಮ ತೆಗೆಯಲು GST, ನಮ್ಮ ಖಾತೆಗೆ ಹಣ ಹಾಕಲು GST ಇದು ಯಾವ ನ್ಯಾಯ. ನಾವು ದುಡಿದ ಹಣದ ಮೇಲೂ GST ಹಾಕಿ ನಮ್ಮನ್ನು ಪುನಃ ಮೋಸ ಗೊಳಿಸುತ್ತಾರೆ. ಹೋಟೆಲುಗಳಲ್ಲಿ ಆಹಾರ ತಯಾರಿಸಲು ಬಳಸುವ ಪ್ರತಿಯೊಂದು ಆಹಾರ ಸಾಮಗ್ರಿಗಳ ಮೇಲೆಯೂ GST ಭರಿಸಿಯೇ ಹೊಟೇಲ್ ಮಾಲೀಕರು ಖರೀದಿ ಮಾಡುತ್ತಾರೆ, ಹೊಟೇಲಿಗೆ ತಂದು ಅದನ್ನು ಬೇಯಿಸಿ ಗ್ರಾಹಕರಿಗೆ ಬಡಿಸುವಾಗ ಮತ್ತೆ ಗ್ರಾಹಕರ ಮೇಲೆ GST ಹಾಕಲಾಗುತ್ತಿದೆ...! ಇದು ಯಾವ ನ್ಯಾಯ..? ಎಂದು ಪ್ರಶ್ನಿಸಿದ್ದಾರೆ.

ಆಸ್ಪತ್ರೆ ಯಲ್ಲಿ ರೋಗಿಗೆ ನೀಡುವ ಪ್ರತಿಯೊಂದು ಮೆಡಿಸಿನ್ ಮೇಲೆ GST ಹಾಕಿ ಡಿಸ್ಚಾರ್ಜ್ ಆದ ಮೇಲೆ ಬಿಲ್ಲಿನ ಮೇಲೆ ಕೂಡಾ GST ಬರೆ ಹಾಕುತ್ತಿರುವುದು ಅತ್ಯಂತ ಅಮಾನವೀಯವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ ಜನರ ಮೇಲೆ ವಿಧಿಸುತ್ತಿರುವ ಅಮಾನುಷ ತೆರಿಗೆಯನ್ನು ಪುನಃ ಪರಿಷ್ಕರಿಸಬೇಕಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ತಮ್ಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Tags

GSTKarkalaCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X