Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅ.27ರಂದು ಉಡುಪಿ ಜಿಲ್ಲಾ ಮತದಾರರ...

ಅ.27ರಂದು ಉಡುಪಿ ಜಿಲ್ಲಾ ಮತದಾರರ ಪರಿಷ್ಕೃತ ಕರಡು ಪಟ್ಟಿ ಪ್ರಕಟ: ಡಿಸಿ ಡಾ. ವಿದ್ಯಾಕುಮಾರಿ

ಜಿಲ್ಲೆಯಲ್ಲಿ 10.37 ಲಕ್ಷ ಮತದಾರರು

ವಾರ್ತಾಭಾರತಿವಾರ್ತಾಭಾರತಿ26 Oct 2023 8:17 PM IST
share
ಅ.27ರಂದು ಉಡುಪಿ ಜಿಲ್ಲಾ ಮತದಾರರ ಪರಿಷ್ಕೃತ ಕರಡು ಪಟ್ಟಿ ಪ್ರಕಟ: ಡಿಸಿ ಡಾ. ವಿದ್ಯಾಕುಮಾರಿ

ಉಡುಪಿ, ಅ.26: ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆದಿದ್ದು, ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಅ.27ರಂದು ಪ್ರಕಟಿಸಲಾಗುವುದು. ನಾಳೆಯೇ ಜಿಲ್ಲೆಯ ಪ್ರಮುಖ ರಾಜಕೀಯ ಪಕ್ಷಗಳಿಗೆ ಕರಡು ಪಟ್ಟಿಯ ಪ್ರತಿಯನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ. ತಿಳಿಸಿದ್ದಾರೆ.

ಮಣಿಪಾಲದ ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಠಿ ಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಉಡುಪಿ ಜಿಲ್ಲೆಯ ವೆಬ್‌ಸೈಟ್‌ನಲ್ಲಿ ಕರಡು ಮತದಾರರ ಪಟ್ಟಿಯ ವಿವರ ಇರಲಿದ್ದು, ಸಾರ್ವಜನಿಕರು ಇದನ್ನು ಪರಿಶೀಲಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.

ಒಂದು ವೇಳೆ ಯಾರದೇ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ ತಕ್ಷಣ ಹೆಸರು ಸೇರ್ಪಡೆಗೆ ನಿಗದಿತ ಅರ್ಜಿ ಕೊಟ್ಟು ಹೆಸರನ್ನು ಸೇರಿಸ ಬಹುದು ಹಾಗೂ ಮುಂದಿನ ಚುನಾವಣೆಯಲ್ಲಿ (ಲೋಕಸಭಾ) ಮತ ಚಲಾಯಿಸಬಹುದು. ಇದಕ್ಕಾಗಿ ತಮ್ಮ ಬಿಎಲ್‌ಓಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

10.37 ಲಕ್ಷ ಮತದಾರರು: ಕರಡು ಮತದಾರರ ಪಟ್ಟಿಯಂತೆ ಸದ್ಯ ಜಿಲ್ಲೆಯಲ್ಲಿರುವ ಒಟ್ಟು ಮತದಾರರ ಸಂಖ್ಯೆ 10,37,677. ಇವರಲ್ಲಿ ಪುರುಷ ಮತದಾರರ ಸಂಖ್ಯೆ 5,00,924 ಆದರೆ, ಮಹಿಳಾ ಮತದಾರರ ಸಂಖ್ಯೆ 5,38,737. ಜಿಲ್ಲೆಯ 16 ಮಂದಿ ತೃತೀಯ ಲಿಂಗ ಮತದಾರರು ಇದ್ದಾರೆ ಎಂದವರು ತಿಳಿಸಿದರು.

ಕರಡು ಮತದಾರರ ಪಟ್ಟಿಯ ಕುರಿತಂತೆ ಯಾವುದೇ ದೂರು ಅಥವಾ ಆಕ್ಷೇಪಣೆಗಳಿದ್ದಲ್ಲಿ ನಾಳೆಯಿಂದ ಡಿ.9ರವರೆಗೆ ಲಿಖಿತ ದೂರು ಸಲ್ಲಿಸಬಹುದು ಎಂದ ಜಿಲ್ಲಾಧಿಕಾರಿಗಳು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಮೃತ ವ್ಯಕ್ತಿಯ ಹೆಸರು ತೆಗೆಯಲು, ಹೆಸರನ್ನು ಬೇರೊಂದು ಕಡೆಗೆ ವರ್ಗಾಯಿಸಲು ಅನುಕೂಲವಾಗುವಂತೆ ತಮ್ಮೂರಿನ ಮತಟ್ಟೆಗಳಲ್ಲಿ ವಿಶೇಷ ಅಭಿಯಾನ ನಡೆಯಲಿದೆ. ಈ ದಿನಗಳಂದು ಬಿಎಲ್‌ಓಗಳು ಅಲ್ಲಿ ಲಭ್ಯವಿರುವರು ಎಂದರು.

ವಿಶೇಷ ಅಭಿಯಾನ ನವೆಂಬರ್ 18, ನ.19, ಡಿ.3 ಮತ್ತು ಡಿ.4ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಮೃತ ಮತದಾರರ ಹೆಸರು ತೆಗೆಯಲು ಫಾರ್ಮ್ ನಂ7, ಹೆಸರು ಸೇರ್ಪಡೆಗೆ ಫಾರ್ಮ್ ನಂ.8 ಹಾಗೂ ಮತಗಟ್ಟೆ ವರ್ಗಾವಣೆಗೆ ಫಾರ್ಮ್ ನಂ.8ಎ ಅನ್ನು ಭರ್ತಿ ಮಾಡಿ ನೀಡಬಹುದು ಎಂದು ಡಾ.ವಿದ್ಯಾಕುಮಾರಿ ವಿವರಿಸಿದರು.

ಪಟ್ಟಿಯ ಕುರಿತಂತೆ ಬರುವ ದೂರು ಹಾಗೂ ಆಕ್ಷೇಪಣೆಗಳನ್ನು ಡಿ.26ರಂದು ವಿಲೇವಾರಿ ಮಾಡಲಾಗುತ್ತದೆ. 2024ರ ಜನವರಿ 5ರಂದು ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಜಿಲ್ಲೆಯಲ್ಲಿ ಮನೆಮನೆಗೆ ಭೇಟಿ ನೀಡಿ ಇಪಿ ಅನುಪಾತದ ಪರಿಷ್ಕರಣೆ ನಡೆಯುತ್ತಿದೆ ಎಂದೂ ಅವರು ಹೇಳಿದರು.

ಜಿಲ್ಲೆಯ ಒಟ್ಟು ಜನಸಂಖ್ಯೆಯಲ್ಲಿ ಮತದಾರರ ಪ್ರಮಾಣ ಸಾಮಾನ್ಯವಾಗಿ ಶೇ.65ರಿಂದ 70 ಇರಬೇಕಿದ್ದು, ಇದಕ್ಕೆ ಇಪಿ ಅನುಪಾತ ಎಂದು ಕರೆಯ ಲಾಗುತ್ತದೆ. ಆದರೆ ಜಿಲ್ಲೆಯಲ್ಲಿ ಇದು ಶೇ.81ರಷ್ಟಾಗಿದೆ. ಇದಕ್ಕೆ ಮೃತವ್ಯಕ್ತಿಗಳ ಹೆಸರನ್ನು ಪಟ್ಟಿಯಿಂದ ತೆಗೆಯದಿರುವುದು, ತಾವು ಎಲ್ಲಿರುತ್ತೇವೊ ಅಲ್ಲಿನ ಬದಲು, ತಮ್ಮ ಊರಿನಲ್ಲೂ ಅವರ ಹೆಸರು ಮತದಾರರ ಪಟ್ಟಿಯಲ್ಲಿರುವುದು ಇದಕ್ಕೆ ಕಾರಣ. ಹೀಗಾಗಿ ಮನೆಮನೆಗೆ ಭೇಟಿ ನೀಡಿ ಇಲ್ಲದವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X