Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಮ ಮಂದಿರದಲ್ಲಿ ಘೋರ ಅಪಚಾರ...

ರಾಮ ಮಂದಿರದಲ್ಲಿ ಘೋರ ಅಪಚಾರ ನಡೆಯಬಾರದಿತ್ತು: ಪೇಜಾವರ ಶ್ರೀ

ವಾರ್ತಾಭಾರತಿವಾರ್ತಾಭಾರತಿ26 Jun 2026 8:39 PM IST
share
ರಾಮ ಮಂದಿರದಲ್ಲಿ ಘೋರ ಅಪಚಾರ ನಡೆಯಬಾರದಿತ್ತು: ಪೇಜಾವರ ಶ್ರೀ

ಉಡುಪಿ, ಜೂ.27: ದೇಶ ವಿದೇಶದ ಸಮಸ್ತ ಶ್ರದ್ದಾಳುಗಳ ಕೇಂದ್ರವಾಗಿ ರುವ ರಾಮ ಮಂದಿರದಲ್ಲಿ ಅವ್ಯವಹಾರ ದಂತಹ ಘೋರ ಅಪಚಾರ ನಡೆಯಬಾರದಿತ್ತು. ನಡೆದದ್ದು ಸತ್ಯವಾದರೆ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು. ರಾಜ್ಯ ಸರಕಾರದ ಮೇಲೆ ವಿಶ್ವಾಸ ಇದೆ. ಸರಿಯಾಗಿ ತನಿಖೆ ನಡೆಯುವ ವಿಶ್ವಾಸ ಇದೆ. ಆ ಮೂಲಕ ಸತ್ಯಾಸತ್ಯತೆ ಶೀಘ್ರವಾಗಿ ಹೊರಬರಬೇಕು ಎಂದು ರಾಮಮಂದಿರ ವಿಶ್ವಸ್ಥಮಂಡಳಿ ಟ್ರಸ್ಟ್ ಸದಸ್ಯರಾದ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ನಾನು ಹೋದಾಗಲೆಲ್ಲ ಕೆಲವು ಸಲಹೆ ನೀಡುತ್ತಿದ್ದೇನೆ. ಸಭೆಗಳಲ್ಲೂ ಕೂಡ ಪ್ರಸ್ತಾಪ ಮಾಡುತ್ತಿರುತ್ತೇನೆ. ಎಲ್ಲವನ್ನು ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ದರು. ನಾನು ಅಲ್ಲೇ ನಿಲ್ಲಲು ಸಾಧ್ಯವಿಲ್ಲ ಹೋದಾಗ ಪರಿಶೀಲಿಸಿ ಸಲಹೆ ನೀಡಿ ಬರುತ್ತಿದ್ದೇನೆ. ನಾನು ವಿಶ್ವಸ್ಥ ಮಂಡಳಿ ಸದಸ್ಯನಾಗಿ ಅವರ ಮೇಲೆ ವಿಶ್ವಾಸ ಇಟ್ಟು ಸಲಹೆ ಕೊಡುತ್ತ ಬರುತ್ತಿದ್ದೇನೆ. ವಿಶ್ವಸ್ಥ ಮಂಡಳಿ ಆಗಿರುವುದರಿಂದ ಸಂಬಂಧಪಟ್ಟವರು ವಿಶ್ವಾಸಾರ್ಹ ವ್ಯಕ್ತಿಗಳಾಗಿರಬೇಕಿತ್ತು ಎಂದು ಅವರು ತಿಳಿಸಿದರು.

200 ಕೆ.ಜಿ ಬೆಳ್ಳಿ ನೀಡಿದರೂ ರಶೀದಿ ನೀಡಿಲ್ಲ ಎಂಬ ಸಿಂಧಿ ಸಮುದಾಯದ ಗಂಭೀರ ಆರೋಪಕ್ಕೆ ಪ್ರತಿಕ್ರಿಯಿಸಿದ ಸ್ವಾಮೀಜಿ, ದೊಡ್ಡ ಮಟ್ಟದ ದೇಣಿಗೆ ನೀಡಿದವರು, ಅಲ್ಲಿಯೇ ರಶೀದಿ ತೆಗೆದುಕೊಳ್ಳಬೇಕು. ದೇಣಿಗೆ ನೀಡುವವರು ಮತ್ತು ಪಡೆದವರು ಇಬ್ಬರಿಗೂ ಆ ಬಗ್ಗೆ ಜವಾಬ್ದಾರಿ ಇದೆ. ದೇಣಿಗೆ ತೆಗೆದುಕೊಂಡವರಿಗೆ ದೊಡ್ಡ ಜವಾಬ್ದಾರಿ ಇದೆ. ರಶೀದಿ ಕೊಟ್ಟಿಲ್ಲವಾದರೆ ಅದು ದೊಡ್ಡ ತಪ್ಪು. ಕೇವಲ ಬಾಯಿ ಮಾತಿನ ಹೇಳಿಕೆಗಳಾಗಿ ಉಳಿಯಬಾರದು. ಅವರು ಆರೋಪ ಮಾಡಿದ್ದರೆ ವಾಸ್ತವ ಇರಬಹುದು. ಆದರೆ ರಶೀದಿ ಕೊಟ್ಟಿಲ್ಲ ಎಂಬ ಮಾತು ನಂಬಲು ಆಗಲ್ಲ ಎಂದು ತಿಳಿಸಿದರು.

ಚಂಪತ್ ರಾಯ್ ರಾಜೀನಾಮೆ ವಿಚಾರದ ಕುರಿತ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ, ವಾಟ್ಸಾಪ್ ಗ್ರೂಪಿನಲ್ಲಿ ಅವರು ಯಾವುದೇ ಆ ರೀತಿಯ ಸಂದೇಶ ಕಳುಹಿಸಿಲ್ಲ. ಟ್ರಸ್ಟನ ವಾಟ್ಸಾಪ್ ಗ್ರೂಪಿನಲ್ಲಿ ಕೂಡ ಮಾಹಿತಿ ಬಂದಿಲ್ಲ. ಅವರ ನಂಬರ್‌ನಿಂದಲೂ ನನಗೆ ನೇರವಾಗಿ ಸಂದೇಶ ಬಂದಿಲ್ಲ. ಈ ರೀತಿಯ ವಿಷಯಗಳಿದ್ದಾಗ ಅವರು ಮೆಸೇಜ್ ಮಾಡುತ್ತಿದ್ದರು. ಅಲ್ಲಿ ಏನು ಬೆಳವಣಿಗೆ ಆಗಿದೆ ಎಂಬುದು ನನಗೆ ಗೊತ್ತಿಲ್ಲ ಎಂದರು.

ಆರೆಸೆಸ್ ನೊಂದಾಣಿ ಬಗ್ಗೆ ಸ್ವಾಮೀಜಿ ಪ್ರಕ್ರಿಯೆ

ಆರ್‌ಎಸ್‌ಎಸ್ ನೊಂದಣಿ ಪ್ರಿಯಾಂಕ ಖರ್ಗೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಸಂಘಟನೆ ಯನ್ನು ನೋಂದಣಿ ಮಾಡಿದರೆ ಯಾರಿಗೂ ಆ ಬಗ್ಗೆ ಮಾತನಾಡಲು ಅವಕಾಶ ಇರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ನಾವು ಮಂದಿರಕ್ಕೆ ಹಣ ಹಾಕುವುದರ ಬದಲು ಬಡವರಿಗೆ ಮನೆ ಕಟ್ಟಿಸಿ ಕೊಡಿ ಎಂದು ಕರೆ ನೀಡಿದ್ದೆವು. ರಾಮ ದೇವರ ಸೇವೆಯನ್ನು ಬಡವರಿಗೆ ಮನೆ ಕಟ್ಟಿ ಮಾಡಿಕೊಡಬಹುದು. ಅವಕಾಶ ವಂಚಿತರಿಗೆ ದೀನ ದಲಿತರಿಗೆ ಮನೆ ಕಟ್ಟಿಸಿ ಕೊಡಬಹುದು. ನಮ್ಮ ಉದ್ಯೋಗದ ಜೊತೆ ಸಮಾಜ ಸೇವೆ ಮಾಡಲು ಅನೇಕ ಅವಕಾಶಗಳಿವೆ ಆ ಮೂಲಕ ರಾಮಸೇವೆ ಮಾಡಬಹುದು ಎಂದು ಅವರು ಹೇಳಿದರು.

ಒಳ್ಳೆಯ ಕೆಲಸ ಮಾಡಿ ದೇವರಿಗೆ ಸಮರ್ಪಿಸಬಹುದು. ದುಃಖಿತರಿಗೆ ಸಹಾಯ ಮಾಡುವುದೇ ನಿಜವಾದ ರಾಮ ಸೇವೆ. ಉಡುಪಿಯ ಪರಿಸರದಲ್ಲಿ ಈ ರಾಮ ಸೇವೆ ಆಗುತ್ತಿದೆ. ನೂರು ಕೆಜಿ ಬೆಳ್ಳಿ ಕೊಡುವುದರ ಬದಲು 1000 ಮನೆ ನಿರ್ಮಾಣ ಮಾಡುವ ಮೂಲಕ ರಾಮ ದೇವರ ಸೇವೆ ಮಾಡಬಹುದಿತ್ತು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X