Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಾಂತಿ ಕಾಪಾಡಬೇಕಾದ ಪ್ರಧಾನಿಯಿಂದ...

ಶಾಂತಿ ಕಾಪಾಡಬೇಕಾದ ಪ್ರಧಾನಿಯಿಂದ ಜನಾಂಗೀಯ ದ್ವೇಷದ ಹೇಳಿಕೆ ಅಪಾಯಕಾರಿ: ವೀರಪ್ಪ ಮೊಯ್ಲಿ

ವಾರ್ತಾಭಾರತಿವಾರ್ತಾಭಾರತಿ22 April 2024 1:34 PM IST
share
ಶಾಂತಿ ಕಾಪಾಡಬೇಕಾದ ಪ್ರಧಾನಿಯಿಂದ ಜನಾಂಗೀಯ ದ್ವೇಷದ ಹೇಳಿಕೆ ಅಪಾಯಕಾರಿ: ವೀರಪ್ಪ ಮೊಯ್ಲಿ

ಉಡುಪಿ, ಎ.22: ಭಾರತದಲ್ಲಿ 20 ಕೋಟಿ ಜನಸಂಖ್ಯೆ ಇರುವ ಮುಸ್ಲಿಮ್ ಜನಾಂಗದ ವಿರುದ್ಧ ದೇಶದ ಪ್ರಧಾನಿ ನರೇಂದ್ರ ಮೋದಿ ದ್ವೇಷದ ಜ್ವಾಲೆಯನ್ನೇ ಹರಿದುಬಿಟ್ಟಿದ್ದಾರೆ. ದೇಶದ ಶಾಂತಿ ನೆಮ್ಮದಿ ಕಾಪಾಡಬೇಕಾದ ಒಬ್ಬ ಪ್ರಧಾನಿ, ಜನಾಂಗ ದ್ವೇಷ ಹರಡುವ ಕೆಲಸ ಮಾಡುತ್ತಿರುವುದು ಅಪಾಯಕಾರಿ. ಸರ್ವಾಧಿಕಾರ ಆಡಳಿತದಲ್ಲಿ ಮಾತ್ರ ಇಂತಹ ಹೇಳಿಕೆ ಬರಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಕಾಂಗ್ರೆಸ್ ಭವನದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಾಂಗೀಯ ದ್ವೇಷದಿಂದ ಆ ವ್ಯಕ್ತಿಗಳು ಹಾಗೂ ಇಡೀ ದೇಶವೇ ನಾಶವಾಗುತ್ತದೆ. ನರೇಂದ್ರ ಮೋದಿಯ ಈ ನಡೆ ದೇಶಕ್ಕೆ ಒಳ್ಳೆಯದಲ್ಲ. 2014ರಲ್ಲಿ ಡಾ.ಮನಮೋಹನ್ ಸಿಂಗ್ ಸರಕಾರದ ವಿರುದ್ಧ ಆರೋಪ ಮಾಡಿ, 2019ರಲ್ಲಿ ದೇಶಭಕ್ತಿ ಭಾವನೆ ಪ್ರಚೋದಿಸಿ ಸರ್ಜಿಕಲ್ ಸ್ಟ್ರೈಕ್ ಹೆಸರಿನಲ್ಲಿ ಇವರು ಅಧಿಕಾರಕ್ಕೆ ಬಂದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಅಂತಹ ಯಾವುದೇ ಗಿಮಿಕ್ ನಡೆಯುವುದಿಲ್ಲ. ಅದಕ್ಕಾಗಿ ಹತಾಶ ಭಾವನೆಯಿಂದ ಬಾಯಿಗೆಬಂದ ಹೇಳಿಕೆಗಳನ್ನು ಮೋದಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ದೇಶದ ಜನತೆಯಲ್ಲಿ ಪ್ರಜಾಪ್ರಭುತ್ವದ ಬಗ್ಗೆ ಹತಾಶ ಭಾವನೆ ಮೂಡುತ್ತಿದೆ. ಇದರ ಪರಿಣಾಮ ನಾಗಲ್ಯಾಂಡ್ನಲ್ಲಿ ನಾಲ್ಕು ಲಕ್ಷ ಮಂದಿ ಚುನಾವಣಾ ಬಹಿಷ್ಕಾರ ಮಾಡಿದರು. ಜನತೆಯ ಹೃದಯದಲ್ಲಿ ಒಂದು ರೀತಿಯ ಲಾವರಸದ ಒಳ ಹರಿಯುತ್ತಿದೆ. ಆ ಲಾವರಸ ಈ ಬಾರಿಯ ಚುನಾವಣೆಯಲ್ಲಿ ಜ್ವಾಲಮುಖಿಯಾಗಿ ಸ್ಫೋಟಗೊಳ್ಳಲಿದೆ ಎಂದು ಮೊಯ್ಲಿ ಹೇಳಿದರು.

ಈ ಬಾರಿಯ ಲೋಕಸಭಾ ಚುನಾವಣೆ ನಡೆಸಲು 60 ದಿನಗಳನ್ನು ತೆಗೆದುಕೊಂಡ ಇವರು, ಇನ್ನು ಒಂದು ದೇಶ ಒಂದು ಚುನಾವಣೆ ಮಾಡಲು ಒಂದು ವರ್ಷವೇ ಬೇಕಾದೀತು. ಈ ಎಲ್ಲ ಗೊಂದಲಗಳಿಂದ ಕೂಡಿರುವ ಈ ಕಲ್ಪನೆ ಅನುಷ್ಠಾನಗೊಳಿಸುವುದು ಅಷ್ಟು ಸುಲಭ ಅಲ್ಲ. ಅದಕ್ಕಾಗಿ ಸಂವಿಧಾನ ತಿದ್ದುಪಡಿ ಮತ್ತು ಸಾಕಷ್ಟು ಆಡಳಿತದಲ್ಲಿ ಸುಧಾರಣೆ ಆಗಬೇಕಾಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.

ಇಂದು ಪ್ರಜಾಪ್ರಭುತ್ವದ ಧ್ವನಿ ಕ್ಷೀಣ ಆಗುತ್ತಿದೆ. ಈ ದೇಶಕ್ಕೆ ದಕ್ಷತೆಯಿಂದ ಕೆಲಸ ಮಾಡುವ ಉತ್ತಮ ಆಡಳಿತಗಾರ ಬೇಕೇ ಹೊರತು ಕಮಿಂಟಿಯೇಟರ್ ಅಲ್ಲ. ಮೋದಿ ಈಗ ಎನ್ ಡಿಎ, ಬಿಜೆಪಿ ಬಿಟ್ಟು 'ಮೋದಿ ಗ್ಯಾರಂಟಿ' ಎಂದು ಹೇಳಿಕೊಂಡು ಬರುತ್ತಿದ್ದಾರೆ. ಆದರೆ ಈ ಬಗ್ಗೆ ಈಗಾಗಲೇ ಜನ ಎಚ್ಚೆತ್ತುಕೊಂಡಿದ್ದಾರೆ. ಇವರು 400 ಅಲ್ಲ 150ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯುವುದಿಲ್ಲ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್, ನಟ ಶಿವರಾಜ್ ಕುಮಾರ್, ಮುಖಂಡರಾದ ವಿನಯ ಕುಮಾರ್ ಸೊರಕೆ, ಗೋಪಾಲ ಪೂಜಾರಿ, ಅಶೋಕ್ ಕುಮಾರ್ ಕೊಡವೂರು, ಎಂ.ಎ. ಗಫೂರ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಡಿ.ಆರ್.ರಾಜು, ಭಾಸ್ಕ ರಾವ್ ಕಿದಿಯೂರು, ನವೀನ್ ಶೆಟ್ಟಿ ಉಪಸ್ಥಿತರಿದ್ದರು.

‘ಮುಖ್ಯಮಂತ್ರಿ ಅವಕಾಶವನ್ನು ನಿರಾಕರಿಸಿದ್ದ ನಟ ರಾಜಕುಮಾರ್’

‘ಅಂದು ಆಂಧ್ರ ಪ್ರದೇಶದಲ್ಲಿ ಎನ್.ಟಿ.ರಾಮ ರಾವ್, ತಮಿಳುನಾಡಿನಲ್ಲಿ ಎಂಜಿಆರ್ ರಾಜಕೀಯಕ್ಕೆ ಬಂದಿದ್ದರು. ಅದೇ ರೀತಿ ಕರ್ನಾಟಕದಲ್ಲೂ ಡಾ.ರಾಜಕುಮಾರ್ ರಾಜಕೀಯಕ್ಕೆ ಬಂದು ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತುಗಳಿದ್ದವು. ಅದಕ್ಕಾಗಿ ನಾವು ಡಾ.ರಾಜಕುಮಾರ್ ಹಾಗೂ ಪಾವರ್ತಮ್ಮರನ್ನು ದಿಲ್ಲಿಗೆ ಕರೆದುಕೊಂಡು ಹೋಗಿ ಇಂದಿರಾ ಗಾಂಧಿ ಅವರನ್ನು ಭೇಟಿ ಮಾಡಿಸಿದ್ದೇವು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಶಿವರಾಜ್ ಕುಮಾರ್ ಉಪಸ್ಥಿತಿಯಲ್ಲಿ ಈ ಹಳೆಯ ನೆನಪನ್ನು ಸ್ಮರಿಸಿದರು.

‘ಆದರೆ ಡಾ.ರಾಜಕುಮಾರ್ ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳಿ ಈ ಅವಕಾಶವನ್ನು ನಯವಾಗಿ ನಿರಾಕರಿಸಿದರು. ಒಂದು ವೇಳೆ ರಾಜಕುಮಾರ್ ಅವತ್ತು ರಾಜಕೀಯಕ್ಕೆ ಬರುತ್ತಿದ್ದರೆ ಇಂದಿಗೂ ಕರ್ನಾಟಕದ ರಾಜಕೀಯದಲ್ಲಿ ರಾರಾಜಿಸುತ್ತಿರುತ್ತಿದ್ದರು. ಬಳಿಕ ರಾಜ್ಯಸಭಾ ಸದಸ್ಯತ್ವ ಸ್ವೀಕರಿಸುವಂತೆ ಇಂದಿರಾ ಗಾಂಧಿ ಕೇಳಿಕೊಂಡರು. ಅದನ್ನು ಕೂಡ ನಯವಾಗಿ ತಿರಸ್ಕರಿಸಿದ ತ್ಯಾಗಜೀವಿ ಡಾ.ರಾಜಕುಮಾರ್ ಎಂದು ಮೊಯ್ಲಿ ಹೇಳಿದರು.

‘ಅಪ್ಪಾಜಿಗೆ ವೈಯಕ್ತಿಕವಾಗಿ ರಾಜಕೀಯ ಇಷ್ಟ ಇರಲಿಲ್ಲವೇ ಹೊರತು ಆಸಕ್ತಿ ಇದ್ದವರಿಗೆ ರಾಜಕೀಯಕ್ಕೆ ಹೋಗಲೇ ಬೇಡ ಎಂದವರಲ್ಲ. ಅವರಿಗೆ ರಾಜಕೀಯ ಇಷ್ಟ ಇಲ್ಲದಿದ್ದರೆ ಯಾಕೆ ಓಟು ಹಾಕುತ್ತಿದ್ದರು. ಅದೇರೀತಿ ಅವರಿಗೆ ರಾಜಕೀಯ ಹಿನ್ನೆಲೆಯೇ ಬೇಡದಿದ್ದರೆ ರಾಜಕೀಯ ಧುರೀಣ ಬಂಗಾರಪ್ಪರ ಮನೆಯಿಂದ ಹೆಣ್ಣು ಯಾಕೆ ತರಬೇಕಿತ್ತು?’

-ಶಿವರಾಜ್ ಕುಮಾರ್, ನಟ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X