Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ-ಬೈಂದೂರು ರಾಷ್ಟ್ರೀಯ...

ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀಡಾಡಿ ಜಾನುವಾರು!

► ಸುಗಮ ಸಂಚಾರಕ್ಕೆ ಅಡ್ಡಿ ► ಅಪಘಾತಕ್ಕೀಡಾಗುವ ಭೀತಿ

ವಾರ್ತಾಭಾರತಿವಾರ್ತಾಭಾರತಿ30 July 2023 6:37 PM IST
share
ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀಡಾಡಿ ಜಾನುವಾರು!

ಕುಂದಾಪುರ, ಜು.30: ಒಂದೆಡೆ ಮಳೆಗಾಲದಲ್ಲಿ ಅಲ್ಲಲ್ಲಿ ಬಿದ್ದ ಹೊಂಡಗಳು, ಮತ್ತೊಂದೆಡೆ ಅವೈಜ್ಞಾನಿಕ ತಿರುವುಗಳು, ಈ ಮಧ್ಯೆ ಹೆದ್ದಾರಿಯಲ್ಲಿ ಮಲಗುವ, ಆಸುಪಾಸಿನಲ್ಲಿ ಓಡಾಡುವ ಬೀಡಾಡಿ ಜಾನುವಾರುಗಳು ವಾಹನ ಸವಾರರ ಸಂಚಾರಕ್ಕೆ ಸಂಚಕಾರ ತಂದೊಡ್ಡುತ್ತಿದೆ. ಕುಂದಾಪುರದಿಂದ ಬೈಂದೂರು ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಈ ಎಲ್ಲ ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ.

ಚತುಷ್ಪಥ ಹೆದ್ದಾರಿ ಮೂಲಕ ಸುಗಮ ವಾಹನ ಓಡಾಟ ವ್ಯವಸ್ಥೆ ಕಲ್ಪಿಸ ಬೇಕೆಂಬ ನಿಟ್ಟಿನಲ್ಲಿ ಪ್ರಾರಂಭಗೊಂಡ ಕಾಮಗಾರಿ ಆರಂಭದ ದಿನದಿಂದಲೂ ಕುಂಟುತ್ತಾ ಸಾಗಿಬಂದಿತ್ತು. ಅಲ್ಲದೆ ಅವೈಜ್ಞಾನಿಕ ಕಾಮಗಾರಿಗಳಿಂದ ಜನರ ಕೆಂಗಣ್ಣಿಗೆ ಗುರಿಯಾಗಿ ಪ್ರತಿಭಟನೆಗಳು ಕೂಡ ನಡೆದಿದ್ದವು. ಇದೀಗ ರಾಷ್ಟ್ರೀಯ ಹೆದ್ದಾರಿಯ ಬೈಂದೂರು-ಕುಂದಾಪುರ ನಡುವೆ ಡಿವೈಡರ್ ಮೇಲೆ ಜಾನುವಾರು ಗಳ ಓಡಾಟ ಹೆಚ್ಚಾಗುತ್ತಿದೆ. ಮಾತ್ರವಲ್ಲದೆ ಈ ಮಾರ್ಗದ ಹಲವೆಡೆ ಹೆದ್ದಾರಿ ಮಧ್ಯೆಯೇ ಬೀಡಾಡಿ ಗೋವುಗಳು ಮಲಗಿ ವಾಹನ ಸವಾರರಿಗೆ ಸಮಸ್ಯೆ ಉಂಟು ಮಾಡುತ್ತಿದೆ.

ಬೈಂದೂರು ಮಾರ್ಗದ ತ್ರಾಸಿ ತರುವಾಯ ನಾವುಂದದಿಂದ ಬಹುತೇಕ ಶಿರೂರು ತನಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀಡಾಡಿ ಜಾನುವಾರುಗಳು ಎಲ್ಲೆಂದರಲ್ಲಿ ಸುಗಮ ವಾಹನ ಸಂಚಾರಕ್ಕೆ ಅಡ್ಡಿಮಾಡುತ್ತಿದೆ. ಇದರಿಂದ ದ್ವಿಚಕ್ರ ವಾಹನ ಹಾಗೂ ಕಾರು ಮೊದಲಾದ ಲಘು ವಾಹನ ಸವಾರಿಗರಿಗೆ ಬಹಳಷ್ಟು ಸಮಸ್ಯೆಯಾದರೆ, ಘನ ವಾಹನಗಳಾದ ಲಾರಿ, ಬಸ್ಸು ಮೊದಲಾದ ವಾಹನಡಿಗೆ ಸಿಕ್ಕು ಜಾನುವಾರುಗಳು ಸಾವು-ನೋವು ಅನುಭವಿಸಿದ ಉದಾಹರಣೆಗಳಿವೆ.

ಶಿರೂರು ಟೋಲ್‌ನಲ್ಲಿ ನಡೆದ ದುರಂತ

ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಿಂದ ರೋಗಿಯನ್ನು ಹಾಗೂ ಅವರ ಕುಟುಂಬಿಕರನ್ನು ಸಾಗಿಸುತ್ತಿದ್ದ ಖಾಸಗಿ ಆಸ್ಪತ್ರೆಯ ಅಂಬುಲೈನ್ಸ್ ಚಾಲಕನ ನಿಯಂತ್ರಣ ತಪ್ಪಿ ಶಿರೂರು ಟೋಲ್ ಫ್ಲಾಜಾ ಬಳಿ ಪಲ್ಟಿಯಾಗಿತ್ತು.

ಈ ದುರ್ಘಟನೆಯಲ್ಲಿ ಉ.ಕ ಜಿಲ್ಲೆಯ ಹೊನ್ನಾವರ ಮೂಲದ ನಾಲ್ವರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದರು. ಟೋಲ್ ಕೇಂದ್ರದ ವಾಹನ ಸಂಚಾರ ಮಾರ್ಗದಲ್ಲಿ ಜಾನುವಾರುಗಳು ಮಲಗಿದ್ದು, ಅದನ್ನು ಸಿಬ್ಬಂದಿ ಬದಿಗೆ ಕಳಿಸಿ ಬ್ಯಾರಿಕೇಡ್ ತೆಗೆಯಲು ಹೋದಾಗ ನಿಯಂತ್ರಣ ಕಳೆದುಕೊಂಡ ಅಂಬುಲೆನ್ಸ್ ಪಲ್ಟಿಯಾಗಿದ್ದು ಸಿಸಿಟಿವಿ ದೃಶ್ಯದಲ್ಲಿ ಕಂಡುಬಂದಿತ್ತು.

"ಕುಂದಾಪುರ-ಬೈಂದೂರಿನ ರಾಷ್ಟ್ರೀಯ ಹೆದ್ದಾರಿ ನಡುವೆ ಹಲವೆಡೆ ಜಾನುವಾರುಗಳು ಮಲಗುವ ಕಾರಣ ಸುಗಮ ಸಂಚಾರಕ್ಕೆ ಅಡಚಣೆ ಯಾಗುತ್ತಿದ್ದು, ಸಾವು -ನೋವಿಗೂ ಕಾರಣವಾಗುತ್ತಿದೆ. ಬೀಡಾಡಿ ಗೋವುಗಳಿಗೆ ಸೂಕ್ತ ನೆಲೆ ಕಲ್ಪಿಸುವ ಕಾರ್ಯಕ್ಕೆ ಸಂಬಂಧಪಟ್ಟವರು ಮುಂದಾಗ ಬೇಕು. ಈ ಹಿಂದೆ ಆಶ್ವಾಸನೆ ನೀಡಿದಂತೆ ಗೋಶಾಲೆ ನಿರ್ಮಾಣವಾಗಬೇಕು. ಬೀಡಾಡಿ ಗೋವುಗಳಿಂದ ಎಷ್ಟೋ ಕೃಷಿ ಭೂಮಿ ಹಾಳಾಗುತ್ತಿದೆ. ರಾತ್ರಿಯ ಸಮಯದಲ್ಲಿ ವಾಹನ, ಬೈಕ್ ಹಾಗೂ ವಾಹನ ಸವಾರರಿಗೆ ತೊಂದರೆ ಆಗದಂತೆ ಕ್ರಮವಹಿಸ ಬೇಕು".

-ಸುಬ್ರಹ್ಮಣ್ಯ ಬಿಜೂರು, ಸಾಮಾಜಿಕ ಕಾರ್ಯಕರ್ತರು



share
ವಾರ್ತಾಭಾರತಿ
ವಾರ್ತಾಭಾರತಿ
Next Story
X